AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದ್ದಕ್ಕಿದ್ದಂತೆ ಶೋರೂಮ್​ಗೆ ನುಗ್ಗಿದ ಟ್ರಾಕ್ಟರ್​; ಎದೆ ಝಲ್ ಎನಿಸುವ ದೃಶ್ಯಾವಳಿ, ಮುಂದೇನಾಯ್ತು?

ಚಪ್ಪಲಿ ಅಂಗಡಿಯೊಂದರ ಮುಂದೆ ನಿಂತಿದ್ದ ಟ್ರಾಕ್ಟರ್ ಇದ್ದಕ್ಕಿದ್ದಂತೆ ತಾನಾಗಿಯೇ ಸ್ಟಾರ್ಟ್​ ಆಗಿ ಅಂಗಡಿಯೊಳಗೆ ನುಗ್ಗಿದೆ. ಘಟನೆಯಲ್ಲಿ ಶೋರೂಮ್‌ನ ಗ್ಲಾಸ್​ಗಳು ಪುಡಿ ಪುಡಿಯಾಗಿವೆ.

Viral Video: ಇದ್ದಕ್ಕಿದ್ದಂತೆ ಶೋರೂಮ್​ಗೆ ನುಗ್ಗಿದ ಟ್ರಾಕ್ಟರ್​; ಎದೆ ಝಲ್ ಎನಿಸುವ ದೃಶ್ಯಾವಳಿ, ಮುಂದೇನಾಯ್ತು?
ಅಂಗಡಿಗೆ ನುಗ್ಗಿದ ಚಾಲಕನಿಲ್ಲದ ಟ್ಯಾಕ್ಟರ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Mar 07, 2023 | 10:47 AM

Share

ಸಾಮಾಜಿಕ ಜಾಲತಾಣದಲ್ಲಿ ಅಚ್ಚರಿ ಮೂಡಿಸುವಂತಹ, ಭಯ ಭೀತರನ್ನಾಗಿಸುವ ವಿಡಿಯೋಗಳು ಹರಿದಾಡುತ್ತಿರುತ್ತವೆ. ಪಾರ್ಕ್ ಮಾಡಲಾಗಿದ್ದ ಟ್ರ್ಯಾಕ್ಟರ್​ ಇದ್ದಕ್ಕಿದ್ದಂತೆಯೇ ಸ್ಟಾರ್ಟ್​ ಆಗಿ ಅಂಗಡಿಯೊಂದಕ್ಕೆ ನುಗ್ಗಿ ಅಂಗಡಿಯ ಮುಂಭಾಗದ ಗಾಜನ್ನು ಪೀಸ್ ಪೀಸ್ ಮಾಡಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಎದೆ ಜಲ್ ಎನಿಸುವಂತಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಚಪ್ಪಲಿ ಅಂಗಡಿಯೊಂದರ ಮುಂದೆ ನಿಂತಿದ್ದ ಟ್ರಾಕ್ಟರ್ ಇದ್ದಕ್ಕಿದ್ದಂತೆ ತಾನಾಗಿಯೇ ಸ್ಟಾರ್ಟ್​ ಆಗಿ ಅಂಗಡಿಯೊಳಗೆ ನುಗ್ಗಿದೆ. ಘಟನೆಯಲ್ಲಿ ಶೋರೂಮ್‌ನ ಗ್ಲಾಸ್​ಗಳು ಪುಡಿ ಪುಡಿಯಾಗಿವೆ. ಹಾಗೂ ಹಲವು ಸೈಕಲ್‌ಗಳು ಜಖಂಗೊಂಡಿವೆ. ಟ್ವಿಟ್ಟರ್ ಖಾತೆಯೊಂದರಲ್ಲಿ ಒಂದು ನಿಮಿಷದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇನ್ನು ಟ್ರಾಕ್ಟರ್ ಅಂಗಡಿಯೊಳಕ್ಕೆ ನುಗ್ಗುತ್ತಿರುವುದು ತಿಳಿಯುತ್ತಿದ್ದಂತೆ ಅಂಗಡಿಯವರು ಭಯದಿಂದ ಹೊರಗೆ ಓಡಿ ಟ್ರ್ಯಾಕ್ಟರ್ ನಿಲ್ಲಿಸುವ ಪ್ರಯತ್ನ ಮಾಡಿದ್ದರು. ಆದ್ರೆ ಅಷ್ಟರಲ್ಲಾಗಲೇ ಟ್ರ್ಯಾಕ್ಟರ್ ಮತ್ತಷ್ಟು ಮುಂದಕ್ಕೆ ಬಂದು ಅಂಗಡಿಯ ಗಾಜನ್ನು ಪುಡಿ ಮಾಡಿತ್ತು. ಕೊನೆಗೆ ಸ್ಥಳದಲ್ಲಿದ್ದ ಓರ್ವ ವ್ಯಕ್ತಿ ಹೋಗಿ ಟ್ರ್ಯಾಕ್ಟರ್‌ ಎಂಜಿನ್ ಆಫ್‌ ಮಾಡುವಲ್ಲಿ ಯಶಸ್ವಿಯಾದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ, ಈ ಮಳಿಗೆಯವರಿಗೆ ಸಾಕಷ್ಟು ನಷ್ಟವಾಗಿದೆ. ಹಾಗೂ ಕೆಲವು ಸೈಕಲ್‌ಗಳು ಪುಡಿ ಪುಡಿಯಾಗಿವೆ.

ಇದನ್ನೂ ಓದಿ: Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಸಮಾಧಾನ್ ದಿವಸ್ ಕಾರ್ಯಕ್ರಮ ನಡೆಯುತ್ತಿದ್ದ ಬಿಜ್ನೋರ್ ಕೊತ್ವಾಲಿ ಸಿಟಿ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಅನೇಕರು ತಮ್ಮ ಕಾರುಗಳು ಮತ್ತು ಟ್ರ್ಯಾಕ್ಟರ್‌ಗಳನ್ನು ಆ ಪ್ರದೇಶದಲ್ಲಿ ಪಾರ್ಕ್ ಮಾಡಿ ಕಾರ್ಯಕ್ರಮಕ್ಕೆ ತೆರಳಿದ್ದರು. ಕಿಶನ್ ಕುಮಾರ್ ಎಂಬುವವರಿಗೆ ಸೇರಿದ್ದ ಟ್ರ್ಯಾಕ್ಟರ್ ಇಷ್ಟೊಂದು ಅವಘಡಕ್ಕೆ ಕಾರಣವಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:26 am, Mon, 6 March 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!