AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದ್ದಕ್ಕಿದ್ದಂತೆ ಶೋರೂಮ್​ಗೆ ನುಗ್ಗಿದ ಟ್ರಾಕ್ಟರ್​; ಎದೆ ಝಲ್ ಎನಿಸುವ ದೃಶ್ಯಾವಳಿ, ಮುಂದೇನಾಯ್ತು?

ಚಪ್ಪಲಿ ಅಂಗಡಿಯೊಂದರ ಮುಂದೆ ನಿಂತಿದ್ದ ಟ್ರಾಕ್ಟರ್ ಇದ್ದಕ್ಕಿದ್ದಂತೆ ತಾನಾಗಿಯೇ ಸ್ಟಾರ್ಟ್​ ಆಗಿ ಅಂಗಡಿಯೊಳಗೆ ನುಗ್ಗಿದೆ. ಘಟನೆಯಲ್ಲಿ ಶೋರೂಮ್‌ನ ಗ್ಲಾಸ್​ಗಳು ಪುಡಿ ಪುಡಿಯಾಗಿವೆ.

Viral Video: ಇದ್ದಕ್ಕಿದ್ದಂತೆ ಶೋರೂಮ್​ಗೆ ನುಗ್ಗಿದ ಟ್ರಾಕ್ಟರ್​; ಎದೆ ಝಲ್ ಎನಿಸುವ ದೃಶ್ಯಾವಳಿ, ಮುಂದೇನಾಯ್ತು?
ಅಂಗಡಿಗೆ ನುಗ್ಗಿದ ಚಾಲಕನಿಲ್ಲದ ಟ್ಯಾಕ್ಟರ್
ಆಯೇಷಾ ಬಾನು
| Updated By: Digi Tech Desk|

Updated on:Mar 07, 2023 | 10:47 AM

Share

ಸಾಮಾಜಿಕ ಜಾಲತಾಣದಲ್ಲಿ ಅಚ್ಚರಿ ಮೂಡಿಸುವಂತಹ, ಭಯ ಭೀತರನ್ನಾಗಿಸುವ ವಿಡಿಯೋಗಳು ಹರಿದಾಡುತ್ತಿರುತ್ತವೆ. ಪಾರ್ಕ್ ಮಾಡಲಾಗಿದ್ದ ಟ್ರ್ಯಾಕ್ಟರ್​ ಇದ್ದಕ್ಕಿದ್ದಂತೆಯೇ ಸ್ಟಾರ್ಟ್​ ಆಗಿ ಅಂಗಡಿಯೊಂದಕ್ಕೆ ನುಗ್ಗಿ ಅಂಗಡಿಯ ಮುಂಭಾಗದ ಗಾಜನ್ನು ಪೀಸ್ ಪೀಸ್ ಮಾಡಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಎದೆ ಜಲ್ ಎನಿಸುವಂತಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಚಪ್ಪಲಿ ಅಂಗಡಿಯೊಂದರ ಮುಂದೆ ನಿಂತಿದ್ದ ಟ್ರಾಕ್ಟರ್ ಇದ್ದಕ್ಕಿದ್ದಂತೆ ತಾನಾಗಿಯೇ ಸ್ಟಾರ್ಟ್​ ಆಗಿ ಅಂಗಡಿಯೊಳಗೆ ನುಗ್ಗಿದೆ. ಘಟನೆಯಲ್ಲಿ ಶೋರೂಮ್‌ನ ಗ್ಲಾಸ್​ಗಳು ಪುಡಿ ಪುಡಿಯಾಗಿವೆ. ಹಾಗೂ ಹಲವು ಸೈಕಲ್‌ಗಳು ಜಖಂಗೊಂಡಿವೆ. ಟ್ವಿಟ್ಟರ್ ಖಾತೆಯೊಂದರಲ್ಲಿ ಒಂದು ನಿಮಿಷದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇನ್ನು ಟ್ರಾಕ್ಟರ್ ಅಂಗಡಿಯೊಳಕ್ಕೆ ನುಗ್ಗುತ್ತಿರುವುದು ತಿಳಿಯುತ್ತಿದ್ದಂತೆ ಅಂಗಡಿಯವರು ಭಯದಿಂದ ಹೊರಗೆ ಓಡಿ ಟ್ರ್ಯಾಕ್ಟರ್ ನಿಲ್ಲಿಸುವ ಪ್ರಯತ್ನ ಮಾಡಿದ್ದರು. ಆದ್ರೆ ಅಷ್ಟರಲ್ಲಾಗಲೇ ಟ್ರ್ಯಾಕ್ಟರ್ ಮತ್ತಷ್ಟು ಮುಂದಕ್ಕೆ ಬಂದು ಅಂಗಡಿಯ ಗಾಜನ್ನು ಪುಡಿ ಮಾಡಿತ್ತು. ಕೊನೆಗೆ ಸ್ಥಳದಲ್ಲಿದ್ದ ಓರ್ವ ವ್ಯಕ್ತಿ ಹೋಗಿ ಟ್ರ್ಯಾಕ್ಟರ್‌ ಎಂಜಿನ್ ಆಫ್‌ ಮಾಡುವಲ್ಲಿ ಯಶಸ್ವಿಯಾದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ, ಈ ಮಳಿಗೆಯವರಿಗೆ ಸಾಕಷ್ಟು ನಷ್ಟವಾಗಿದೆ. ಹಾಗೂ ಕೆಲವು ಸೈಕಲ್‌ಗಳು ಪುಡಿ ಪುಡಿಯಾಗಿವೆ.

ಇದನ್ನೂ ಓದಿ: Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಸಮಾಧಾನ್ ದಿವಸ್ ಕಾರ್ಯಕ್ರಮ ನಡೆಯುತ್ತಿದ್ದ ಬಿಜ್ನೋರ್ ಕೊತ್ವಾಲಿ ಸಿಟಿ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಅನೇಕರು ತಮ್ಮ ಕಾರುಗಳು ಮತ್ತು ಟ್ರ್ಯಾಕ್ಟರ್‌ಗಳನ್ನು ಆ ಪ್ರದೇಶದಲ್ಲಿ ಪಾರ್ಕ್ ಮಾಡಿ ಕಾರ್ಯಕ್ರಮಕ್ಕೆ ತೆರಳಿದ್ದರು. ಕಿಶನ್ ಕುಮಾರ್ ಎಂಬುವವರಿಗೆ ಸೇರಿದ್ದ ಟ್ರ್ಯಾಕ್ಟರ್ ಇಷ್ಟೊಂದು ಅವಘಡಕ್ಕೆ ಕಾರಣವಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:26 am, Mon, 6 March 23

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು