AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!
ದೇವಿಯ ಸನ್ನಿಧಿಯಲ್ಲಿ ಕಳ್ಳ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Aug 10, 2022 | 5:15 PM

Share

ಮಧ್ಯಪ್ರದೇಶದ ಜಬಲ್ ಪುರ (Jabalpur) ಜಿಲ್ಲೆಯ ಸುಖಾ ಹೆಸರಿನ ಗ್ರಾಮದಲ್ಲಿ ಕಳ್ಳನೊಬ್ಬ ದೇವಸ್ಥಾನದ ಒಳಭಾಗದಲ್ಲಿರುವ ಗರ್ಭಗುಡಿಯನ್ನು ಪ್ರವೇಶಿಸಿ ಅಲ್ಲಿದ್ದ ಹುಂಡಿ ಪೆಟ್ಟಿಗೆಯನ್ನು (offering box) ಹೊತ್ತೊಯ್ಯುವ ಮುನ್ನ ಅಲ್ಲಿರುವ ದೇವಿಯ (Goddess) ಮೂರ್ತಿಗೆ ಶ್ರದ್ಧೆಯಿಂದ ಕೈಮುಗಿಯುವುದು ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ ಮತ್ತು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಳ್ಳನ ನಡಾವಳಿ ನೆಟ್ಟಿಗರ ಗಮನ ಸೆಳೆಯುತ್ತಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿ ಸಾವಿರಾರು ವ್ಯೂಗಳನ್ನು ಕಲೆಹಾಕಿಕೊಂಡಿದೆ.

ವಿಡಿಯೋದಲ್ಲಿ ಮುಖಕ್ಕೆ ಮುಸುಕು ಹಾಕಿಕೊಂಡಿರುವ ಕಳ್ಳ ಪರದೆಯನ್ನು ಸರಿಸಿ ಗರ್ಭಗುಡಿಯನ್ನು ಪ್ರವೇಶಿಸುತ್ತಾನೆ ಅದರೆ ದೇವಿಯ ದೊಡ್ಡ ವಿಗ್ರಹವನ್ನು ಕಂಡು ಅವನು ಸ್ತಂಭೀಭೂತನಾಗುತ್ತಾನೆ.

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ದೇವಸ್ಥಾನದ ಎರಡು ಗಂಟೆಗಳು ಮತ್ತು ಸ್ಥಳೀಯರು ದೇವಿಗೆ ಕಾಣಿಕೆಯಾಗಿ ಅರ್ಪಸಿದ ಬೆಲೆಬಾಳುವ ವಸ್ತುಗಳನ್ನು ಸಹ ಕಳ್ಳ ಕದ್ದಿರುವನೆಂದು ಪೊಲೀಸರು ಹೇಳಿದ್ದಾರೆ. ವಿಡಿಯೋ ಟ್ವಿಟರ್ ನಲ್ಲಿ ಪೋಸ್ಟ್ ಆದಾಗಿನಿಂದ ಅದನ್ನು ನೋಡಿರುವ ಜನ ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

‘ಭಕ್ತನೊಬ್ಬ ದೇವರ ಸನ್ನಿಧಾನದಿಂದ ಏನನ್ನಾದರೂ ಕಳುವು ಮಾಡಿದರೆ ಅದು ಕಳ್ಳತನವೆನಿಸಿಕೊಳ್ಳುವುದಿಲ್ಲ. ತನ್ನ ಕಷ್ಟದ ಸಮಯದಲ್ಲಿ ಒಬ್ಬ ಭಕ್ತ ದೇವರಿಂದ ಸಹಾಯ ಯಾಚಿಸುತ್ತಾನೆ!’ ಅಂತ ಒಬ್ಬರು ಟ್ಟೀಟ್ ಮಾಡಿದ್ದಾರೆ.

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ