Viral Video: ನಿಮಗಿದು ಗೊತ್ತೆ? ಸುಟ್ಟ ಗಾಯಗಳಿಗೆ ರಾಮ ಬಾಣ ಈ ವಿಶೇಷ ಮೀನಿನ ಚರ್ಮ!

ದುರಾದೃಷ್ಟವಶಾತ್ ಅಡುಗೆ ಮಾಡುವಾಗಲೋ, ಪಟಾಕಿ ಸಿಡಿಸುವಾಗಲೋ ಅಥವಾ ಭಾರೀ ಪ್ರಮಾಣದ ಬೆಂಕಿ ಅವಘಡವಾದಂತಹ ಸಂದರ್ಭದಲ್ಲಿ ಕೆಲವೊಬ್ಬರು ಈ ಅಪಘಾತಕ್ಕೆ ತುತ್ತಾಗಿ ಅವರ ಮೈ ಮೇಲೆ ಸುಟ್ಟ ಗಾಯಗಳಾಗುತ್ತವೆ. ಈ ಸುಟ್ಟ ಗಾಯಗಳಿಗೆ ಹಾಗೂ ಮಧುಮೇಹಿಗಳಲ್ಲಿ ಕಾಣಿಸಿಕೊಳ್ಳುವ  ಪಾದದ ಹುಣ್ಣು ಸಮಸ್ಯೆಗಳಿಗೆ ಟಿಲಾಪಿಯಾ ಮೀನಿನ ಚರ್ಮವನ್ನು ಬಳಸಿ ಚಿಕಿತ್ಸೆ ನೀಡಿದರೆ ಸುಟ್ಟ ಗಾಯಗಳು ಬಹುಬೇಗನೇ ನಿವಾರಣೆಯಾಗುತ್ತವೆಯಂತೆ. ಈ ಕುರಿತ ಇಂಟೆರೆಸ್ಟಿಂಗ್ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್  ಆಗುತ್ತಿದೆ.  

Viral Video: ನಿಮಗಿದು ಗೊತ್ತೆ? ಸುಟ್ಟ ಗಾಯಗಳಿಗೆ ರಾಮ ಬಾಣ ಈ ವಿಶೇಷ ಮೀನಿನ ಚರ್ಮ!
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 04, 2024 | 5:42 PM

ವೈದ್ಯಕೀಯ  ಕ್ಷೇತ್ರದಲ್ಲಿ ಪ್ರತಿನಿತ್ಯ ಹಲವಾರು ಸಂಶೋಧನೆಗಳು ನಡೆಯುತ್ತಿರುತ್ತವೆ. ಹಂದಿ ಹೃದಯ ಕಸಿಯಿಂದ ಹಿಡಿದು ಪ್ರಣಾಳ ಶಿಶುವಿನ ಜನನದ ವರೆಗೂ ಹಲವಾರು ಸಂಶೋಧನೆಗಳನ್ನು ಇದಾಗಲೇ ನಡೆಸಲಾಗಿದೆ. ಇದೀಗ ಅದೇ ರೀತಿ ಸುಟ್ಟ ಗಾಯಗಳಿಗೆ ಟಿಲಾಪಿಯಾ ಮೀನಿನ ಚರ್ಮದಿಂದ ಪರಿಣಾಮಕಾರಿ ಚಿಕಿತ್ಸೆಯನ್ನು ನೀಡಬಹುದು ಎಂಬುದನ್ನು ಸಂಶೋಧಕರು ತಿಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೊದಲ ಬಾರಿಗೆ  ಬ್ರೆಜಿಲ್ ದೇಶದ  ವೈದ್ಯರು ಸುಟ್ಟ ಗಾಯಗಳನ್ನು ಗುಣಪಡಿಸಲು ಈ ವಿಶೇಷ ಚಿಕಿತ್ಸಾ ವಿಧಾನವನ್ನು ಬಳಸಿದರು. ಅವರು ಈ ವಿಶೇಷ ಮೀನಿನ ಚರ್ಮವನ್ನು ಸುಟ್ಟ ಗಾಯಗಳ ಮೇಲೆ ಬ್ಯಾಂಡೆಜ್ ರೀತಿಯಲ್ಲಿ ಸುತ್ತಿ ಚಿಕಿತ್ಸೆ ನೀಡುತ್ತಾರೆ.  ಈ ವಿಧಾನದ ಚಿಕಿತ್ಸೆಯಿಂದ  ರೋಗಿಗೆ ಹಲವು ಪ್ರಯೋಜನಗಳು ದೊರೆಯುತ್ತವೆ  ಎಂದು ವೈದ್ಯರು  ಹೇಳುತ್ತಾರೆ. ಹೌದು ಟಿಲಾಪಿಯಾ  ಮೀನಿನ ಚರ್ಮವು  ಸುಟ್ಟ ಗಾಯದ  ನೋವನ್ನು ನಿಯಂತ್ರಿಸುತ್ತದೆ ಮತ್ತು ಗಾಯಗಳನ್ನು ತ್ವರಿತವಾಗಿ ಗುಣಪಡಿಸುತ್ತದೆ ಅಷ್ಟೇ ಅಲ್ಲದೆ  ಸೋಂಕುಗಳಿಂದ ಚರ್ಮವನ್ನು  ರಕ್ಷಿಸುತ್ತದೆ.

ಈ ಮೀನಿನ ಚರ್ಮವನ್ನು  ಮೊದಲ ಬಾರಿಗೆ  2016 ರಲ್ಲಿ ಗಾಯಗಳನ್ನು ಗುಣಪಡಿಸಲು ಬಳಸಲಾಯಿತು. ಮರಿಯಾ ಇನೆಸ್ ಕ್ಯಾಂಡಿಯೊ ಎಂಬ ಮಹಿಳೆ ಟಿಲಾಪಿಯಾ ಮೀನಿನ ಚರ್ಮದ  ಚಿಕಿತ್ಸೆಯನ್ನು  ಪಡೆದ ಮೊದಲ  ಮಹಿಳೆಯಾಗಿದ್ದಾರೆ.

ಈ ಚಿಕಿತ್ಸೆ ಹೇಗೆ ಕಾರ್ಯನಿರ್ವಹಿಸುತ್ತದೆ?

ಟಿಲಾಪಿಯಾ ಮೀನು  ಸಿಹಿ ನೀರಿನಲ್ಲಿ ವಾಸಿಸುವ ಮೀನು.  ಈ ಮೀನಿನ ಚರ್ಮದಲ್ಲಿ ಹೆಚ್ಚಿನ ಮಟ್ಟದ ಕಾಲಜನ್ ಮತ್ತು ಉತ್ತಮ ಪ್ರಮಾಣದ ತೇವಾಂಶವೂ ಇದೆ. ಇದರಿಂದಾಗಿ ಈ ಮೀನಿನ ಚರ್ಮವು ಒಣಗಲು ಬಹಳ ಸಮಯವನ್ನು ತೆಗೆದುಕೊಳ್ಳುತ್ತದೆ. ಇದು ಗಾಯಗಳನ್ನು ತ್ವರಿತವಾಗಿ ಗುಣಪಡಿಸುತ್ತದೆ ಮತ್ತು ಸುಟ್ಟ ಚರ್ಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಅಲ್ಲದೆ ಇದು ಸೋಂಕಿನ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಈ ಕುರಿತ ಇಂಟರೆಸ್ಟಿಂಗ್ ವಿಡಿಯೋವೊಂದನ್ನು @Rainmaker1973 ಎಂಬ ಹೆಸರಿನ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ನಿಮಗಿದು ಗೊತ್ತೆ? ಮೀನಿನ ಚರ್ಮವು ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಸುಟ್ಟ ಗಾಯಗಳು ಮತ್ತು ಮಧುಮೇಹದ ಕಾರಣದಿಂದ ಉಂಟಾಗುವ ಪಾದದ ಹುಣ್ಣುಗಳು ಸೇರಿದಂತೆ ವಿವಿಧ ಗಾಯಗಳನ್ನು ಗುಣಪಡಿಸಲು ಪರಿಣಾಮಕಾರಿ ಚಿಕಿತ್ಸೆಯಾಗಿ ಕಾರ್ಯನಿರ್ವಹಿಸುತ್ತದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಸುಟ್ಟ ಗಾಯಗಳು ಸೇರಿದಂತೆ ಇತರೆ ಗಾಯಗಳಿಗೆ ಟಿಲಾಪಿಯಾ  ಮೀನಿನ ಚರ್ಮವನ್ನು ಬಳಸಿ ಹೇಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮತ್ತು ಈ ಚಿಕಿತ್ಸೆ ಹೇಗೆ ಪರಿಣಾಯಕಾರಿಯಾಗಿ ಕಾರ್ಯನಿರ್ವಹಿಸುತ್ತದೆ  ಎಂಬ ದೃಶ್ಯಾವಳಿಯನ್ನು ಕಾಣಬಹುದು.

ಇದನ್ನೂ ಓದಿ: ರಜನಿಕಾಂತ್ ಅಭಿಯಾನದ ಮುತ್ತು ಚಿತ್ರದ ʼಒರುವನ್ ಒರುವನ್ʼ ಹಾಡನ್ನು ಹಾಡಿದ 77ರ ವಿದೇಶಿ ವೃದ್ಧ 

ಮಾರ್ಚ್ 03 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7.4 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 44 ಸಾವಿರಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ.  ಹಲವಾರು ಕಾಮೆಟ್ಸ್ಗಳೂ  ಹರಿದು ಬಂದಿವೆ. ಒಬ್ಬ ಬಳಕೆದಾರರು ʼಬ್ರೆಜಿಲಿಯನ್ ವೈದ್ಯಕೀಯ ಸಂಶೋಧನೆಯನ್ನು ಮೆಚ್ಚಲೇಬೇಕುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಾವ್ಹ್ ಇಂತಹ ಸಂಶೋಧನೆಗಳಿಂದ ರೋಗಿಗಳು ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಲು ಸಹಾಯಕವಾಗಿದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ