AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ, ಬೆಕ್ಕಿನ ಮರಿಗಳನ್ನು ಇಲ್ಲಿ ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ಬಿಡಿ; ಬ್ಯಾನರ್ ವೈರಲ್

ಅದೆಷ್ಟೋ ಜನರು ಕರುಣೆಯಿಲ್ಲದೆ ಇನ್ನೂ ಕಣ್ಣು ಬಿಟ್ಟು ಪ್ರಪಂಚವನ್ನು ಕಾಣದಿರುವ ಪುಟ್ಟ ನಾಯಿ ಮರಿಗಳನ್ನು, ಬೆಕ್ಕಿನ ಮರಿಗಳನ್ನು ತಂದು ಬೀದಿ ಬದಿಗಳಲ್ಲಿರುವ ಪೊದೆಗಳ ಬಳಿ ಒಟ್ಟು ಹೋಗುತ್ತಾರೆ. ಇಂತಹ ಅಮಾನವೀಯ ಕೃತ್ಯಗಳು ನಡೆಯುತ್ತಲೇ ಇರುತ್ತವೆ, ಇಂತಹವರಿಗೆ ಸರಿಯಾಗಿ ಬುದ್ದಿ ಕಲಿಸಲೆಂದೇ, ಯಾರೋ ಪುಣ್ಯಾತ್ಮರು  ಇಲ್ಲೊಂದು ಬೀದಿ ಬದಿಯಲ್ಲಿ ʼನಾಯಿ, ಬೆಕ್ಕಿನ ಮರಿಯನ್ನು ತಂದು ಇಲ್ಲಿ ಬಿಡುವವರು, ನಿಮ್ಮ ಹೆಂಡತಿ ಮಕ್ಕಳನ್ನು ಸಹ ತಂದು ಇಲ್ಲೇ ಬಿಡಿ ಯಾರಾದರೂ ಸಾಕುತ್ತಾರೆʼ ಎಂಬ ಅದ್ಭುತ ಬರಹವನ್ನು ಬರೆದಿರುವ ಬ್ಯಾನರ್  ಹಾಕಿದ್ದಾರೆ. ಈ ಕುರಿತ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. 

ನಾಯಿ, ಬೆಕ್ಕಿನ ಮರಿಗಳನ್ನು ಇಲ್ಲಿ ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ಬಿಡಿ; ಬ್ಯಾನರ್ ವೈರಲ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 20, 2023 | 12:56 PM

Share

ಈ ಕೆಲವೊಬ್ರು ಹೆಂಗಂದ್ರೆ ತಮ್ಮ ಮನೆಯಲ್ಲಿ ನಾಯಿ ಅಥವಾ ಬೆಕ್ಕು ಮರಿ ಹಾಕಿದ್ರೆ, ಆ ಮರಿಗಳು ಹೆಣ್ಣಾಗಿದ್ದರೆ, ಇನ್ನೂ ಸರಿಯಾಗಿ ಕಣ್ಣು ಬಿಟ್ಟು ಪ್ರಪಂಚವನ್ನೇ ನೋಡದ ಆ ಮುಗ್ಧ ಜೀವಿಗಳನ್ನು  ತಂದು ಬೀದಿ ಬದಿಗಳಲ್ಲಿ  ಬಿಡುಹೋಗುತ್ತಾರೆ.  ಪಾಪ ಆ ಮರಿಗಳು ಹಸಿವಿನಿಂದ ಬೀದಿಯಲ್ಲಿ ಅಳುತ್ತಾ, ಚೀರುತ್ತಾ ಇರುತ್ತವೆ.  ಯಾರಾದರೂ ಕರುಣೆ ತೋರಿ ಆ ಮರಿಗಳನ್ನು ಮನೆಗೆ ತೆಗೆದುಕೊಂಡು ಹೋದ್ರೆ, ಅವುಗಳಿಗೆ ಒಳ್ಳೆಯ ಜೀವನ ಸಿಗುತ್ತೆ, ಆದರೆ ಆ ಮುಗ್ಧ ಜೀವಿಗಳನ್ನು  ಹಾಗೇನೆ ಬೀದಿಲಿ ಬಿಟ್ಟರೆ ಪಾಪ ಅವುಗಳು ಹಸಿವಿನಿಂದ ಸಾಯಲುಬಹುದು.  ಈ ರೀತಿ ಅದೆಷ್ಟೋ ಜನರು ಮಾನವೀಯತೆಯನ್ನು ಮರೆತು ಬೆಕ್ಕು, ನಾಯಿ ಮರಿಗಳನ್ನು ಬೀದಿಯಲ್ಲಿ ತಂದು ಎಸೆದುಬಿಡುತ್ತಾರೆ. ಇಂತಹವರಿಗೆ ಬುದ್ಧಿ ಕಲಿಸಬೇಕೆಂದೇ,  ಯಾರೋ ಪುಣ್ಯಾತ್ಮರು ಇಲ್ಲೊಂದು ಬೀದಿ ಬದಿಯಲ್ಲಿ ನಾಯಿ ಬೆಕ್ಕಿನ ಮರಿಗಳನ್ನು ಬಿಡುವ ಹಾಗೆ ನಿಮ್ಮ ಹೆಂಡತಿ ಮಕ್ಕಳನ್ನು ಸಹ ಬೀದಿಗೆ ಬಿಡಿ, ಅವರನ್ನು ಯಾರಾದರೂ ಸಾಕುತ್ತಾರೆ ಎಂಬ ಅದ್ಭುತವಾದ ಬ್ಯಾನರ್ ಒಂದನ್ನು ಹಾಕಿದ್ದಾರೆ. ಈ ಕುರಿತ ವಿಡಿಯೋ ಇದೀಗ  ವೈರಲ್ ಆಗಿದ್ದು, ನೆಟ್ಟಿಗರಿಂದ ಭಾರೀ ಮೆಚ್ಚುಗೆಯನ್ನು ಪಡೆದುಕೊಂಡಿದೆ.

@pommi_mangalore ಎಂಬ ಇನ್ಸ್ಟಾಗ್ರಾಮ್ ಪೇಜ್​​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದಲ್ಲಿ ನಾಯಿ ಮತ್ತು ಬೆಕ್ಕಿನ ಮರಿಗಳನ್ನು ತಂದು ಬಿಡುವ ಜಾಗದಲ್ಲಿ ಒಂದು ಬ್ಯಾನರ್ ಅನ್ನು  ನೇತು ಹಾಕಲಾಗಿದ್ದು, ಅದರಲ್ಲಿ ಇಲ್ಲಿ ನಾಯಿ ಮರಿ, ಬೆಕ್ಕಿನ ಮರಿ ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಸಹ ಇಲ್ಲೇ ತಂದು ಬಿಡಿ ಯಾರಾದರೂ ಸಾಕುತ್ತಾರೆ, ಎಂಬ ಬರಹವನ್ನು  ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: ಭಾರೀ ಸುದ್ದಿಯಾಗಿದ್ದ ಲವ್ ಗುರು ಮಾತುಕನಾಥ್ – ಜೂಲಿ ಲವ್ ಸ್ಟೋರಿ, ಈಗ ಬ್ರೇಕಪ್​​​ ಮಾಡಿಕೊಂಡಿದ್ದು ಏಕೆ? 

ವೈರಲ್​​ ವಿಡಿಯೋ ಇಲ್ಲಿದೆ:

ನವೆಂಬರ್ 28ರಂದು ಹಂಚಿಕೊಳ್ಳಲಾದ ಈ ವಿಡಿಯೋ  1.4 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 78.8K ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಗಳು ಹರಿದುಬಂದಿವೆ. ಒಬ್ಬ ಬಳಕೆದಾರರು ʼ ಇದು ಸರಿಯಾಗಿ ಹಾಕಿದ್ದೀರಾ, ನಾನು ದಿನ ಕೆಲಸಕ್ಕೆ ಹೋಗೋವಾಗ ರಸ್ತೆ ಬದಿಗಳಲ್ಲಿರುವ ಪೊದೆಯ ಹಿಂದೆ ಎಷ್ಟೋ ನಾಯಿ ಮರಿಗಳು ಇರುತ್ತವೆ, ಪಾಪ ಇನ್ನೂ  ಸರಿಯಾಗಿ ಕಣ್ಣು ಸಹ ತೆರೆಯದ ಮುಗ್ಧ ಜೀವಿಗಳನ್ನು ಒಂದು ಚೂರು ಕಣಿಕರವಿಲ್ಲದೆ ಬೀದಿಲಿ ಎಸೆದು ಹೋಗುವವರಿಗೆ  ಈ ಬ್ಯಾನರ್ ಹೇಳಿ ಮಾಡಿಸಿದಂತಿದೆʼ ಎಂದು ಹೇಳಿದ್ದಾರೆ.  ಇನ್ನೊಬ್ಬ ಬಳಕೆದಾರರು ಇದು ಇದು ಆಕ್ಚುಲಿ ಚೆನ್ನಾಗಿರೋದು ಅಂದ್ರೆ ಎಂದು ಕಮೆಂಟ್ ಮಾಡಿದ್ದಾರೆ.  ಇನ್ನೂ ಅನೇಕರು ಈ ಬ್ಯಾನರ್  ಕಂಡು ಜನರಿಗೆ ಇದು ಒಂದೊಳ್ಳೆ ಸಂದೇಶ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ:

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?