AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !

ಯುಎಸ್​ನ ಮದ್ಯಪ್ರಿಯರು ಉಕ್ರೇನ್​ಗೆ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ವಿಭಿನ್ನ ಮಾರ್ಗದಲ್ಲಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಈ ಉಪಕ್ರಮವನ್ನು ಶುರುಮಾಡಿದ್ದು ಲಾಸ್​ ವೇಗಾಸ್​​ನಲ್ಲಿರುವ ಒಂದು ಬಾರ್​.

Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !
ರಷ್ಯಾದ ವೋಡ್ಕಾ
TV9 Web
| Edited By: |

Updated on: Feb 28, 2022 | 5:14 PM

Share

ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುನೈಟೆಡ್​ ಸ್ಟೇಟ್ಸ್​​ನ (United States) ಲಾಸ್​ ವೇಗಾಸ್​​ನಲ್ಲಿ ರಷ್ಯಾ ತಯಾರಿತ ವೋಡ್ಕಾ ಖರೀದಿಸುವವರ ಸಂಖ್ಯೆ ಮಿತಿಮೀರಿದೆ. ರಷ್ಯಾ ಉಕ್ರೇನ್​ ಮೇಲೆ ಯುದ್ಧ ಸಾರುವುದನ್ನು ಯುಎಸ್​ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದೆ. ಹೀಗಿದ್ದ ಮೇಲೆ ಅಲ್ಲಿನ ಜನರು ಯಾಕೆ ರಷ್ಯಾ ವೋಡ್ಕಾವನ್ನು ಈ ಪರಿ ಖರೀದಿಸುತ್ತಿದ್ದಾರೆ? ಖುಷಿಗಾಗಿ ವೋಡ್ಕಾ ಖರೀದಿ ಮಾಡ್ತಿದ್ದಾರಾ? ಎಂಬಿತ್ಯಾದಿ ಪ್ರಶ್ನೆ ಮೂಡ್ತಿರಬಹುದು. ಆದರೆ ವಾಸ್ತವ ಎಂದರೆ, ಜನರು ತಾವು ಖರೀದಿಸಿದ ವೋಡ್ಕಾವನ್ನು ಚರಂಡಿಗೆ ಸುರಿಯುತ್ತಿದ್ದಾರೆ. ಈ ಮೂಲಕ ಉಕ್ರೇನ್​ ಮೇಲಿನ ರಷ್ಯಾ ಆಕ್ರಮಣವನ್ನು ವಿರೋಧಿಸುತ್ತಿದ್ದಾರೆ.

ಯುಎಸ್​ನ ಮದ್ಯಪ್ರಿಯರು ಉಕ್ರೇನ್​ಗೆ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ವಿಭಿನ್ನ ಮಾರ್ಗದಲ್ಲಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಈ ಉಪಕ್ರಮವನ್ನು ಶುರುಮಾಡಿದ್ದು ಲಾಸ್​ ವೇಗಾಸ್​​ನಲ್ಲಿರುವ ಒಂದು ಬಾರ್​. ಮತ್ತೇನೂ ಅಲ್ಲ, ಇವರೆಲ್ಲ ಪುಕ್ಕಟೆಯಾಗಿ ರಷ್ಯಾ ವೋಡ್ಕಾವನ್ನು ಹಾಳುಗೆಡವುತ್ತಿಲ್ಲ. ಹಣಕೊಟ್ಟು ಖರೀದಿ ಮಾಡಿ, ನಂತರ ಅದನ್ನು ತೆಗೆದುಕೊಂಡು ಹೋಗಿ ಚರಂಡಿಗೆ ಸುರಿಯುತ್ತಿದ್ದಾರೆ. ನಂತರ ಇವರೆಲ್ಲ ಪಾವತಿಸಿದ ಹಣವನ್ನು ಉಕ್ರೇನ್​​ಗೆ ಮಾನವೀಯ ನೆರವಿನ ರೂಪದಲ್ಲಿ ಕಳಿಸಲು ಬಾರ್ ನಿರ್ಧಾರ ಮಾಡಿದೆ. ಪುಟಿನ್​ ಉಕ್ರೇನ್​​ನ್ನು ಅಕ್ರಮವಾಗಿ ಅತಿಕ್ರಮಣ ಮಾಡಿಕೊಂಡಿದ್ದಾರೆ. ಅವರು ಅಲ್ಲಿಂದ ಹೋಗುವವರೆಗೂ ಹೀಗೆ ರಷ್ಯಾದ ವೋಡ್ಕಾ ಖರೀದಿಸಿ, ಚೆಲ್ಲುವ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಲಾಸ್​ ವೇಗಾಸ್ ಬಾರ್ ಮಾಲೀಕರು ಹೇಳಿದ್ದಾಗಿ ಫಾಕ್ಸ್​ ನ್ಯೂಸ್ ವರದಿ ಮಾಡಿದೆ. ಅಷ್ಟೇ ಅಲ್ಲ, ಯುಎಸ್​ನಲ್ಲಿ ರಷ್ಯಾ ವೋಡ್ಕಾ ನಿರ್ಬಂಧಿಸಿ ಎಂಬ ಅಭಿಯಾನ ಟ್ವಿಟರ್​​ನಲ್ಲೂ ಶುರುವಾಗಿದೆ.

ಇದನ್ನೂ ಓದಿ: ಬೆನ್ನತ್ತಿ ಬಂತು ಯುದ್ಧ; ಅಫ್ಘಾನ್​​ನಿಂದ ತಪ್ಪಿಸಿಕೊಂಡು ಉಕ್ರೇನ್​ಗೆ ಬಂದಿದ್ದ ವ್ಯಕ್ತಿಯ ದುರದೃಷ್ಟದ ಕತೆ ಇದು

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ