Viral Video: ಕರಡಿಯನ್ನು ಅಟ್ಟಾಡಿಸಿಕೊಂಡು ಹೋದ ಹುಲಿರಾಯ;  ವೈರಲ್ ಆಯ್ತು ವಿಡಿಯೋ

ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಿಂದ ಅಚ್ಚರಿಯ ವಿಡಿಯೋವೊಂದು ಹೊರ ಬಿದ್ದಿದ್ದು, ಪ್ರವಾಸಿಗರ ಮುಂದೆಯೇ ಹುಲಿರಾಯ ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಸದ್ಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಕೆಲವೊಮ್ಮೆ  ಈ ದೃಶ್ಯಗಳು  ನಿಜಕ್ಕೂ ನಮ್ಮಲ್ಲಿ ಅಚ್ಚರಿಯನ್ನು ಮೂಡಿಸುತ್ತದೆ.  ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಸಫಾರಿಗೆ ಬಂದಂತಹ ಪ್ರವಾಸಿಗರ ಮುಂದೆಯೇ ದೈತ್ಯ ಹುಲಿಯೊಂದು ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ.

ಈ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದ್ದು,  ಹುಲಿಯ ದಾಳಿಯಿಂದ ಹೇಗಾದರೂ ತಪ್ಪಿಸಿಕೊಂಡು  ಜೀವ ಉಳಿದ್ರೆ ಸಾಕಪ್ಪಾ ಎಂದು ಪುಟ್ಟ  ಕರಡಿಯೊಂದು  ಕಾಲ್ಕಿತ್ತು ಓಡಿ ಹೋಗಿದೆ. ಹುಲಿರಾಯನ ಈ ಭಯಾನಕ ಬೇಟೆಯ ದೃಶ್ಯವನ್ನು  ವನ್ಯಜೀವಿ ಛಾಯಾಗ್ರಾಹಕ ಸಿದ್ಧಾರ್ಥ್ ಸಿಂಗ್ ಸೆರೆ ಹಿಡಿದಿದ್ದು, ಈ  ವಿಡಿಯೋವನ್ನು ಅರಣ್ಯಾಧಿಕಾರಿ ರಮೇಶ್ ಪಾಂಡೆ (rameshpandeyifs)  ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಪಿಲಿಭಿತ್ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಪ್ರವಾಸಿಗರ ದಂಡೊಂದು ಸಫಾರಿಗೆಂದು ಬಂದಿತ್ತು, ಆ ಸಂದರ್ಭದಲ್ಲಿ ಪ್ರವಾಸಿಗರ ಮುಂದೆಯೇ  ಸೋಮಾರಿ ಕರಡಿಯೊಂದನ್ನು  ಹುಲಿರಾಯ  ಅಟ್ಟಾಡಿಸಿಕೊಂಡು ಹೋಗಿದೆ. ಈ ಭಯಾನಕ ದೃಶ್ಯವನ್ನು ದೃಶ್ಯವನ್ನು ಕಂಡು ಪ್ರವಾಸಿಗರು ಫುಲ್ ಶಾಕ್ ಆಗಿದ್ದಾರೆ.

ಇದನ್ನೂ ಓದಿ: ನ್ಯಾಚುರಲ್ ಲುಕ್ ಪಡೆಯಲು ಮತ್ತೊಮ್ಮೆ ಪ್ಲಾಸ್ಟಿಕ್ ಸರ್ಜರಿ ಮೊರೆ ಹೋದ ರಿಯಲ್ ಲೈಫ್ ಬಾರ್ಬಿ ಡಾಲ್ 

ಏಪ್ರಿಲ್ 03 ರಂದು ಹಂಚಿಕೊಳ್ಳಲಾದ ಈ ವಿಡಿಯೋ 52 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ದೃಶ್ಯ ನೋಡಲು ನಿಜವಾಗಿಯೂ ಭಯಾನಕವಾಗಿದೆ ಜೊತೆಗೆ ರೋಮಾಂಚಕವಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us