AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು

Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !
ನೀರಿಗೆ ಹಾರಿದ ಹುಲಿ
Follow us
TV9 Web
| Updated By: Lakshmi Hegde

Updated on:Apr 17, 2022 | 9:49 PM

ಸೋಷಿಯಲ್ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಪಟ್ಟ, ಕ್ಯೂಟ್​-ಭಯಾನಕ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಪ್ರಾಣಿಗಳ ಚೇಷ್ಟೆ, ಕಾಳಗ, ಅಟ್ಯಾಕ್​ ಹೀಗೆ ವಿಧವಿಧದ ದೃಶ್ಯಗಳು ತುಂಬ ಖುಷಿ ಕೊಡುತ್ತವೆ..ಅಬ್ಬಾ, ಭಯಾನಕ ಎನ್ನಿಸುತ್ತವೆ. ಆದರೆ ನಾವಿಲ್ಲಿ ತೋರಿಸಿರುವ ವಿಡಿಯೋ ನೋಡಿ, ನಿಮಗೆ ರೋಮಾಂಚನ ಆಗದೆ ಇದ್ದರೆ ಹೇಳಿ ! ಇದು ಹುಲಿಯ ಕುಣಿತವಲ್ಲ..ಜಿಗಿತದ ದೃಶ್ಯ. ಒಂದು ಬೋಟ್​​ನಿಂದ ನೀರಿಗೆ ಹುಲಿರಾಯ ಜಂಪ್​ ಮಾಡಿದ ಚೆಂದ, ಆ ಗತ್ತು ಇದೆಯಲ್ಲ ಮೈ ಜುಂ ಎನ್ನಿಸದೆ ಇರದು.

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು. ಇದೀಗ ಮತ್ತೊಮ್ಮೆ ಸಿಕ್ಕಾಪಟೆ ವೈರಲ್ ಆಗುತ್ತಿದೆ.  ಯಾವುದೋ ಝೂದಲ್ಲಿ ಇದ್ದ ಹುಲಿಯನ್ನು ಅಲ್ಲಿಂದ ಕಾಡಿಗೆ ಬಿಡಲೆಂದು ಬೋಟ್​​​​ನಲ್ಲಿ ನದಿ ಮೂಲಕ ಕರೆದುಕೊಂಡು ಹೋಗುತ್ತಿರುವ ದೃಶ್ಯ. ಬೋಟ್​​​​ನಿಂದ ಈ ಹುಲಿ ನದಿಗೆ ಧುಮುಕಿದೆ. ನಂತರ ಅಲ್ಲಿಂದ ಈಜಿಕೊಂಡು ಹೋಗಿ ಅಲ್ಲಿಯೇ ದಡದಲ್ಲಿರುವ ಕಾಡು ಸೇರಿಕೊಂಡಿದೆ.  ಆ ಹುಲಿಯ ಹೆಸರು ರಿಚರ್ಡ್​ ಪಾರ್ಕರ್​ ಎಂದು ಹೇಳಲಾಗಿದ್ದು, ಬೋಟ್​​ನಿಂದ ಜಿಗಿದ ಮೇಲೆ ಒಂದು ಸಲವೂ ತಿರುಗಿ ನೋಡದೆ ಈಜುಕೊಂಡು ಹೋಗಿದ್ದನ್ನು ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ವಿಡಿಯೋ ನೋಡಿದ ಜನರೆಂತೂ ಭರ್ಜರಿ ಖುಷಿಪಟ್ಟಿದ್ದಾರೆ. ಹುಲಿಯ ಗತ್ತು ನೋಡಿ ಸಿಕ್ಕಾಪಟೆ ಹೊಗಳಿದ್ದಾರೆ. ಹೊರಟಮೇಲೆ ತಿರುಗಿ ನೋಡಬಾರದು ಎಂಬ ಪಾಠವನ್ನು ಈ ಟೈಗರ್​ನಿಂದ ಕಲಿತೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದರೆ, ಏನು ಹೇಳಲೂ ತಿಳಿಯುತ್ತಿಲ್ಲವೆಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಶಿಕ್ಷಣ ಮುಂದುವರಿಸಲು ದಾರಿ ಮಾಡಿಕೊಡಿ; ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ

Published On - 9:48 pm, Sun, 17 April 22

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ