AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್‌

ಕೆಲವೊಮ್ಮೆ ಪ್ರಾಕೃತಿಕವಾಗಿ ಎದುರಾಗುವ ಆಘಾತಕಾರಿ ಸನ್ನಿವೇಶಗಳು ಜೀವನವನ್ನೇ ಕಸಿದುಕೊಳ್ಳುತ್ತವೆ. ಇದೀಗ ಅದೇ ರೀತಿಯ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಖುಷಿಖುಷಿಯಾಗಿ ಆಟವಾಡುತ್ತಿದ್ದ ಮೂವರು ಮಕ್ಕಳ ಮೇಲೆ ಸಿಡಿಲು ಬಡಿದಿದೆ. ಈ ಆಘಾತಕಾರಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral Video: ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್‌
ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು
ಮಾಲಾಶ್ರೀ ಅಂಚನ್​
| Edited By: |

Updated on: Jun 02, 2024 | 2:35 PM

Share

ಮಳೆಗಾಲದಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮಿಂಚುಗಳು ಬರುವುದು ಸಾಮಾನ್ಯ. ಆದರೆ ಗಾಳಿ ಮಳೆಯೊಂದಿಗೆ ಬರುವ ಭಯಾನಕ ಗುಡುಗು ಮಿಂಚುಗಳು ಎದೆಯಲ್ಲಿ ನಡುಕ ಹುಟ್ಟಿಸುವುದು ಮಾತ್ರವಲ್ಲದೆ, ಅನೇಕ ಪ್ರಾಣ ಹಾನಿಯನ್ನೂ ಕೂಡಾ ಉಂಟುಮಾಡುತ್ತದೆ. ಹೀಗೆ ಸಿಡಿಲು ಬಡಿದು ಪ್ರಾಣಿ-ಪಕ್ಷಿಗಳು, ಮನುಷ್ಯರು ಸಾವನ್ನಪ್ಪಿದ ಅನೇಕ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಭೀಕರ ಘಟನೆಯೊಂದು ನಡೆದಿದ್ದು, ಬೀಚ್‌ನಲ್ಲಿ ಸಂತೋಷವಾಗಿ ಆಟವಾಡುತ್ತಿದ್ದ ಮೂವರ ಮಕ್ಕಳ ಮೇಲೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಿದೆ. ಈ ಆಘಾತಕಾರಿ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಆಘಾತಕಾರಿ ಘಟನೆ ಅಮೇರಿಕಾದಲ್ಲಿ ನಡೆದಿದ್ದು, ಇಲ್ಲಿನ ಪೋರ್ಟೊ ರಿಕೊ ಕಡಲತೀರದಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಸಿಡಿಲು ಬಡಿದಿದ್ದು, ಪರಿಣಾಮ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳಲ್ಲಿ ಒಂದು ಮಗು 7 ವರ್ಷ, ಇನ್ನೊಂದು ಮಗು 10 ವರ್ಷ, ಮೂರನೇ ಮಗು 12 ವರ್ಷ ವಯಸ್ಸಿನದ್ದು ಎಂದು ಗುರುತಿಸಲಾಗಿದೆ. ಈ ಮೂರು ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅದರಲ್ಲಿ 12 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ: ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಈ ಕುರಿತ ವಿಡಿಯೋವನ್ನು @CollinRugg ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಕಡಲತೀರದಲ್ಲಿನ ಮರಳಿನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಸಿಡಿಲು ಬಡಿದ ಆಘಾತಕಾರಿ ದೃಶ್ಯವನ್ನು ಕಾಣಬಹುದು. ಸಿಡಿಲು ಬಡಿದ ತಕ್ಷಣ ಮಕ್ಕಳು ಪ್ರಜ್ಞೆ ತಪ್ಪಿ ಬಿದ್ದಿದ್ದು, ಪೋಷಕರು ಮಕ್ಕಳ ಈ ಸ್ಥಿತಿಯನ್ನು ಕಂಡು ಗೋಳಾಡಿದ್ದಾರೆ.

ಮೇ 29 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.6 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಕೆಲವರು ಇಂತಹ ಪ್ರಶ್ಕುಬ್ಧ ಹವಾಮಾನವಿರುವ ಪರಿಸ್ಥಿತಿಯಲ್ಲಿ ಮಕ್ಕಳನ್ನು ಕಡಲತೀರದ ಬಳಿ ಕರೆದುಕೊಂಡು ಹೋಗುವ ಅವಶ್ಯಕತೆಯಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ