AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !

ಯುಎಸ್​ನ ಮದ್ಯಪ್ರಿಯರು ಉಕ್ರೇನ್​ಗೆ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ವಿಭಿನ್ನ ಮಾರ್ಗದಲ್ಲಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಈ ಉಪಕ್ರಮವನ್ನು ಶುರುಮಾಡಿದ್ದು ಲಾಸ್​ ವೇಗಾಸ್​​ನಲ್ಲಿರುವ ಒಂದು ಬಾರ್​.

Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !
ರಷ್ಯಾದ ವೋಡ್ಕಾ
TV9 Web
| Edited By: |

Updated on: Feb 28, 2022 | 5:14 PM

Share

ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುನೈಟೆಡ್​ ಸ್ಟೇಟ್ಸ್​​ನ (United States) ಲಾಸ್​ ವೇಗಾಸ್​​ನಲ್ಲಿ ರಷ್ಯಾ ತಯಾರಿತ ವೋಡ್ಕಾ ಖರೀದಿಸುವವರ ಸಂಖ್ಯೆ ಮಿತಿಮೀರಿದೆ. ರಷ್ಯಾ ಉಕ್ರೇನ್​ ಮೇಲೆ ಯುದ್ಧ ಸಾರುವುದನ್ನು ಯುಎಸ್​ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದೆ. ಹೀಗಿದ್ದ ಮೇಲೆ ಅಲ್ಲಿನ ಜನರು ಯಾಕೆ ರಷ್ಯಾ ವೋಡ್ಕಾವನ್ನು ಈ ಪರಿ ಖರೀದಿಸುತ್ತಿದ್ದಾರೆ? ಖುಷಿಗಾಗಿ ವೋಡ್ಕಾ ಖರೀದಿ ಮಾಡ್ತಿದ್ದಾರಾ? ಎಂಬಿತ್ಯಾದಿ ಪ್ರಶ್ನೆ ಮೂಡ್ತಿರಬಹುದು. ಆದರೆ ವಾಸ್ತವ ಎಂದರೆ, ಜನರು ತಾವು ಖರೀದಿಸಿದ ವೋಡ್ಕಾವನ್ನು ಚರಂಡಿಗೆ ಸುರಿಯುತ್ತಿದ್ದಾರೆ. ಈ ಮೂಲಕ ಉಕ್ರೇನ್​ ಮೇಲಿನ ರಷ್ಯಾ ಆಕ್ರಮಣವನ್ನು ವಿರೋಧಿಸುತ್ತಿದ್ದಾರೆ.

ಯುಎಸ್​ನ ಮದ್ಯಪ್ರಿಯರು ಉಕ್ರೇನ್​ಗೆ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ವಿಭಿನ್ನ ಮಾರ್ಗದಲ್ಲಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಈ ಉಪಕ್ರಮವನ್ನು ಶುರುಮಾಡಿದ್ದು ಲಾಸ್​ ವೇಗಾಸ್​​ನಲ್ಲಿರುವ ಒಂದು ಬಾರ್​. ಮತ್ತೇನೂ ಅಲ್ಲ, ಇವರೆಲ್ಲ ಪುಕ್ಕಟೆಯಾಗಿ ರಷ್ಯಾ ವೋಡ್ಕಾವನ್ನು ಹಾಳುಗೆಡವುತ್ತಿಲ್ಲ. ಹಣಕೊಟ್ಟು ಖರೀದಿ ಮಾಡಿ, ನಂತರ ಅದನ್ನು ತೆಗೆದುಕೊಂಡು ಹೋಗಿ ಚರಂಡಿಗೆ ಸುರಿಯುತ್ತಿದ್ದಾರೆ. ನಂತರ ಇವರೆಲ್ಲ ಪಾವತಿಸಿದ ಹಣವನ್ನು ಉಕ್ರೇನ್​​ಗೆ ಮಾನವೀಯ ನೆರವಿನ ರೂಪದಲ್ಲಿ ಕಳಿಸಲು ಬಾರ್ ನಿರ್ಧಾರ ಮಾಡಿದೆ. ಪುಟಿನ್​ ಉಕ್ರೇನ್​​ನ್ನು ಅಕ್ರಮವಾಗಿ ಅತಿಕ್ರಮಣ ಮಾಡಿಕೊಂಡಿದ್ದಾರೆ. ಅವರು ಅಲ್ಲಿಂದ ಹೋಗುವವರೆಗೂ ಹೀಗೆ ರಷ್ಯಾದ ವೋಡ್ಕಾ ಖರೀದಿಸಿ, ಚೆಲ್ಲುವ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಲಾಸ್​ ವೇಗಾಸ್ ಬಾರ್ ಮಾಲೀಕರು ಹೇಳಿದ್ದಾಗಿ ಫಾಕ್ಸ್​ ನ್ಯೂಸ್ ವರದಿ ಮಾಡಿದೆ. ಅಷ್ಟೇ ಅಲ್ಲ, ಯುಎಸ್​ನಲ್ಲಿ ರಷ್ಯಾ ವೋಡ್ಕಾ ನಿರ್ಬಂಧಿಸಿ ಎಂಬ ಅಭಿಯಾನ ಟ್ವಿಟರ್​​ನಲ್ಲೂ ಶುರುವಾಗಿದೆ.

ಇದನ್ನೂ ಓದಿ: ಬೆನ್ನತ್ತಿ ಬಂತು ಯುದ್ಧ; ಅಫ್ಘಾನ್​​ನಿಂದ ತಪ್ಪಿಸಿಕೊಂಡು ಉಕ್ರೇನ್​ಗೆ ಬಂದಿದ್ದ ವ್ಯಕ್ತಿಯ ದುರದೃಷ್ಟದ ಕತೆ ಇದು

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ