AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ! ನೆಟ್ಟಿಗರು ದಿಗ್ಭ್ರಮೆಗೊಂಡ ಫೋಟೊ ವೈರಲ್​

ಇದೀಗ ವೈರಲ್ ಆದ ಫೋಟೊ ನೆಟ್ಟಿಗರು ಗಮನ ಸೆಳೆದಿದೆ. ಮೂರು ದೈತ್ಯ ನಾಗರ ಹಾವು ಮರವನ್ನೇರಿದೆ. ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿರುವಾಗ ಚಿತ್ರ ಕ್ಲಿಕ್ಕಿಸಲಾಗಿದೆ.

Viral Photo: ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ! ನೆಟ್ಟಿಗರು ದಿಗ್ಭ್ರಮೆಗೊಂಡ ಫೋಟೊ ವೈರಲ್​
ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ!
Follow us
TV9 Web
| Updated By: shruti hegde

Updated on: Nov 18, 2021 | 12:23 PM

ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಪ್ರಾಣಿಗಳ ತುಂಟಾಟ ಮೋಜು ಮಸ್ತಿಯದ್ದು. ವೈರಲ್​ ಆಗುವ ಇನ್ನು ಕೆಲವು ಭಯಾನಕ ವಿಡಿಯೊಗಳು ಜನರಿಗೆ ಹೆಚ್ಚು ಕುತೂಹಲ ಕೆರಳಿಸುತ್ತವೆ. ಅವುಗಳಲ್ಲಿ ಕೆಲವು ತುಂಬಾ ಆಸಕ್ತಿದಾಯಕವಾಗಿರುತ್ತವೆ. ಇದೀಗ ವೈರಲ್ ಆದ ಫೋಟೊ ನೆಟ್ಟಿಗರು ಗಮನ ಸೆಳೆದಿದೆ. ಮಹಾರಾಷ್ಟ್ರದ ಮೆಲ್ಘಾಟ್ ಕಾಡಿನಲ್ಲಿ ಸೆರೆಹಿಡಿಯಲಾದ ಚಿತ್ರ ಇದಾಗಿದ್ದು, ಮೂರು ದೈತ್ಯ ನಾಗರ ಹಾವು ಮರವನ್ನೇರಿದೆ. ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿರುವಾಗ ಚಿತ್ರ ಕ್ಲಿಕ್ಕಿಸಲಾಗಿದೆ.

ಇಂಡಿಯನ್ ವೈಲ್ಡ್ ಲೈಫ್ ಹೆಸರಿನ ಫೇಸ್ ಬುಕ್ ಗ್ರೂಪ್​ನಲ್ಲಿ ಫೋಟೊ ಹಂಚಿಕೊಳ್ಳಲಾಗಿದೆ. ಮ್ಯಾಜಿಕಲ್ ಮೆಲ್ಘಾಟ್, ಹರಿಸಲ್ ಕಾಡಿನಲ್ಲಿ 3 ನಾಗರಹಾವುಗಳನ್ನು ಗುರುತಿಸಲಾಗಿದೆ! ಎಂಬ ಶೀರ್ಷಿಕೆ ನೀಡುವ ಮೂಲಕ ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಫುಲ್ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಸುಶಾಂತಾ ನಂದಾ ಅವರು ಕೂಡಾ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊ ನೋಡಿದಂತೆ, ಕಪ್ಪು ಬಣ್ಣದ ಮೂರು ನಾಗರ ಹಾವುಗಳು ಮರವನ್ನು ಸುತ್ತಿಕೊಂಡು ನಮ್ಮನ್ನೇ ನೋಡುತ್ತಿರುವಂತೆ ಭಾಸವಾಗುವ ದೃಶ್ಯ ಒಮ್ಮೆಲೆ ಮೈ ಜುಮ್ ಅನಿಸುವಂತಿದೆ.

ಅಧಿಕಾರಿ ಸುಶಾಂತಾ ನಂದಾ ಅವರ ಟ್ವೀಟ್ಅನ್ನು ಸುಮಾರು 2,200 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಅವು ಸುಂದರವಾಗಿದೆ ಆದರೆ ದೂರದಲ್ಲಿದ್ದರೆ ಮಾತ್ರ! ಹತ್ತಿರಕ್ಕೆ ಬಂದರೆ ಬೆವರುತ್ತೇವೆ ಎಂಬ ಶೀರ್ಷಿಕೆ ನೀಡುವ ಮೂಲಕ ಪೋಸ್ಟ್ ಹಂಚಿಕೊಳ್ಳಲಾಗಿದೆ. ಕೆಲವರು ಚಿತ್ರಗಳನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವರು, ನಾನು ಆ ಸ್ಥಳದಲ್ಲಿದ್ದರೆ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗುತ್ತಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ವೇಗವಾಗಿ ಓಡಿ ಬಂದು ಆಸ್ಪತ್ರೆಯ ಎಸ್ಕಲೇಟರ್ ಏರಿದ ಗಾಯಾಳು ಜಿಂಕೆ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ