AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಮಗಿದು ಗೊತ್ತೆ? ಸುಟ್ಟ ಗಾಯಗಳಿಗೆ ರಾಮ ಬಾಣ ಈ ವಿಶೇಷ ಮೀನಿನ ಚರ್ಮ!

ದುರಾದೃಷ್ಟವಶಾತ್ ಅಡುಗೆ ಮಾಡುವಾಗಲೋ, ಪಟಾಕಿ ಸಿಡಿಸುವಾಗಲೋ ಅಥವಾ ಭಾರೀ ಪ್ರಮಾಣದ ಬೆಂಕಿ ಅವಘಡವಾದಂತಹ ಸಂದರ್ಭದಲ್ಲಿ ಕೆಲವೊಬ್ಬರು ಈ ಅಪಘಾತಕ್ಕೆ ತುತ್ತಾಗಿ ಅವರ ಮೈ ಮೇಲೆ ಸುಟ್ಟ ಗಾಯಗಳಾಗುತ್ತವೆ. ಈ ಸುಟ್ಟ ಗಾಯಗಳಿಗೆ ಹಾಗೂ ಮಧುಮೇಹಿಗಳಲ್ಲಿ ಕಾಣಿಸಿಕೊಳ್ಳುವ  ಪಾದದ ಹುಣ್ಣು ಸಮಸ್ಯೆಗಳಿಗೆ ಟಿಲಾಪಿಯಾ ಮೀನಿನ ಚರ್ಮವನ್ನು ಬಳಸಿ ಚಿಕಿತ್ಸೆ ನೀಡಿದರೆ ಸುಟ್ಟ ಗಾಯಗಳು ಬಹುಬೇಗನೇ ನಿವಾರಣೆಯಾಗುತ್ತವೆಯಂತೆ. ಈ ಕುರಿತ ಇಂಟೆರೆಸ್ಟಿಂಗ್ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್  ಆಗುತ್ತಿದೆ.  

Viral Video: ನಿಮಗಿದು ಗೊತ್ತೆ? ಸುಟ್ಟ ಗಾಯಗಳಿಗೆ ರಾಮ ಬಾಣ ಈ ವಿಶೇಷ ಮೀನಿನ ಚರ್ಮ!
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 04, 2024 | 5:42 PM

Share

ವೈದ್ಯಕೀಯ  ಕ್ಷೇತ್ರದಲ್ಲಿ ಪ್ರತಿನಿತ್ಯ ಹಲವಾರು ಸಂಶೋಧನೆಗಳು ನಡೆಯುತ್ತಿರುತ್ತವೆ. ಹಂದಿ ಹೃದಯ ಕಸಿಯಿಂದ ಹಿಡಿದು ಪ್ರಣಾಳ ಶಿಶುವಿನ ಜನನದ ವರೆಗೂ ಹಲವಾರು ಸಂಶೋಧನೆಗಳನ್ನು ಇದಾಗಲೇ ನಡೆಸಲಾಗಿದೆ. ಇದೀಗ ಅದೇ ರೀತಿ ಸುಟ್ಟ ಗಾಯಗಳಿಗೆ ಟಿಲಾಪಿಯಾ ಮೀನಿನ ಚರ್ಮದಿಂದ ಪರಿಣಾಮಕಾರಿ ಚಿಕಿತ್ಸೆಯನ್ನು ನೀಡಬಹುದು ಎಂಬುದನ್ನು ಸಂಶೋಧಕರು ತಿಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೊದಲ ಬಾರಿಗೆ  ಬ್ರೆಜಿಲ್ ದೇಶದ  ವೈದ್ಯರು ಸುಟ್ಟ ಗಾಯಗಳನ್ನು ಗುಣಪಡಿಸಲು ಈ ವಿಶೇಷ ಚಿಕಿತ್ಸಾ ವಿಧಾನವನ್ನು ಬಳಸಿದರು. ಅವರು ಈ ವಿಶೇಷ ಮೀನಿನ ಚರ್ಮವನ್ನು ಸುಟ್ಟ ಗಾಯಗಳ ಮೇಲೆ ಬ್ಯಾಂಡೆಜ್ ರೀತಿಯಲ್ಲಿ ಸುತ್ತಿ ಚಿಕಿತ್ಸೆ ನೀಡುತ್ತಾರೆ.  ಈ ವಿಧಾನದ ಚಿಕಿತ್ಸೆಯಿಂದ  ರೋಗಿಗೆ ಹಲವು ಪ್ರಯೋಜನಗಳು ದೊರೆಯುತ್ತವೆ  ಎಂದು ವೈದ್ಯರು  ಹೇಳುತ್ತಾರೆ. ಹೌದು ಟಿಲಾಪಿಯಾ  ಮೀನಿನ ಚರ್ಮವು  ಸುಟ್ಟ ಗಾಯದ  ನೋವನ್ನು ನಿಯಂತ್ರಿಸುತ್ತದೆ ಮತ್ತು ಗಾಯಗಳನ್ನು ತ್ವರಿತವಾಗಿ ಗುಣಪಡಿಸುತ್ತದೆ ಅಷ್ಟೇ ಅಲ್ಲದೆ  ಸೋಂಕುಗಳಿಂದ ಚರ್ಮವನ್ನು  ರಕ್ಷಿಸುತ್ತದೆ.

ಈ ಮೀನಿನ ಚರ್ಮವನ್ನು  ಮೊದಲ ಬಾರಿಗೆ  2016 ರಲ್ಲಿ ಗಾಯಗಳನ್ನು ಗುಣಪಡಿಸಲು ಬಳಸಲಾಯಿತು. ಮರಿಯಾ ಇನೆಸ್ ಕ್ಯಾಂಡಿಯೊ ಎಂಬ ಮಹಿಳೆ ಟಿಲಾಪಿಯಾ ಮೀನಿನ ಚರ್ಮದ  ಚಿಕಿತ್ಸೆಯನ್ನು  ಪಡೆದ ಮೊದಲ  ಮಹಿಳೆಯಾಗಿದ್ದಾರೆ.

ಈ ಚಿಕಿತ್ಸೆ ಹೇಗೆ ಕಾರ್ಯನಿರ್ವಹಿಸುತ್ತದೆ?

ಟಿಲಾಪಿಯಾ ಮೀನು  ಸಿಹಿ ನೀರಿನಲ್ಲಿ ವಾಸಿಸುವ ಮೀನು.  ಈ ಮೀನಿನ ಚರ್ಮದಲ್ಲಿ ಹೆಚ್ಚಿನ ಮಟ್ಟದ ಕಾಲಜನ್ ಮತ್ತು ಉತ್ತಮ ಪ್ರಮಾಣದ ತೇವಾಂಶವೂ ಇದೆ. ಇದರಿಂದಾಗಿ ಈ ಮೀನಿನ ಚರ್ಮವು ಒಣಗಲು ಬಹಳ ಸಮಯವನ್ನು ತೆಗೆದುಕೊಳ್ಳುತ್ತದೆ. ಇದು ಗಾಯಗಳನ್ನು ತ್ವರಿತವಾಗಿ ಗುಣಪಡಿಸುತ್ತದೆ ಮತ್ತು ಸುಟ್ಟ ಚರ್ಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಅಲ್ಲದೆ ಇದು ಸೋಂಕಿನ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಈ ಕುರಿತ ಇಂಟರೆಸ್ಟಿಂಗ್ ವಿಡಿಯೋವೊಂದನ್ನು @Rainmaker1973 ಎಂಬ ಹೆಸರಿನ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ನಿಮಗಿದು ಗೊತ್ತೆ? ಮೀನಿನ ಚರ್ಮವು ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಸುಟ್ಟ ಗಾಯಗಳು ಮತ್ತು ಮಧುಮೇಹದ ಕಾರಣದಿಂದ ಉಂಟಾಗುವ ಪಾದದ ಹುಣ್ಣುಗಳು ಸೇರಿದಂತೆ ವಿವಿಧ ಗಾಯಗಳನ್ನು ಗುಣಪಡಿಸಲು ಪರಿಣಾಮಕಾರಿ ಚಿಕಿತ್ಸೆಯಾಗಿ ಕಾರ್ಯನಿರ್ವಹಿಸುತ್ತದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಸುಟ್ಟ ಗಾಯಗಳು ಸೇರಿದಂತೆ ಇತರೆ ಗಾಯಗಳಿಗೆ ಟಿಲಾಪಿಯಾ  ಮೀನಿನ ಚರ್ಮವನ್ನು ಬಳಸಿ ಹೇಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮತ್ತು ಈ ಚಿಕಿತ್ಸೆ ಹೇಗೆ ಪರಿಣಾಯಕಾರಿಯಾಗಿ ಕಾರ್ಯನಿರ್ವಹಿಸುತ್ತದೆ  ಎಂಬ ದೃಶ್ಯಾವಳಿಯನ್ನು ಕಾಣಬಹುದು.

ಇದನ್ನೂ ಓದಿ: ರಜನಿಕಾಂತ್ ಅಭಿಯಾನದ ಮುತ್ತು ಚಿತ್ರದ ʼಒರುವನ್ ಒರುವನ್ʼ ಹಾಡನ್ನು ಹಾಡಿದ 77ರ ವಿದೇಶಿ ವೃದ್ಧ 

ಮಾರ್ಚ್ 03 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7.4 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 44 ಸಾವಿರಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ.  ಹಲವಾರು ಕಾಮೆಟ್ಸ್ಗಳೂ  ಹರಿದು ಬಂದಿವೆ. ಒಬ್ಬ ಬಳಕೆದಾರರು ʼಬ್ರೆಜಿಲಿಯನ್ ವೈದ್ಯಕೀಯ ಸಂಶೋಧನೆಯನ್ನು ಮೆಚ್ಚಲೇಬೇಕುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಾವ್ಹ್ ಇಂತಹ ಸಂಶೋಧನೆಗಳಿಂದ ರೋಗಿಗಳು ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಲು ಸಹಾಯಕವಾಗಿದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ