AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ ಮುದ್ದಾದ ದೃಶ್ಯ

ಸೋಷಿಯಲ್‌ ಮೀಡಿಯಾದಲ್ಲಿ ಮೂಕ ಪ್ರಾಣಿಗಳಿಗೆ ಸಂಬಂಧಪಟ್ಟಂತಹ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಮುದ್ದಾದ ಪ್ರಾಣಿಗಳ ಕುರಿತ ಇಂತಹ ವಿಡಿಯೋಗಳನ್ನು ವೀಕ್ಷಿಸುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಅವುಗಳ ತುಂಟಾಟವಿರಲಿ, ಮುಗ್ಧತೆ ಇರಲಿ ಎಲ್ಲವೂ ಚೆನ್ನ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ಆಗಿದ್ದು, ಮರಿ ಆನೆಯೊಂದು ಓಡುತ್ತಾ ತನ್ನ ತಾಯಿಗಾಗಿ ಹುಡುಕಾಟ ನಡೆಸುತ್ತಿರುವ ದೃಶ್ಯ ನೋಡುಗರ ಮನ ಗೆದ್ದಿದೆ.

Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ  ಮುದ್ದಾದ ದೃಶ್ಯ
ಸಾಂದರ್ಭಿಕ ಚಿತ್ರImage Credit source: National Geographic
ಮಾಲಾಶ್ರೀ ಅಂಚನ್​
| Edited By: |

Updated on: May 05, 2024 | 4:02 PM

Share

ಯಾವುದೇ ಪ್ರಾಣಿಯ ಮರಿಯಾದರೂ ಸರಿ, ಆ ಪುಟ್ಟ ಪುಟ್ಟ ಮುಗ್ಧ ಜೀವಿಗಳು ಯಾವಾಗಲೂ ತುಂಟಾಟವಾಡುತ್ತಾ ಇರುತ್ತವೆ. ಇವುಗಳ ತುಂಟಾಟ ನೋಡುವುದೇ ಒಂದು ಮಜಾ. ಮೂಕ ಪ್ರಾಣಿಗಳ ಮುಗ್ಧತೆಯ ಆಟ, ಓಟ ಮನಸ್ಸಿಗೆ ಒಂದು ರೀತಿಯ ಮುದ ನೀಡುತ್ತದೆ. ಅದರಲ್ಲೂ ಈ ಮುದ್ದಾದ ಮರಿ ಆನೆಗಳ ತುಂಟಾಟವನ್ನು ನೋಡುವುದೇ ಒಂದು ಚೆಂದ. ಸದ್ಯ ಅಂತಹದ್ದೊಂದು ಮುದ್ದಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮರಿ ಆನೆಯೊಂದು ಅಮ್ಮಾ ಎಲ್ಲಿದ್ದೀಯಾ ಎನ್ನುತ್ತಾ, ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತಾ ತನ್ನ ತಾಯಿಯ ಬಳಿ ಓಡಿ ಹೋಗಿದೆ. ಈ ಮುದ್ದಾದ ದೃಶ್ಯ ನೋಡುಗರ ಮನ ಸೆಳೆದಿದೆ.

ಈ ದೃಶ್ಯವನ್ನು ಕೀನ್ಯಾದ ಅಂಬೋಸೆಲಿ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿ ಛಾಯಗ್ರಾಹಕ ಫಿಲಿಪ್ ಅವರು ಸೆರೆ ಹಿಡಿದಿದ್ದಾರೆ. ಮತ್ತು ಈ ವಿಡಿಯೋವನ್ನು ಅವರು (@sightingsbyphil) ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ವೈರಲ್‌ ವಿಡಿಯೋದಲ್ಲಿ ಮರಿ ಆನೆಯೊಂದು ಅಮ್ಮಾ ಎಲ್ಲಿದ್ದೀಯಾ, ನಾನ್‌ ಬರ್ತಿದ್ದೀನಿ ಎನ್ನುತ್ತಾ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ತಾಯಿಯ ಬಳಿ ಕಂದಮ್ಮ ಖುಷಿಯಿಂದ ಓಡೋಡಿ ಬರುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಏಪ್ರಿಲ್ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಐದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪುಟಾಣಿ ಆನೆಯ ಮುದ್ದಾದ ವಿಡಿಯೋವನ್ನು ಕಂಡು ನೆಟ್ಟಿಗರಂತೂ ಫುಲ್‌ ಖುಷ್ಆಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?