Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು

Video: ಇದು ಹುಲಿ ಕುಣಿತವಲ್ಲ, ಜಿಗಿತ; ಬೋಟ್​​​ನಿಂದ ನೀರಿಗೆ ಜಂಪ್​ ಮಾಡಿ, ತಿರುಗಿಯೂ ನೋಡದೆ ಹೋದ ಟೈಗರ್​ !
ನೀರಿಗೆ ಹಾರಿದ ಹುಲಿ
Follow us
| Updated By: Lakshmi Hegde

Updated on:Apr 17, 2022 | 9:49 PM

ಸೋಷಿಯಲ್ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಪಟ್ಟ, ಕ್ಯೂಟ್​-ಭಯಾನಕ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಪ್ರಾಣಿಗಳ ಚೇಷ್ಟೆ, ಕಾಳಗ, ಅಟ್ಯಾಕ್​ ಹೀಗೆ ವಿಧವಿಧದ ದೃಶ್ಯಗಳು ತುಂಬ ಖುಷಿ ಕೊಡುತ್ತವೆ..ಅಬ್ಬಾ, ಭಯಾನಕ ಎನ್ನಿಸುತ್ತವೆ. ಆದರೆ ನಾವಿಲ್ಲಿ ತೋರಿಸಿರುವ ವಿಡಿಯೋ ನೋಡಿ, ನಿಮಗೆ ರೋಮಾಂಚನ ಆಗದೆ ಇದ್ದರೆ ಹೇಳಿ ! ಇದು ಹುಲಿಯ ಕುಣಿತವಲ್ಲ..ಜಿಗಿತದ ದೃಶ್ಯ. ಒಂದು ಬೋಟ್​​ನಿಂದ ನೀರಿಗೆ ಹುಲಿರಾಯ ಜಂಪ್​ ಮಾಡಿದ ಚೆಂದ, ಆ ಗತ್ತು ಇದೆಯಲ್ಲ ಮೈ ಜುಂ ಎನ್ನಿಸದೆ ಇರದು.

ಇದೊಂದು ಹಳೇ ವಿಡಿಯೋ ಎಂಬುದನ್ನು ಶೇರ್ ಮಾಡಿಕೊಂಡಿರುವ ಐಎಫ್​ಎಸ್​ ಅಧಿಕಾರಿ ಪರ್ವೀನ್ ಕಸ್ವಾನ್​ ಅವರೇ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸುಂದರ್​ಬನ್ಸ್​​ ರಾಷ್ಟ್ರೀಯ ಉದ್ಯಾನವನದ್ದು. ಇದೀಗ ಮತ್ತೊಮ್ಮೆ ಸಿಕ್ಕಾಪಟೆ ವೈರಲ್ ಆಗುತ್ತಿದೆ.  ಯಾವುದೋ ಝೂದಲ್ಲಿ ಇದ್ದ ಹುಲಿಯನ್ನು ಅಲ್ಲಿಂದ ಕಾಡಿಗೆ ಬಿಡಲೆಂದು ಬೋಟ್​​​​ನಲ್ಲಿ ನದಿ ಮೂಲಕ ಕರೆದುಕೊಂಡು ಹೋಗುತ್ತಿರುವ ದೃಶ್ಯ. ಬೋಟ್​​​​ನಿಂದ ಈ ಹುಲಿ ನದಿಗೆ ಧುಮುಕಿದೆ. ನಂತರ ಅಲ್ಲಿಂದ ಈಜಿಕೊಂಡು ಹೋಗಿ ಅಲ್ಲಿಯೇ ದಡದಲ್ಲಿರುವ ಕಾಡು ಸೇರಿಕೊಂಡಿದೆ.  ಆ ಹುಲಿಯ ಹೆಸರು ರಿಚರ್ಡ್​ ಪಾರ್ಕರ್​ ಎಂದು ಹೇಳಲಾಗಿದ್ದು, ಬೋಟ್​​ನಿಂದ ಜಿಗಿದ ಮೇಲೆ ಒಂದು ಸಲವೂ ತಿರುಗಿ ನೋಡದೆ ಈಜುಕೊಂಡು ಹೋಗಿದ್ದನ್ನು ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ವಿಡಿಯೋ ನೋಡಿದ ಜನರೆಂತೂ ಭರ್ಜರಿ ಖುಷಿಪಟ್ಟಿದ್ದಾರೆ. ಹುಲಿಯ ಗತ್ತು ನೋಡಿ ಸಿಕ್ಕಾಪಟೆ ಹೊಗಳಿದ್ದಾರೆ. ಹೊರಟಮೇಲೆ ತಿರುಗಿ ನೋಡಬಾರದು ಎಂಬ ಪಾಠವನ್ನು ಈ ಟೈಗರ್​ನಿಂದ ಕಲಿತೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದರೆ, ಏನು ಹೇಳಲೂ ತಿಳಿಯುತ್ತಿಲ್ಲವೆಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಶಿಕ್ಷಣ ಮುಂದುವರಿಸಲು ದಾರಿ ಮಾಡಿಕೊಡಿ; ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ

Published On - 9:48 pm, Sun, 17 April 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ