AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ! ನೆಟ್ಟಿಗರು ದಿಗ್ಭ್ರಮೆಗೊಂಡ ಫೋಟೊ ವೈರಲ್​

ಇದೀಗ ವೈರಲ್ ಆದ ಫೋಟೊ ನೆಟ್ಟಿಗರು ಗಮನ ಸೆಳೆದಿದೆ. ಮೂರು ದೈತ್ಯ ನಾಗರ ಹಾವು ಮರವನ್ನೇರಿದೆ. ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿರುವಾಗ ಚಿತ್ರ ಕ್ಲಿಕ್ಕಿಸಲಾಗಿದೆ.

Viral Photo: ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ! ನೆಟ್ಟಿಗರು ದಿಗ್ಭ್ರಮೆಗೊಂಡ ಫೋಟೊ ವೈರಲ್​
ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ!
TV9 Web
| Updated By: shruti hegde|

Updated on: Nov 18, 2021 | 12:23 PM

Share

ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಪ್ರಾಣಿಗಳ ತುಂಟಾಟ ಮೋಜು ಮಸ್ತಿಯದ್ದು. ವೈರಲ್​ ಆಗುವ ಇನ್ನು ಕೆಲವು ಭಯಾನಕ ವಿಡಿಯೊಗಳು ಜನರಿಗೆ ಹೆಚ್ಚು ಕುತೂಹಲ ಕೆರಳಿಸುತ್ತವೆ. ಅವುಗಳಲ್ಲಿ ಕೆಲವು ತುಂಬಾ ಆಸಕ್ತಿದಾಯಕವಾಗಿರುತ್ತವೆ. ಇದೀಗ ವೈರಲ್ ಆದ ಫೋಟೊ ನೆಟ್ಟಿಗರು ಗಮನ ಸೆಳೆದಿದೆ. ಮಹಾರಾಷ್ಟ್ರದ ಮೆಲ್ಘಾಟ್ ಕಾಡಿನಲ್ಲಿ ಸೆರೆಹಿಡಿಯಲಾದ ಚಿತ್ರ ಇದಾಗಿದ್ದು, ಮೂರು ದೈತ್ಯ ನಾಗರ ಹಾವು ಮರವನ್ನೇರಿದೆ. ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿರುವಾಗ ಚಿತ್ರ ಕ್ಲಿಕ್ಕಿಸಲಾಗಿದೆ.

ಇಂಡಿಯನ್ ವೈಲ್ಡ್ ಲೈಫ್ ಹೆಸರಿನ ಫೇಸ್ ಬುಕ್ ಗ್ರೂಪ್​ನಲ್ಲಿ ಫೋಟೊ ಹಂಚಿಕೊಳ್ಳಲಾಗಿದೆ. ಮ್ಯಾಜಿಕಲ್ ಮೆಲ್ಘಾಟ್, ಹರಿಸಲ್ ಕಾಡಿನಲ್ಲಿ 3 ನಾಗರಹಾವುಗಳನ್ನು ಗುರುತಿಸಲಾಗಿದೆ! ಎಂಬ ಶೀರ್ಷಿಕೆ ನೀಡುವ ಮೂಲಕ ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಫುಲ್ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಸುಶಾಂತಾ ನಂದಾ ಅವರು ಕೂಡಾ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊ ನೋಡಿದಂತೆ, ಕಪ್ಪು ಬಣ್ಣದ ಮೂರು ನಾಗರ ಹಾವುಗಳು ಮರವನ್ನು ಸುತ್ತಿಕೊಂಡು ನಮ್ಮನ್ನೇ ನೋಡುತ್ತಿರುವಂತೆ ಭಾಸವಾಗುವ ದೃಶ್ಯ ಒಮ್ಮೆಲೆ ಮೈ ಜುಮ್ ಅನಿಸುವಂತಿದೆ.

ಅಧಿಕಾರಿ ಸುಶಾಂತಾ ನಂದಾ ಅವರ ಟ್ವೀಟ್ಅನ್ನು ಸುಮಾರು 2,200 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಅವು ಸುಂದರವಾಗಿದೆ ಆದರೆ ದೂರದಲ್ಲಿದ್ದರೆ ಮಾತ್ರ! ಹತ್ತಿರಕ್ಕೆ ಬಂದರೆ ಬೆವರುತ್ತೇವೆ ಎಂಬ ಶೀರ್ಷಿಕೆ ನೀಡುವ ಮೂಲಕ ಪೋಸ್ಟ್ ಹಂಚಿಕೊಳ್ಳಲಾಗಿದೆ. ಕೆಲವರು ಚಿತ್ರಗಳನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವರು, ನಾನು ಆ ಸ್ಥಳದಲ್ಲಿದ್ದರೆ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗುತ್ತಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ವೇಗವಾಗಿ ಓಡಿ ಬಂದು ಆಸ್ಪತ್ರೆಯ ಎಸ್ಕಲೇಟರ್ ಏರಿದ ಗಾಯಾಳು ಜಿಂಕೆ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ