AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡ್ರಗ್ಸ್​ ಸೇವಿಸಿ ಕಾರ್​ ಪುಡಿಗಟ್ಟಿದ ಹದಿಹರೆಯದ ಟ್ರ್ಯಾಕ್ಟರ್​ ಚಾಲಕನಿಗೆ ಜೈಲುಶಿಕ್ಷೆ

Accident : ಕಳೆದ ವರ್ಷ ಲಂಡನ್​ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸಿಸಿ ಕ್ಯಾಮೆರಾದ ದಾಖಲೆಯನ್ವಯ ಇದೀಗ ಟ್ರ್ಯಾಕ್ಟರ್​ ಚಾಲಕನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

Viral Video: ಡ್ರಗ್ಸ್​ ಸೇವಿಸಿ ಕಾರ್​ ಪುಡಿಗಟ್ಟಿದ ಹದಿಹರೆಯದ ಟ್ರ್ಯಾಕ್ಟರ್​ ಚಾಲಕನಿಗೆ ಜೈಲುಶಿಕ್ಷೆ
ಟ್ರ್ಯಾಕ್ಟರ್ ಕಾರ್​ ಅನ್ನು ನುಜ್ಜುಗುಜ್ಜಾಗಿಸಿರುವ ದೃಶ್ಯ
TV9 Web
| Edited By: ಶ್ರೀದೇವಿ ಕಳಸದ|

Updated on: Jun 07, 2023 | 10:34 AM

Share

Drugs : ಹತ್ತೊಂಬತ್ತು ವರ್ಷದ ಟ್ರ್ಯಾಕ್ಟರ್​ ಚಾಲಕನೊಬ್ಬ ಡ್ರಗ್ಸ್​ ಸೇವಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಎದುರಿನ ಕಾರನ್ನು ನುಜ್ಜುಗುಜ್ಜಾಗಿಸಿದ ವಿಡಿಯೋ ಇದೀಗವ ವೈರಲ್ ಆಗಿದೆ. ಲಂಡನ್​ನಲ್ಲಿ ನಡೆದ ಈ ಹಳೆಯ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕಾರ್ಲಿಸ್ಲೇ ಮ್ಯಾಜಿಸ್ಟ್ರೇಟ್​ ಕೋರ್ಟ್​ ಆರೋಪಿಗೆ 60 ಗಂಟೆಗಳ ಕಾಲ ಸಂಬಳರಹಿತ ಕೆಲಸ ಮತ್ತು  ಎಂಟು ವಾರಗಳ ಕಾಲ ಕೆಲಸದಿಂದ ಅಮಾನತುಗೊಳಿಸುವಂತೆ ಆದೇಶ ನೀಡಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ದುರ್ಘಟನೆಯು ಕಳೆದ ವರ್ಷದ ಸೆಪ್ಟೆಂಬರ್​ನಲ್ಲಿ ಸಫೋಲ್ಕ್​ನ ಮಿಲ್ಡೆನ್​ ಹಾಲ್​ ವಾಯುನೆಲೆಯ ಬಳಿ ಸಂಭವಿಸಿತ್ತು. 19 ವರ್ಷದ ಚಾಲಕ ಸೋವರ್ಬಿ ಕೊಕೇನ್ ಸೇವಿಸಿದ ಪರಿಣಾಮ ವೇಗಮಿತಿಯನ್ನು ಮೀರಿರುವುದಾಗಿ ತಿಳಿದು ಬಂದಿದೆ. ಜೂನ್ 6ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಲ್ಲಿ ಸದರಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ : Viral Video: ಕಪ್ಪಾ ಕ್ಲಾಸಿಕಲ್​ ವಿಥ್ ಕಾಫಿ ಗ್ಲಾಸ್​; 5 ಲಕ್ಷ ಜನರು ಮೆಚ್ಚಿದ ಈ ರೀಲ್ಸ್

ಕಾರ್​ ಡ್ರೈವರ್ ಕಾರ್​ ಅನ್ನು ರಸ್ತೆಬದಿಗೆ ಚಲಿಸಿದ್ದರಿಂದ ಅದೃಷ್ಟವಶಾತ್​ ಆತನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ವಾಯುನೆಲೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಮಾದಕ ವ್ಯಸನಿಯಾಗಿದ್ದ ಟ್ರ್ಯಾಕ್ಟರ್​ ಚಾಲಕ ನ್ಯಾಯಾಲಯದ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಈ ಹಳೆಯ ವಿಡಿಯೋ ನೋಡಿದ ನೆಟ್ಟಿಗರು, ಸದ್ಯ ಯಾರೂ ಪ್ರಾಣಾಪಾಯಕ್ಕೆ ಗುರಿಯಾಗಿಲ್ಲವಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. 3.1 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದು, ಸುಮಾರು 5 ಸಾವಿರ ಜನರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ