Viral Video : ವ್ಯಾನಿನಲ್ಲಿ ಸ್ವಿಮ್ಮಿಂಗ್ ಫೂಲ್ ನಿರ್ಮಿಸಿದ ಯುವಕರು, ಇದು ಸೆಖೆಗೆ ಒಳ್ಳೆಯದು

ಸುಡು ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಕೆಲವೆಡೆ ವರುಣ ಕೃಪೆ ತೋರಿಸಿದ್ದಾನೆ. ಆದರೆ ಕೆಲವರಂತು ಈ ಸೆಕೆಯಿಂದ ತಪ್ಪಿಸಿಕೊಳ್ಳಲು ನಾನಾ ರೀತಿಯ ಐಡಿಯಾಗಳನ್ನು ಮಾಡುತ್ತಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮೂವರು ಯುವಕರು ಹಳೆಯ ಪಿಕಪ್ ವ್ಯಾನ್‌ನ ಹಿಂಭಾಗದಲ್ಲಿ ಸ್ವಿಮ್ಮಿಂಗ್ ಫೂಲ್ ನಿರ್ಮಿಸಿ ಪೂಲ್ ಪಾರ್ಟಿ ಮಾಡುತ್ತಿದ್ದಾರೆ. ಯುವಕರ ಈ ಜುಗಾಡ್ ಐಡಿಯಾಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.

Viral Video : ವ್ಯಾನಿನಲ್ಲಿ ಸ್ವಿಮ್ಮಿಂಗ್ ಫೂಲ್ ನಿರ್ಮಿಸಿದ ಯುವಕರು, ಇದು ಸೆಖೆಗೆ ಒಳ್ಳೆಯದು
ವೈರಲ್​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 20, 2024 | 2:26 PM

ನಮ್ಮಲ್ಲಿ ಹೊಸ ಹೊಸ ಪ್ರತಿಭೆಗಳು ತಮ್ಮ ವಿಭಿನ್ನವಾದ ಐಡಿಯಾದ ಮೂಲಕವೇ ಸುದ್ದಿಯಾಗುತ್ತಿರುತ್ತಾರೆ. ವಿಭಿನ್ನ ಶೈಲಿಯ ದೇಸಿ ಉಪಾಯಗಳ ಮೂಲಕ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವವರಿಗೇನು ಕೊರತೆಯಿಲ್ಲ. ಸದ್ಯಕ್ಕೆ ಬಿಸಿಲಿನ ಝಳವು ಜೋರಾಗಿದೆ. ಬಿಸಿಲಿನಿಂದ ಮುಕ್ತಿ ಪಡೆಯಲು ಎಲ್ಲರೂ ಒಂದಷ್ಟು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಕೆಲವರು ತಮ್ಮ ಮನೆಗೆ ಎಸಿ ಅಳವಡಿಸಿದರೆ, ಕೆಲವರು ಕೂಲರ್ ಅಳವಡಿಸಿಕೊಳ್ಳುತ್ತಾರೆ.

ಆದರೆ ಇಲ್ಲೊಂದು ಕಡೆ ಮೂವರು ಸ್ನೇಹಿತರು ಸೇರಿ ವ್ಯಾನ್ ನಲ್ಲಿ ಈಜುಕೊಳವನ್ನು ನಿರ್ಮಿಸಿಕೊಂಡಿದ್ದಾರೆ. ಹಳೆಯ ಪಿಕಪ್ ವ್ಯಾನ್‌ನ ಹಿಂಭಾಗದಲ್ಲಿ ಮೂವರು ಸ್ನೇಹಿತರು ಟಾರ್ಪಾಲಿನ್ ಹಾಕಿ, ನೀರು ತುಂಬಿಸಿ ಈಜು ಕೊಳ ಮಾಡಿಕೊಂಡಿರುವುದನ್ನು ಕಾಣಬಹುದು. ಅದಲ್ಲದೇ ಮಧ್ಯದಲ್ಲಿ ಕೊಡೆ ಹಾಗೂ ಟೇಬಲ್ ಇರಿಸಿಕೊಂಡು, ಊಟಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮೂವರು ಯುವಕರು ಪೂಲ್ ಪಾರ್ಟಿಯನ್ನು ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವೀಡಿಯೊವನ್ನು ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ X (ಹಿಂದಿನ Twitter) ನಲ್ಲಿ @The90sPanda ಹೆಸರಿನ ಖಾತೆಯೊಂದಿಗೆ ಹಂಚಿಕೊಳ್ಳಲಾಗಿದೆ. ‘ಹುಡುಗರು ಮಾತ್ರ ಎಲ್ಲಿಯಾದರೂ ಸರಿಯೇ ತಮ್ಮದೇ ಆದ ಸಂತೋಷವನ್ನು ಸೃಷ್ಟಿಸಬಲ್ಲರು’ ಎಂದು ವೀಡಿಯೊಗೆ ಶೀರ್ಷಿಕೆಯನ್ನು ಬರೆಯಲಾಗಿದೆ. ಈ ವಿಡಿಯೋ 30 ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ನೆಟ್ಟಿಗರು ನಾನಾ ರೀತಿಯ ಮೆಚ್ಚುಗೆ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು