AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ

ಪತಿ ಟ್ರಾಫಿಕ್ ನಿಯಮ(Traffic Rule) ಉಲ್ಲಂಘಿಸಿದ್ದಕ್ಕೆ ಪತ್ನಿಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಸಂಚಾರ ನಿಯಮ ಪಾಲಿಸದೇ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ

Viral News: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ
ಟ್ರಾಫಿಕ್ ಸಿಗ್ನಲ್Image Credit source: ABP Live
ನಯನಾ ರಾಜೀವ್
|

Updated on:May 11, 2023 | 9:25 AM

Share

ಪತಿ ಟ್ರಾಫಿಕ್ ನಿಯಮ(Traffic Rule) ಉಲ್ಲಂಘಿಸಿದ್ದಕ್ಕೆ ಪತ್ನಿಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಸಂಚಾರ ನಿಯಮ ಪಾಲಿಸದೇ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಪ್ರಿಲ್ 25 ರಂದು ವ್ಯಕ್ತಿಯೊಬ್ಬರು ಹೆಲ್ಮೆಟ್​ ಧರಿಸದೆ ಇದ್ದ ಕಾರಣ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದರು. ಸ್ಕೂಟಿಯು ಆ ವ್ಯಕ್ತಿಯ ಪತ್ನಿಯ ಹೆಸರಿನಲ್ಲಿದ್ದ ಕಾರಣ ಅವರ ಮೊಬೈಲ್​ಗೆ ಟ್ರಾಫಿಕ್ ಪೊಲೀಸ್ ಚಲನ್ ಜತೆಗೆ ಫೋಟೊವನ್ನು ಕಳುಹಿಸಿದ್ದರು.

ಆದರೆ ಆ ಫೋಟೊದಲ್ಲಿ ಪತಿ ಜತೆ ಬೇರೊಬ್ಬ ಮಹಿಳೆ ಇರುವುದನ್ನು ನೋಡಿ ಪತ್ನಿ ಕೋಪಗೊಂಡಿದ್ದಾಳೆ, ಗಾರ್ಮೆಂಟ್ಸ್​ ಅಂಗಡಿಯಲ್ಲಿ ಕೆಲಸ ಮಾಡುವ 32 ವರ್ಷದ ವ್ಯಕ್ತಿ ತನಗೆ ಆ ಮಹಿಳೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾನೆ. ಆಕೆಗೆ ಲಿಫ್ಟ್​ ನೀಡಿರುವುದಾಗಿ ಹೇಳಿದ್ದಾನೆ, ಆದರೆ ಪತ್ನಿ ಈ ಮಾತು ನಂಬದ ಕಾರಣ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಗೂಳಿಸವಾರಿ; ಪೊಲೀಸರೆದುರು ತಪ್ಪೊಪ್ಪಿಕೊಂಡ ಯುವಕ

ಈ ವಿಷಯ ಪೊಲೀಸ್​ ಠಾಣೆಯವರೆಗೂ ಹೋಗಿದೆ, ಮೇ 5 ರಂದು ನೀಡಿರುವ ದೂರಿನಲ್ಲಿ ಪತಿ ತನ್ನ 3 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾಳೆ, ಮಹಿಳೆಯ ಹೇಳಿಕೆಯ ಆಧಾರದ ಮೇಲೆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರನ್ನು ಐಪಿಸಿ ಸೆಕ್ಷನ್ 321,341, 294 ಮತ್ತು ಸೆಕ್ಷನ್ 75 ರ ಅಡಿಯಲ್ಲಿ ಬಂಧಿಸಲಾಗಿದೆ.

ಸಂಚಾರ ನಿಯಮ ಪಾಲಿಸದಿದ್ದರೆ ಹೇಗೆಲ್ಲಾ ಸಮಸ್ಯೆಯಾಗಬಹುದು ಎಂದು ತಿಳಿಯಿತಲ್ಲಾ ಹಾಗಾಗಿ ಇನ್ನು ಮುಂದಾದರೂ ಪ್ರತಿಯೊಬ್ಬರೂ ಸಂಚಾರ ನಿಯಮವನ್ನು ತಪ್ಪಿಲ್ಲದೇ ಪಾಲಿಸಿ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 11 May 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ