AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Lights: ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗೆ ಸೇರ್ಪಡೆಯಾಗಲಿದೆ ‌ ನಾಲ್ಕನೇ ಬಣ್ಣ, ಆ ಬಣ್ಣ ಯಾವುದು ಗೊತ್ತಾ?

ಟ್ರಾಫಿಕ್‌ ಸಮಸ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಸ್ತೆಗಳಲ್ಲಿ ಕೆಂಪು, ಹಸಿರು ಮತ್ತು ಹಳದಿ ಬಣ್ಣದ ಟ್ರಾಫಿಕ್‌ ಲೈಟ್‌ಗಳನ್ನು ಅಳವಡಿಸಿರುತ್ತಾರೆ. ವಿಶ್ವದ ಎಲ್ಲಾ ಕಡೆಯೂ ಇದೇ ಮೂರು ಬಣ್ಣದ ಲೈಟ್‌ಗಳಿರುತ್ತವೆ. ಆದ್ರೆ ಇನ್ಮುಂದೆ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ನಾಲ್ಕನೆಯ ಬಣ್ಣ ಬರಲಿದೆಯಂತೆ. ಅದು ಏಕೆ ಮತ್ತು ಆ ಬಣ್ಣ ಯಾವುದು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ.

Traffic Lights: ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗೆ ಸೇರ್ಪಡೆಯಾಗಲಿದೆ ‌ ನಾಲ್ಕನೇ ಬಣ್ಣ, ಆ ಬಣ್ಣ ಯಾವುದು ಗೊತ್ತಾ?
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 12, 2024 | 4:54 PM

Share

ಟ್ರಾಫಿಕ್‌ ಸಿಗ್ನಲ್‌ ದೀಪಗಳು ಕೆಂಪು, ಹಸಿರು ಮತ್ತು ಹಳದಿ ಈ ಮೂರು ಬಣ್ಣದಲ್ಲಿರುತ್ತವೆ. ನಮ್ಮ ಭಾರತವಷ್ಟೇ ಅಲ್ಲ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಇದೇ ಬಣ್ಣದ ದೀಪಗಳಿರುತ್ತವೆ. ಟ್ರಾಫಿಕ್‌ ಸಮಸ್ಯೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಇವುಗಳನ್ನು ಅಳವಡಿಸಲಾಗುತ್ತದೆ. ಶತಮಾನಗಳಿಂದಲೂ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಈ ಮೂರು ಬಣ್ಣದ ಲೈಟ್‌ಗಳು ಮಾತ್ರ ಇವೆ. ಆದ್ರೆ ಇನ್ಮುಂದೆ ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗೆ ನಾಲ್ಕನೆಯ ಬಣ್ಣ ಸೇರ್ಪಡೆಯಾಗಲಿದೆಯಂತೆ. ಅದು ಏಕೆ ಮತ್ತು ಆ ಬಣ್ಣ ಯಾವುದು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಈಗಾಗಲೇ ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗೆ ನಾಲ್ಕನೇ ಬಣ್ಣವನ್ನು ಸೇರಿಸುವ ಪ್ರಸ್ತಾಪವನ್ನು ವಿಜ್ಞಾನಿಗಳು ಮಾಡಿದ್ದಾರೆ. ಹೌದು ನಾರ್ತ್‌ ಕೆರೊಲಿನಾ ಸ್ಟೇಟ್‌ ಯೂನಿವರ್ಸಿಟಿಯ ಇಂಜಿನಿಯರ್‌ಗಳು ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗಳಲ್ಲಿ ಹಳದಿ, ಕೆಂಪು ಮತ್ತು ಹಸಿರು ಲೈಟ್‌ಗಳ ಜೊತೆ ಬಿಳಿ ಬಣ್ಣದ ದೀಪವನ್ನು ಸಹ ಸೇರಿಸುವ ಪ್ರಸ್ತಾವನೆಯನ್ನು ಮಾಡಿದ್ದಾರೆ. ಈ ಹೊಸ ಹಂತವು ಟ್ರಾಫಿಕ್‌ ಸಮಸ್ಯೆಯನ್ನು ಕಡಿಮೆ ಮಾಡಲು, ಸ್ವಯಂ ಚಾಲಿತ ಕಾರುಗಳು (AV) ಹಾಗೂ ಮಾನವ ಚಾಲಕರ ನಡುವೆ ಉತ್ತಮ ಸಂವಹನವನ್ನು ಏರ್ಪಡಿಸುವ ಗುರಿಯನ್ನು ಹೊಂದಿದೆ.

ಈ ಅಧ್ಯಯನದ ಮುಖ್ಯಸ್ಥ ಡಾ. ಅಲಿ ಹಜ್ಬಾಬೈ ಅವರ ಪ್ರಕಾರ, “ಸ್ವಯಂ ಚಾಲಿತ ವಾಹನಗಳ ಕಂಪ್ಯೂಟರ್‌ ಸಾಮರ್ಥ್ಯದ ಮೂಲಕ ಯಾವ ವಾಹನಗಳು ಎಲ್ಲಿವೆ ಎಂಬುದನ್ನು ನಿರ್ಧರಿಸಲು ಬಿಳಿ ದೀಪಗಳನ್ನು ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಅಳವಡಿಸುವುದರ ಹಿಂದಿನ ಮುಖ್ಯ ಉದ್ದೇಶವಾಗಿದೆ.”

ಬಿಳಿ ಬಣ್ಣದ ಟ್ರಾಫಿಕ್‌ ದೀಪಗಳು ವಾಹನ ಸವಾರರಿಗೆ ಹೇಗೆ ಸಂಚರಿಸಬೇಕು ಎಂಬ ಮಾಹಿತಿನ್ನು ನೀಡಲಿದೆ. ಮತ್ತು ಇದರಿಂದ ಚಾಲಕರು ತಾವು ಏನು ಮಾಡಬೇಕು ಎಂಬುದನ್ನು ತಿಳಿಯುತ್ತಾರೆ. ಈ ಬಿಳಿ ಬಣ್ಣದ ದೀಪ ಕಾರು ಅಥವಾ ಯಾವುದೇ ವಾಹನವನ್ನು ಸರಳವಾಗಿ ಅನುಸರಿಸಲು ಚಾಲಕರಿಗೆ ಸೂಚನೆಯನ್ನು ನೀಡುವ ಕೆಲಸವನ್ನು ಮಾಡಲಿದೆ. ಅಲ್ಲದೆ ಇದು ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಇತರೆ ವಾಹನ ಚಾಲಕರೊಂದಿಗೆ ಸ್ವಯಂ ಚಾಲಿತ ಕಾರು ಸಂವಹನ ನಡೆಸಲು ಅನುವು ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಳೆಯುವ ತ್ವಚೆಗಾಗಿ ಮುಖಕ್ಕೆ ತನ್ನ ಮಲವನ್ನು ಹಚ್ಚುತ್ತಾಳಂತೆ ಈ ಮಾಡೆಲ್‌

ಈ ಪ್ರಸ್ತಾವನೆಯ ಪ್ರಕಾರ ಸ್ವಯಂ ಚಾಲಿತ ವಾಹನಗಳು ಟ್ರಾಫಿಕ್‌ ಸಿಗ್ನಲ್‌ಗಳನ್ನು ನಿರ್ವಹಿಸುವ ಕಂಪ್ಯೂಟರ್‌ಗಳೊಂದಿಗೆ ವೈರ್‌ಲೆಸ್‌ ಆಗಿ ಸಂವಹನ ನಡೆಸಲು ಸಾಧ್ಯವಾಗುತ್ತದೆ. ಸ್ವಯಂ ಚಾಲಿತ ವಾಹನಗಳ ಓಡಾಟ ಹೆಚ್ಚಾದ ಬಳಿಕವೇ ಈ ಹೊಸ ಬಿಳಿ ಬಣ್ಣದ ಸಿಗ್ನಲ್‌ ಲೈಟ್‌ ಅಳವಡಿಸಲಾಗುವುದು. ಈ ಸಂಶೋಧನೆ ಕಂಪ್ಯೂಟರ್‌-ಅಯ್ಡೆಡ್‌ ಸಿವಿಲ್‌ & ಇನ್ಫ್ರಾಸ್ಟ್ರಕ್ಚರ್‌ ಇಂಜಿನಿಯರಿಂಗ್‌ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್