AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು

Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !
ನೀರಿಗೆ ಹಾರಿದ ಹುಲಿ
TV9 Web
| Edited By: |

Updated on:Apr 17, 2022 | 9:49 PM

Share

ಸೋಷಿಯಲ್ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಪಟ್ಟ, ಕ್ಯೂಟ್​-ಭಯಾನಕ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಪ್ರಾಣಿಗಳ ಚೇಷ್ಟೆ, ಕಾಳಗ, ಅಟ್ಯಾಕ್​ ಹೀಗೆ ವಿಧವಿಧದ ದೃಶ್ಯಗಳು ತುಂಬ ಖುಷಿ ಕೊಡುತ್ತವೆ..ಅಬ್ಬಾ, ಭಯಾನಕ ಎನ್ನಿಸುತ್ತವೆ. ಆದರೆ ನಾವಿಲ್ಲಿ ತೋರಿಸಿರುವ ವಿಡಿಯೋ ನೋಡಿ, ನಿಮಗೆ ರೋಮಾಂಚನ ಆಗದೆ ಇದ್ದರೆ ಹೇಳಿ ! ಇದು ಹುಲಿಯ ಕುಣಿತವಲ್ಲ..ಜಿಗಿತದ ದೃಶ್ಯ. ಒಂದು ಬೋಟ್​​ನಿಂದ ನೀರಿಗೆ ಹುಲಿರಾಯ ಜಂಪ್​ ಮಾಡಿದ ಚೆಂದ, ಆ ಗತ್ತು ಇದೆಯಲ್ಲ ಮೈ ಜುಂ ಎನ್ನಿಸದೆ ಇರದು.

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು. ಇದೀಗ ಮತ್ತೊಮ್ಮೆ ಸಿಕ್ಕಾಪಟೆ ವೈರಲ್ ಆಗುತ್ತಿದೆ.  ಯಾವುದೋ ಝೂದಲ್ಲಿ ಇದ್ದ ಹುಲಿಯನ್ನು ಅಲ್ಲಿಂದ ಕಾಡಿಗೆ ಬಿಡಲೆಂದು ಬೋಟ್​​​​ನಲ್ಲಿ ನದಿ ಮೂಲಕ ಕರೆದುಕೊಂಡು ಹೋಗುತ್ತಿರುವ ದೃಶ್ಯ. ಬೋಟ್​​​​ನಿಂದ ಈ ಹುಲಿ ನದಿಗೆ ಧುಮುಕಿದೆ. ನಂತರ ಅಲ್ಲಿಂದ ಈಜಿಕೊಂಡು ಹೋಗಿ ಅಲ್ಲಿಯೇ ದಡದಲ್ಲಿರುವ ಕಾಡು ಸೇರಿಕೊಂಡಿದೆ.  ಆ ಹುಲಿಯ ಹೆಸರು ರಿಚರ್ಡ್​ ಪಾರ್ಕರ್​ ಎಂದು ಹೇಳಲಾಗಿದ್ದು, ಬೋಟ್​​ನಿಂದ ಜಿಗಿದ ಮೇಲೆ ಒಂದು ಸಲವೂ ತಿರುಗಿ ನೋಡದೆ ಈಜುಕೊಂಡು ಹೋಗಿದ್ದನ್ನು ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ವಿಡಿಯೋ ನೋಡಿದ ಜನರೆಂತೂ ಭರ್ಜರಿ ಖುಷಿಪಟ್ಟಿದ್ದಾರೆ. ಹುಲಿಯ ಗತ್ತು ನೋಡಿ ಸಿಕ್ಕಾಪಟೆ ಹೊಗಳಿದ್ದಾರೆ. ಹೊರಟಮೇಲೆ ತಿರುಗಿ ನೋಡಬಾರದು ಎಂಬ ಪಾಠವನ್ನು ಈ ಟೈಗರ್​ನಿಂದ ಕಲಿತೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದರೆ, ಏನು ಹೇಳಲೂ ತಿಳಿಯುತ್ತಿಲ್ಲವೆಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಶಿಕ್ಷಣ ಮುಂದುವರಿಸಲು ದಾರಿ ಮಾಡಿಕೊಡಿ; ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ

Published On - 9:48 pm, Sun, 17 April 22

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ