AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ 14 ಗಂಟೆ ದುಡಿದ್ರೂ ಮಧ್ಯರಾತ್ರಿ ಫೋನ್​​ ಮಾಡಿ ಕಿರುಕುಳ ನೀಡಿದ ಮ್ಯಾನೇಜರ್‌

ಕೆಲಸದ ಸ್ಥಳದಲ್ಲಿ ಮ್ಯಾನೇಜರ್‌ನಿಂದ ಮಹಿಳೆಗೆ ಆದ ಕಿರುಕುಳದ ಬಗ್ಗೆ ಪೋಸ್ಟ್​​ವೊಂದು ವೈರಲ್ ಆಗಿದೆ. 14 ಗಂಟೆಗಳ ಕಾಲ ಕೆಲಸ ಮಾಡಿದ ನಂತರವೂ ರಾತ್ರಿ 2.45ಕ್ಕೆ ಮೆಸೇಜ್ ಮಾಡಿ ತೊಂದರೆ ನೀಡಿದ್ದು, ಉತ್ತರಿಸದಿದ್ದಕ್ಕೆ ಬಾಯಿಗೆ ಬಂದಂತೆ ಬೈದಿದ್ದಾರೆ. ಇದು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದು, ಇಂತಹ ಘಟನೆಗಳು ಕೆಲಸದ ವಾತಾವರಣವನ್ನು ಕೆಡಿಸುತ್ತವೆ ಎಂದು ಮಹಿಳೆ ಹೇಳಿದ್ದಾರೆ.

ದಿನಕ್ಕೆ 14 ಗಂಟೆ ದುಡಿದ್ರೂ ಮಧ್ಯರಾತ್ರಿ ಫೋನ್​​ ಮಾಡಿ ಕಿರುಕುಳ ನೀಡಿದ ಮ್ಯಾನೇಜರ್‌
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 11, 2025 | 10:48 AM

Share

ಸಾಮಾಜಿಕ ಜಾಲತಾಣದಲ್ಲಿ ಕೆಲಸದ ಅವಧಿಯ ಬಗ್ಗೆ ಪ್ರತಿದಿನ ಚರ್ಚೆಗಳು ನಡೆಯುತ್ತ ಇರುತ್ತದೆ. ಇದೀಗ ಇಲ್ಲೊಂದು ಪೋಸ್ಟ್​​​ ಭಾರೀ ಚರ್ಚೆಗೆ ಕಾರಣವಾಗಿದೆ. 24 ವರ್ಷದ ಮಹಿಳೆಯೊಬ್ಬರು ತಮ್ಮ ಕೆಲಸ ಸ್ಥಳದಲ್ಲಿ ನಡೆದ ಕೆಟ್ಟ ಅನುಭವದ (workplace harassment) ಬಗ್ಗೆ ಹಂಚಿಕೊಂಡಿದ್ದಾರೆ. ಟೀಮ್​​​​ ಮ್ಯಾನೇಜರ್​​​ 14 ಗಂಟೆ ಕೆಲಸ ಮಾಡಿದ ನಂತರವೂ ಬೆಳಗಿನ ಜಾವ 2.45ಕ್ಕೆ ಮತ್ತೆ ಮೆಸೇಜ್​ ಮಾಡಿ ಕಾಟ ನೀಡಿದ್ದಾರೆ ಎಂದು ಪೋಸ್ಟ್​​​ನಲ್ಲಿ ಹಂಚಿಕೊಂಡಿದ್ದಾರೆ. ಕಂಪನಿಗಳಲ್ಲಿ ಆಗುವ ಇಂಥಹ ಘಟನೆಗಳಿಗೆ ನೆಟ್ಟಿಗರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟ್​​ನ್ನು ಮಹಿಳೆ ರೆಡ್ಡಿಟ್​​​ನಲ್ಲಿ ಹಂಚಿಕೊಂಡಿದ್ದಾರೆ.

ರೀತಿಯ ಧೋರಣೆಗಳು ಕೆಲಸದ ಮೇಲೆ ಕೆಟ್ಟ ಪರಿಣಾಮವನ್ನು ಉಂಟು ಮಾಡುತ್ತದೆ ಹಾಗೂ ಮಾನಸಿಕ ಹಾನಿಯನ್ನು ಉಂಟು ಮಾಡುತ್ತದೆ ಎಂದು ಮಹಿಳೆ ಹೇಳಿದ್ದಾರೆ. ಮಹಿಳೆ ಪೋಸ್ಟ್​​​ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ. “ಕಳೆದ ಎರಡು ವಾರಗಳಿಂದ ನಾನು 14 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇನೆ. ಶನಿವಾರಭಾನುವಾರ ಕೂಡ ಕೆಲಸ ಮಾಡಿದ್ದಾನೆ. ಅದ್ರೂ ನನ್ನ ಮ್ಯಾನೇಜರ್​​​ಗೆ ತೃಪ್ತಿ ಇಲ್ಲ. ಬೆಳಿಗ್ಗೆ 2:45 ಕ್ಕೆ ಮೆಸೇಜ್ ಮಾಡಿ, ಕೆಲಸದ ಬಗ್ಗೆ ಅಪ್ಡೇಟ್​​​ ಕೇಳಿದ್ದಾರೆ. ಇದಕ್ಕೆ ನೀವು ಈಗಲೇ ಉತ್ತರಿಸಿ ಎಂದು ಹೇಳಿದ್ದಾರೆ. ಆದರೆ ನಾನು ಆಗ ನಿದ್ರೆ ಮಾಡುತ್ತಿದ್ದ ಕಾರಣ, ಅವರ ಮೆಸೇಜ್​​ಗೆ​​ ಉತ್ತರಿಸಿಲ್ಲ. ಕೋಪಕ್ಕೆ ಅವರು ನನ್ನನ್ನು ಬಾಯಿಗೆ ಬಂದಂತೆ ಬೈದಿದ್ದಾರೆ. ಜತೆಗೆ ನಾನೇ ಕ್ಷಮೆ ಕೇಳಬೇಕು ಎಂದು ಅಹಂಕಾರದಲ್ಲಿ ಮಾತನಾಡಿದ್ದಾರೆ.” ಎಂದು ಹೇಳಿದ್ದಾರೆ.

ಮಹಿಳೆ ಮ್ಯಾನೇಜರ್​​ ಬಗ್ಗೆ ಕಂಪನಿಯ ಉತನ್ನ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನ ಆಗಿಲ್ಲ. ಯಾಕೆಂದರೆ ಮ್ಯಾನೇಜರ್​​​ ಪ್ರಭಾವಿ ಸ್ಥಾನದಲ್ಲಿ ಇರುವ ಕಾರಣ ಅಲ್ಲಿ ಯಾವ ದೂರಿಗೂ ಬೆಲೆ ಇರಲಿಲ್ಲ. ರೀತಿಯ ಧೋರಣೆಗಳು ಮಾಸಿನಕವಾಗಿ ಕುಗ್ಗಿಸುತ್ತದೆ ಎಂದು ಮಹಿಳೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕೂಡ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಮ್ಯಾನೇಜರ್​​ ಈಗಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿಸಂಬಂಧಗಳ ನಡುವಿನ ರಹಸ್ಯ ಬಿಡಿಸಲು ಇಲ್ಲಿದೆ ಪ್ರಶ್ನೆ; ಈ ಒಗಟು ಬಿಡಿಸಿದ್ರೆ ನೀವು ಬುದ್ಧಿವಂತರು

ವೈರಲ್​​​​ ಪೋಸ್ಟ್​​ ಇಲ್ಲಿದೆ ನೋಡಿ:

My lead expects me to reply at 2:45 AM after a 14-hour day — I’m done byu/Ill-Amphibian-3117 inIndianWorkplace

ಇಲ್ಲೊಬ್ಬರು ತಮ್ಮ ಕೆಲಸದ ಸ್ಥಳದಲ್ಲಾದ ಕಹಿ ಅನುಭವವನ್ನು ಈ ಪೋಸ್ಟ್​ನ ಕೆಳಗೆ ಹಂಚಿಕೊಂಡಿದ್ದಾರೆ. “ನನ್ನ ಕಂಪನಿಗಳಲ್ಲೂ ಇಂತಹ ಘಟನೆ ನಡೆದಿತ್ತು. ಕಂಪನಿಯಲ್ಲಿ ನನಗೆ ಆಗುವ ಸಮಸ್ಯೆಗಳ ಬಗ್ಗೆ ಪ್ರಾಜೆಕ್ಟ್ ಮ್ಯಾನೇಜರ್​​​ಗೆ ದೂರು ನೀಡಿದೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ನಂತರ HR ಗೆ ದೂರು ನೀಡಿದೆ. ಅಲ್ಲೂ ಯಾವುದೇ ಪರಿಹಾರ ಸಿಕ್ಕಿಲ್ಲ. ನಂತರ ಮುಂಬೈ ಹೆಡ್​​​ ಆಫೀಸ್​​​ಗೆ ದೂರು ನೀಡಿದೆ. ಮುಂಬೈ ಹೆಡ್​​​ ಆಫೀಸ್​​​ನಿಂದ ನನಗೆ ಒಂದು ಇಮೇಲ್​​ ಬಂತು, ಸ್ವಲ್ಪ ದಿನ ಕಾಯಿರಿ, ಎಲ್ಲವನ್ನು ಸರಿ ಮಾಡುವ ಎಂದು ಹೇಳಿದ್ರು, ಆದರೆ ನನ್ನ ತಂಡವನ್ನೇ ಬದಲಾವಣೆ ಮಾಡುವಂತೆ ಒತ್ತಾಯಿಸಿದ್ರು, ಅದನ್ನು ಕೂಡ ಮಾಡಿದೆ. ಕೊನೆಗೆ ಅಲ್ಲಿ ಕೆಲಸ ಮಾಡಲು ಸಾಧ್ಯವಾಗದೆ, ನಾನು ರಾಜೀನಾಮೆ ನೀಡಿ ಹೊರ ಬಂದೆಎಂದು ಹೇಳಿಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?