AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರತೀಯರೇ, ನೀವು ಎಲ್ಲವನ್ನೂ ವಿಶೇಷವಾಗಿಸಿದ್ದೀರಿ; ಕಣ್ಣೀರಿಡುತ್ತಾ ಭಾರತದಿಂದ ಹೊರಟ ವಿದೇಶಿ ಮಹಿಳೆ

ಭಾರತಕ್ಕೆ ಬರುವ ವಿದೇಶಿಗರು ಇಲ್ಲಿಂದ ಹೊರಡುವಾಗ ಭಾವುಕರಾಗುವುದು ಸಹಜ. ಇದೀಗ ವಿದೇಶಿ ಮಹಿಳೆ ತನ್ನ ಹುಟ್ಟೂರಿಗೆ ತೆರಳುವಾಗ ಭಾವನಾತ್ಮಕ ವಿದಾಯ ಹೇಳಿದ್ದಾರೆ. ಭಾರತದಲ್ಲಿ ಕಳೆದ ಕ್ಷಣಗಳು ನನ್ನ ಮನಸ್ಸಿನಲ್ಲಿ ಸದಾ ಇರುತ್ತದೆ ಎಂದಿದ್ದಾರೆ. ವಿದೇಶಿ ಮಹಿಳೆಯ ಭಾವುಕ ಮಾತು ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ.

Video: ಭಾರತೀಯರೇ, ನೀವು ಎಲ್ಲವನ್ನೂ ವಿಶೇಷವಾಗಿಸಿದ್ದೀರಿ; ಕಣ್ಣೀರಿಡುತ್ತಾ ಭಾರತದಿಂದ ಹೊರಟ ವಿದೇಶಿ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 07, 2026 | 4:59 PM

Share

ಭಾರತದ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಇಷ್ಟ ಪಟ್ಟು ಭಾರತಕ್ಕೆ ಭೇಟಿ ನೀಡುವ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯ ಸವಿಯುತ್ತಾರೆ. ಹೀಗೆ ತಿಂಗಳುಗಳ ಕಾಲ ಇಲ್ಲೇ ಉಳಿದು ಆ ಬಳಿಕ ಇಲ್ಲಿಂದ ಹೊರಡುವಾಗ ಭಾವುಕರಾಗುತ್ತಾರೆ. ವಿದೇಶಿ ಮಹಿಳೆಗೂ ಇದೇ ಸಂದರ್ಭ ಎದುರಾಗಿದೆ. ಹೌದು, ಭಾರತದಿಂದ ಹುಟ್ಟೂರಿಗೆ ಹೊರಡು ನಿಂತ ವಿದೇಶಿ ಮಹಿಳೆ ಭಾವುಕರಾಗಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಹುಟ್ಟೂರಿಗೆ ಮರಳುವಾಗ ವಿದೇಶಿ ಮಹಿಳೆ ಭಾವುಕ

ಟೇರಿ ಎಮ್ಸಿಸಿಲ್ಯೂರ್ (Teri McClure) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಭಾರತಕ್ಕೆ ಭೇಟಿ ನೀಡಿರುವ ವಿದೇಶಿ ಮಹಿಳೆ, ಭಾರತದಲ್ಲಿ ನನ್ನ ಹೆಚ್ಚಿನ ಸಮಯ ಕಳೆದೆ. ಈ ದೇಶದಲ್ಲಿ ಕಳೆದ ಕ್ಷಣಗಳು ನನ್ನ ಮನಸ್ಸಿನಲ್ಲಿ ಸದಾ ಇರುತ್ತದೆ. ಇಲ್ಲಿ ಕಳೆದ ಪ್ರತಿಯೊಂದು ಕ್ಷಣವು ನನ್ನ ಜೀವನದ ಬೆಸ್ಟ್ ಟೈಮ್ ಆಗಿದೆ. ಭಾರತೀಯರೇ, ನೀವು ಎಲ್ಲವನ್ನೂ ತುಂಬಾ ವಿಶೇಷವಾಗಿಸಿದ್ದೀರಿ ಎಂದು ಹೇಳಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮೊದಲ ಬಾರಿಗೆ ಪಾವ್ ಭಾಜಿ ಸವಿದು ಕ್ಯೂಟ್ ರಿಯಾಕ್ಷನ್ ಕೊಟ್ಟ ಕೆನಡಿಯನ್ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ಪ್ರಯಾಣ ಖುಷಿಯಿಂದ ಕೂಡಿರಲಿ ಎಂದಿದ್ದಾರೆ. ಇನ್ನೊಬ್ಬರು, ಮತ್ತೆ ಬನ್ನಿ, ನಾವೆಲ್ಲಾ ಇಲ್ಲಿಯೇ ಇದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಹ್ಯಾಪಿ ಜರ್ನಿ ಮ್ಯಾಮ್, ನಾವೆಲ್ಲರೂ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!