AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕರಡಿಯನ್ನು ಅಟ್ಟಾಡಿಸಿಕೊಂಡು ಹೋದ ಹುಲಿರಾಯ;  ವೈರಲ್ ಆಯ್ತು ವಿಡಿಯೋ

ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಿಂದ ಅಚ್ಚರಿಯ ವಿಡಿಯೋವೊಂದು ಹೊರ ಬಿದ್ದಿದ್ದು, ಪ್ರವಾಸಿಗರ ಮುಂದೆಯೇ ಹುಲಿರಾಯ ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಸದ್ಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 

ಮಾಲಾಶ್ರೀ ಅಂಚನ್​
| Edited By: |

Updated on: Apr 05, 2024 | 5:27 PM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಕೆಲವೊಮ್ಮೆ  ಈ ದೃಶ್ಯಗಳು  ನಿಜಕ್ಕೂ ನಮ್ಮಲ್ಲಿ ಅಚ್ಚರಿಯನ್ನು ಮೂಡಿಸುತ್ತದೆ.  ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಸಫಾರಿಗೆ ಬಂದಂತಹ ಪ್ರವಾಸಿಗರ ಮುಂದೆಯೇ ದೈತ್ಯ ಹುಲಿಯೊಂದು ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ.

ಈ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದ್ದು,  ಹುಲಿಯ ದಾಳಿಯಿಂದ ಹೇಗಾದರೂ ತಪ್ಪಿಸಿಕೊಂಡು  ಜೀವ ಉಳಿದ್ರೆ ಸಾಕಪ್ಪಾ ಎಂದು ಪುಟ್ಟ  ಕರಡಿಯೊಂದು  ಕಾಲ್ಕಿತ್ತು ಓಡಿ ಹೋಗಿದೆ. ಹುಲಿರಾಯನ ಈ ಭಯಾನಕ ಬೇಟೆಯ ದೃಶ್ಯವನ್ನು  ವನ್ಯಜೀವಿ ಛಾಯಾಗ್ರಾಹಕ ಸಿದ್ಧಾರ್ಥ್ ಸಿಂಗ್ ಸೆರೆ ಹಿಡಿದಿದ್ದು, ಈ  ವಿಡಿಯೋವನ್ನು ಅರಣ್ಯಾಧಿಕಾರಿ ರಮೇಶ್ ಪಾಂಡೆ (rameshpandeyifs)  ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಪಿಲಿಭಿತ್ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಪ್ರವಾಸಿಗರ ದಂಡೊಂದು ಸಫಾರಿಗೆಂದು ಬಂದಿತ್ತು, ಆ ಸಂದರ್ಭದಲ್ಲಿ ಪ್ರವಾಸಿಗರ ಮುಂದೆಯೇ  ಸೋಮಾರಿ ಕರಡಿಯೊಂದನ್ನು  ಹುಲಿರಾಯ  ಅಟ್ಟಾಡಿಸಿಕೊಂಡು ಹೋಗಿದೆ. ಈ ಭಯಾನಕ ದೃಶ್ಯವನ್ನು ದೃಶ್ಯವನ್ನು ಕಂಡು ಪ್ರವಾಸಿಗರು ಫುಲ್ ಶಾಕ್ ಆಗಿದ್ದಾರೆ.

ಇದನ್ನೂ ಓದಿ: ನ್ಯಾಚುರಲ್ ಲುಕ್ ಪಡೆಯಲು ಮತ್ತೊಮ್ಮೆ ಪ್ಲಾಸ್ಟಿಕ್ ಸರ್ಜರಿ ಮೊರೆ ಹೋದ ರಿಯಲ್ ಲೈಫ್ ಬಾರ್ಬಿ ಡಾಲ್ 

ಏಪ್ರಿಲ್ 03 ರಂದು ಹಂಚಿಕೊಳ್ಳಲಾದ ಈ ವಿಡಿಯೋ 52 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ದೃಶ್ಯ ನೋಡಲು ನಿಜವಾಗಿಯೂ ಭಯಾನಕವಾಗಿದೆ ಜೊತೆಗೆ ರೋಮಾಂಚಕವಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ