AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Laddu Row-: ತಿರುಪತಿ ಪ್ರತ್ಯೇಕ ರಾಜ್ಯವಾಗಬೇಕು, ನೋ ವೇ ಚಾನ್ಸೆ ಇಲ್ಲ ಎಂದ ಸುಪ್ರೀಂ

ತಿರುಪತಿ ದೇವಾಲಯದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ನವೆಂಬರ್‌ 8) ವಜಾಗೊಳಿಸಿದೆ.

Tirupati Laddu Row-: ತಿರುಪತಿ ಪ್ರತ್ಯೇಕ ರಾಜ್ಯವಾಗಬೇಕು, ನೋ ವೇ ಚಾನ್ಸೆ ಇಲ್ಲ ಎಂದ ಸುಪ್ರೀಂ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Nov 08, 2024 | 6:30 PM

Share

ವೈ.ಎಸ್‌ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಾಲಯದಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ನವೆಂಬರ್‌ 8) ವಜಾಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತ ಮತ್ತು ಗ್ಲೋಬಲ್‌ ಪೀಸ್‌ ಇನಿಶಿಯೇಟಿವ್‌ ಸಂಘಟನೆಯ ಅಧ್ಯಕ್ಷ ಕೆ.ಎ.ಪಾಲ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು. ಈ ಬಗ್ಗೆ ಖುದ್ದು ಪಾಲ್‌ ಅವರೇ ವಾದ ಮಂಡಿಸಿದ್ದು, ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿಗಳಾದ ಬಿ.ಆರ್‌. ವಾಯಿ ಮತ್ತು ಕೆ.ವಿ ವಿಶ್ವನಾಥನ್‌ ಅವರಿದ್ದ ಪೀಠ ಸಿಬಿಐ ತನಿಖೆ ಮತ್ತು ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

“ನೀವು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದರೆ ನಾವು ಎಲ್ಲಾ ದೇವಾಲಯಗಳು, ಗುರುದ್ವಾರಗಳು ಹಾಗೂ ಇತ್ಯಾದಿ ಪುಣ್ಯ ಸ್ಥಳಗಳಿಗೆ ಪ್ರತ್ಯೇಕ ರಾಜ್ಯಗಳನ್ನು ರಚಿಸಬೇಕಾಗುತ್ತದೆ. ಹಾಗಾಗಿ ನಿರ್ಧಿಷ್ಟ ಧರ್ಮಕ್ಕಾಗಿ ನಾವು ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಹೀಗಾಗಿ ಅರ್ಜಿಯನ್ನು ವಜಾಗೊಳಿಸುತ್ತೇವೇ” ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಆ ಸಂಭಾಜಿ ಮಹರಾಜ ಯಾರು? ಈ ಭೂಮಿ ನಿಜಾಮರಿಗೆ ಸೇರಿದ್ದು; ಮುಸ್ಲಿಂ ಮಹಿಳೆಯ ವಿವಾದಾತ್ಮಕ ಹೇಳಿಕೆ

ತಿರುಪತಿ ಲಡ್ಡು ಪ್ರಸಾದವನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್‌ ವರದಿ ಬಂದ ನಂತರ ಹಾಗೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪಗಳು ಭಕ್ತರಲ್ಲಿ ತೋವ್ರ ಕಳವಳ ಮೂಡಿಸಿತ್ತು. ಹೀಗಾಗಿ ಲಡ್ಡು ಪ್ರಸಾದ ತಯಾರಿಕೆಯ ಸುತ್ತಲಿನ ಭ್ರಷ್ಟಾಚಾರ ಹಾಗೂ ಅದರ ಸುತ್ತಲಿನ ಆರೋಪದ ಬಗ್ಗೆ ಸಿಬಿಐ ಸಮಗ್ರ ತನಿಖೆ ನಡೆಸಬೇಕೆಂದು ಪಾಲ್‌ ಮನವಿ ಮಾಡಿದ್ದರು. ಅಲ್ಲದೆ ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಆಗಸ್ಟ್‌ 4 ರಂದು ಐವರು ಸದಸ್ಯರ ನೇತೃತ್ವದ ಎಸ್.ಐ.ಟಿ ಯನ್ನು ಕೂಡಾ ರಚನೆ ಮಾಡಿತ್ತು. ಇದೀಗ ಸಿಬಿಐ ತನಿಖೆ ನಡೆಸಬೇಕೆಂದು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?