AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು

Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !
ನೀರಿಗೆ ಹಾರಿದ ಹುಲಿ
TV9 Web
| Edited By: |

Updated on:Apr 17, 2022 | 9:49 PM

Share

ಸೋಷಿಯಲ್ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಪಟ್ಟ, ಕ್ಯೂಟ್​-ಭಯಾನಕ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಪ್ರಾಣಿಗಳ ಚೇಷ್ಟೆ, ಕಾಳಗ, ಅಟ್ಯಾಕ್​ ಹೀಗೆ ವಿಧವಿಧದ ದೃಶ್ಯಗಳು ತುಂಬ ಖುಷಿ ಕೊಡುತ್ತವೆ..ಅಬ್ಬಾ, ಭಯಾನಕ ಎನ್ನಿಸುತ್ತವೆ. ಆದರೆ ನಾವಿಲ್ಲಿ ತೋರಿಸಿರುವ ವಿಡಿಯೋ ನೋಡಿ, ನಿಮಗೆ ರೋಮಾಂಚನ ಆಗದೆ ಇದ್ದರೆ ಹೇಳಿ ! ಇದು ಹುಲಿಯ ಕುಣಿತವಲ್ಲ..ಜಿಗಿತದ ದೃಶ್ಯ. ಒಂದು ಬೋಟ್​​ನಿಂದ ನೀರಿಗೆ ಹುಲಿರಾಯ ಜಂಪ್​ ಮಾಡಿದ ಚೆಂದ, ಆ ಗತ್ತು ಇದೆಯಲ್ಲ ಮೈ ಜುಂ ಎನ್ನಿಸದೆ ಇರದು.

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು. ಇದೀಗ ಮತ್ತೊಮ್ಮೆ ಸಿಕ್ಕಾಪಟೆ ವೈರಲ್ ಆಗುತ್ತಿದೆ.  ಯಾವುದೋ ಝೂದಲ್ಲಿ ಇದ್ದ ಹುಲಿಯನ್ನು ಅಲ್ಲಿಂದ ಕಾಡಿಗೆ ಬಿಡಲೆಂದು ಬೋಟ್​​​​ನಲ್ಲಿ ನದಿ ಮೂಲಕ ಕರೆದುಕೊಂಡು ಹೋಗುತ್ತಿರುವ ದೃಶ್ಯ. ಬೋಟ್​​​​ನಿಂದ ಈ ಹುಲಿ ನದಿಗೆ ಧುಮುಕಿದೆ. ನಂತರ ಅಲ್ಲಿಂದ ಈಜಿಕೊಂಡು ಹೋಗಿ ಅಲ್ಲಿಯೇ ದಡದಲ್ಲಿರುವ ಕಾಡು ಸೇರಿಕೊಂಡಿದೆ.  ಆ ಹುಲಿಯ ಹೆಸರು ರಿಚರ್ಡ್​ ಪಾರ್ಕರ್​ ಎಂದು ಹೇಳಲಾಗಿದ್ದು, ಬೋಟ್​​ನಿಂದ ಜಿಗಿದ ಮೇಲೆ ಒಂದು ಸಲವೂ ತಿರುಗಿ ನೋಡದೆ ಈಜುಕೊಂಡು ಹೋಗಿದ್ದನ್ನು ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ವಿಡಿಯೋ ನೋಡಿದ ಜನರೆಂತೂ ಭರ್ಜರಿ ಖುಷಿಪಟ್ಟಿದ್ದಾರೆ. ಹುಲಿಯ ಗತ್ತು ನೋಡಿ ಸಿಕ್ಕಾಪಟೆ ಹೊಗಳಿದ್ದಾರೆ. ಹೊರಟಮೇಲೆ ತಿರುಗಿ ನೋಡಬಾರದು ಎಂಬ ಪಾಠವನ್ನು ಈ ಟೈಗರ್​ನಿಂದ ಕಲಿತೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದರೆ, ಏನು ಹೇಳಲೂ ತಿಳಿಯುತ್ತಿಲ್ಲವೆಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಶಿಕ್ಷಣ ಮುಂದುವರಿಸಲು ದಾರಿ ಮಾಡಿಕೊಡಿ; ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ

Published On - 9:48 pm, Sun, 17 April 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​