AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ಪಡೆಯುವಾಗ ಉಚಿತವಾಗಿ ಡ್ರಾಪ್ ನೀಡುತ್ತಿದ್ದ ಟ್ರಕ್ ಚಾಲಕರಿಗೆ ಉಡುಗೊರೆ ನೀಡಿದ ಮೀರಾಬಾಯಿ ಚಾನು

ಮೀರಾಬಾಯಿ ಚಾನು: ನಿಮ್ಮ ಜಿವನದಲ್ಲಿ ಸಹಾಯ ಮಾಡಿದ ಯಾರನ್ನೂ ನೀವು ಮರೆಯಲಿಲ್ಲ. ಅವರಿಗೆ ಉಡುಗೊರೆ ನೀಡಿ ಕೃತಜ್ಞತೆ ಸಲ್ಲಿಸಿದ್ದೀರಿ. ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.

ತರಬೇತಿ ಪಡೆಯುವಾಗ ಉಚಿತವಾಗಿ ಡ್ರಾಪ್ ನೀಡುತ್ತಿದ್ದ ಟ್ರಕ್ ಚಾಲಕರಿಗೆ ಉಡುಗೊರೆ ನೀಡಿದ ಮೀರಾಬಾಯಿ ಚಾನು
TV9 Web
| Edited By: |

Updated on:Aug 06, 2021 | 12:05 PM

Share

ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸುವುದು ಸುಂದರ ಭಾವನೆಗಳಲ್ಲಿ ಒಂದಾಗಿದೆ. ಕಷ್ಟದ ಸಮಯದಲ್ಲಿ ಸಹಾಯ ಮಾಡಿದವರಿಗೆ ನಾವು ಎಂದಿಗೂ ಕೃತಜ್ಞರಾಗಿರಲೇಬೇಕು. ಅಂದಹಾಗೆ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಮೀರಾಬಾಯಿ ಚಾನು ಗೆದ್ದು ಬೆಳ್ಳಿ ಪದಕ ಪಡೆದರು. ಅವರ ಕನಸು ನನಸಾಗಲು ತರಬೇತಿ ಸಮಯದಲ್ಲಿ ಸಹಾಯ ಮಾಡುತ್ತಿದ್ದ ಟ್ರಕ್ ಚಾಲಕರಿಗೆ ಮೀರಾಬಾಯಿ ಚಾನು ಉಡುಗೊರೆ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಮೀರಾಬಾಯಿ ಚಾನು ತರಬೇತಿ ಪಡೆಯಲು ಅದೆಷ್ಟೋ ದೂರ ಕ್ರಮಿಸಬೇಕಿತ್ತು. ಅವರ ಹಳ್ಳಿಯಿಂದ 30 ಕಿ.ಮೀ ದೂರದಲ್ಲಿರುವ ಕ್ರೀಡಾ ಅಕಾಡೆಮಿಗೆ ತಲುಪಲು ಕಷ್ಟವಾಗುತ್ತಿತ್ತು. ಯಾವುದೇ ಸೌಕರ್ಯಗಳು ಕೂಡಾ ಇರಲಿಲ್ಲ. ಅಂತಹ ಸಂದರ್ಭದಲ್ಲಿ ಮೀರಾಬಾಯಿ ಚಾನು ಅವರಿಗೆ ಟ್ರಕ್ ಚಾಲಕರು ಡ್ರಾಪ್ ನೀಡುತ್ತಿದ್ದರು. ಅವರಲ್ಲಿ ಯಾವುದೇ ಹಣ ಪಡೆಯದೇ ಉಚಿತವಾಗಿ ಸಹಾಯ ಮಾಡುತ್ತಿದ್ದ ಟ್ರಕ್ ಚಾಲಕರನ್ನು ಗುರುತಿಸಿ ಮೀರಾಬಾಯಿ ಚಾನು ಉಡುಗೊರೆ ನೀಡಿ ಕೃತಜ್ಞತೆ ತಿಳಿಸಿದ್ದಾರೆ.

ತಮಗೆ ಮಾಡಿದ ಸಹಾಯವನ್ನು ಮರೆಯದೇ ಮೀರಾಬಾಯಿ ಚಾಲಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸುಮಾರು 150 ಟ್ರಕ್ ಚಾಲಕರಿಗೆ ಉಡುಗೊರೆ ನಿಡಿದ್ದಾರೆ. ಕಷ್ಟದ ಸಮಯದಲ್ಲಿ ಸಹಾಯ ಮಾಡಿ ಕನಸನ್ನು ನನಸು ಮಾಡಲು ಹುರಿದುಂಬಿಸಿದ ಚಾಲಕರ ಬಗ್ಗೆ ಮಾತನಾಡುತ್ತಾ ಕೆಲ ಸಮಯ ಭಾವುಕರಾಗಿದ್ದಾರೆ.

ತರಬೇತಿ ಪಡೆಯುವಾಗ ಮನೆಯಿಂದ ಅದೆಷ್ಟೋ ದೂರ ಕ್ರಮಿಸಬೇಕಿತ್ತು. ಆ ಸಮಯದಲ್ಲಿ ನನಗೆ ಸಹಾಯ ಮಾಡಿದ ಟ್ರಕ್ ಚಾಲಕರಿಗೆ ನಾನು ಎಂದೂ ಕೃತಜ್ಞಳಾಗಿರುತ್ತೇನೆ. ಅವರ ಆಶೀರ್ವಾದ ನನ್ನ ಮೇಲೆ ಸದಾ ಇರಬೇಕು. ನನ್ನ ಕಷ್ಟದ ಸಮಯದಲ್ಲಿ ಅವರು ಸಹಾಯ ಮಾಡಿದ್ದಾರೆ ಎಂದು ಮೀರಾಬಾಯಿ ಚಾನು ಮಾತನಾಡಿದ್ದಾರೆ.

ನಿಮ್ಮ ಜಿವನದಲ್ಲಿ ಸಹಾಯ ಮಾಡಿದ ಯಾರನ್ನೂ ನೀವು ಮರೆಯಲಿಲ್ಲ. ಅವರಿಗೆ ಉಡುಗೊರೆ ನೀಡಿ ಕೃತಜ್ಞತೆ ಸಲ್ಲಿಸಿದ್ದೀರಿ. ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

Mirabai Chanu: ಸಿನಿಮಾ ಆಗಲಿದೆ ಮೀರಾಬಾಯಿ ಚಾನು ಜೀವನ: ಯಾವ ಭಾಷೆಯಲ್ಲಿ ಬರಲಿದೆ ಗೊತ್ತಾ?

ಒಲಿಂಪಿಕ್ಸ್​​ನಲ್ಲಿ ಪದಕ ಗೆದ್ದ ಲವ್ಲಿನಾ, ಪಿ.ವಿ.ಸಿಂಧು, ಮೀರಾಬಾಯಿ ಚಾನುರಿಗೆ ಅಮುಲ್​ ಅಭಿನಂದನೆ..

Published On - 12:01 pm, Fri, 6 August 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?