AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ ಮುದ್ದಾದ ದೃಶ್ಯ

ಸೋಷಿಯಲ್‌ ಮೀಡಿಯಾದಲ್ಲಿ ಮೂಕ ಪ್ರಾಣಿಗಳಿಗೆ ಸಂಬಂಧಪಟ್ಟಂತಹ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಮುದ್ದಾದ ಪ್ರಾಣಿಗಳ ಕುರಿತ ಇಂತಹ ವಿಡಿಯೋಗಳನ್ನು ವೀಕ್ಷಿಸುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಅವುಗಳ ತುಂಟಾಟವಿರಲಿ, ಮುಗ್ಧತೆ ಇರಲಿ ಎಲ್ಲವೂ ಚೆನ್ನ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ಆಗಿದ್ದು, ಮರಿ ಆನೆಯೊಂದು ಓಡುತ್ತಾ ತನ್ನ ತಾಯಿಗಾಗಿ ಹುಡುಕಾಟ ನಡೆಸುತ್ತಿರುವ ದೃಶ್ಯ ನೋಡುಗರ ಮನ ಗೆದ್ದಿದೆ.

Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ  ಮುದ್ದಾದ ದೃಶ್ಯ
ಸಾಂದರ್ಭಿಕ ಚಿತ್ರImage Credit source: National Geographic
ಮಾಲಾಶ್ರೀ ಅಂಚನ್​
| Edited By: |

Updated on: May 05, 2024 | 4:02 PM

Share

ಯಾವುದೇ ಪ್ರಾಣಿಯ ಮರಿಯಾದರೂ ಸರಿ, ಆ ಪುಟ್ಟ ಪುಟ್ಟ ಮುಗ್ಧ ಜೀವಿಗಳು ಯಾವಾಗಲೂ ತುಂಟಾಟವಾಡುತ್ತಾ ಇರುತ್ತವೆ. ಇವುಗಳ ತುಂಟಾಟ ನೋಡುವುದೇ ಒಂದು ಮಜಾ. ಮೂಕ ಪ್ರಾಣಿಗಳ ಮುಗ್ಧತೆಯ ಆಟ, ಓಟ ಮನಸ್ಸಿಗೆ ಒಂದು ರೀತಿಯ ಮುದ ನೀಡುತ್ತದೆ. ಅದರಲ್ಲೂ ಈ ಮುದ್ದಾದ ಮರಿ ಆನೆಗಳ ತುಂಟಾಟವನ್ನು ನೋಡುವುದೇ ಒಂದು ಚೆಂದ. ಸದ್ಯ ಅಂತಹದ್ದೊಂದು ಮುದ್ದಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮರಿ ಆನೆಯೊಂದು ಅಮ್ಮಾ ಎಲ್ಲಿದ್ದೀಯಾ ಎನ್ನುತ್ತಾ, ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತಾ ತನ್ನ ತಾಯಿಯ ಬಳಿ ಓಡಿ ಹೋಗಿದೆ. ಈ ಮುದ್ದಾದ ದೃಶ್ಯ ನೋಡುಗರ ಮನ ಸೆಳೆದಿದೆ.

ಈ ದೃಶ್ಯವನ್ನು ಕೀನ್ಯಾದ ಅಂಬೋಸೆಲಿ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿ ಛಾಯಗ್ರಾಹಕ ಫಿಲಿಪ್ ಅವರು ಸೆರೆ ಹಿಡಿದಿದ್ದಾರೆ. ಮತ್ತು ಈ ವಿಡಿಯೋವನ್ನು ಅವರು (@sightingsbyphil) ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ವೈರಲ್‌ ವಿಡಿಯೋದಲ್ಲಿ ಮರಿ ಆನೆಯೊಂದು ಅಮ್ಮಾ ಎಲ್ಲಿದ್ದೀಯಾ, ನಾನ್‌ ಬರ್ತಿದ್ದೀನಿ ಎನ್ನುತ್ತಾ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ತಾಯಿಯ ಬಳಿ ಕಂದಮ್ಮ ಖುಷಿಯಿಂದ ಓಡೋಡಿ ಬರುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಏಪ್ರಿಲ್ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಐದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪುಟಾಣಿ ಆನೆಯ ಮುದ್ದಾದ ವಿಡಿಯೋವನ್ನು ಕಂಡು ನೆಟ್ಟಿಗರಂತೂ ಫುಲ್‌ ಖುಷ್ಆಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್