Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ

ಪತಿ ಟ್ರಾಫಿಕ್ ನಿಯಮ(Traffic Rule) ಉಲ್ಲಂಘಿಸಿದ್ದಕ್ಕೆ ಪತ್ನಿಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಸಂಚಾರ ನಿಯಮ ಪಾಲಿಸದೇ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ

Viral News: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ
ಟ್ರಾಫಿಕ್ ಸಿಗ್ನಲ್Image Credit source: ABP Live
Follow us
ನಯನಾ ರಾಜೀವ್
|

Updated on:May 11, 2023 | 9:25 AM

ಪತಿ ಟ್ರಾಫಿಕ್ ನಿಯಮ(Traffic Rule) ಉಲ್ಲಂಘಿಸಿದ್ದಕ್ಕೆ ಪತ್ನಿಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಸಂಚಾರ ನಿಯಮ ಪಾಲಿಸದೇ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಪ್ರಿಲ್ 25 ರಂದು ವ್ಯಕ್ತಿಯೊಬ್ಬರು ಹೆಲ್ಮೆಟ್​ ಧರಿಸದೆ ಇದ್ದ ಕಾರಣ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದರು. ಸ್ಕೂಟಿಯು ಆ ವ್ಯಕ್ತಿಯ ಪತ್ನಿಯ ಹೆಸರಿನಲ್ಲಿದ್ದ ಕಾರಣ ಅವರ ಮೊಬೈಲ್​ಗೆ ಟ್ರಾಫಿಕ್ ಪೊಲೀಸ್ ಚಲನ್ ಜತೆಗೆ ಫೋಟೊವನ್ನು ಕಳುಹಿಸಿದ್ದರು.

ಆದರೆ ಆ ಫೋಟೊದಲ್ಲಿ ಪತಿ ಜತೆ ಬೇರೊಬ್ಬ ಮಹಿಳೆ ಇರುವುದನ್ನು ನೋಡಿ ಪತ್ನಿ ಕೋಪಗೊಂಡಿದ್ದಾಳೆ, ಗಾರ್ಮೆಂಟ್ಸ್​ ಅಂಗಡಿಯಲ್ಲಿ ಕೆಲಸ ಮಾಡುವ 32 ವರ್ಷದ ವ್ಯಕ್ತಿ ತನಗೆ ಆ ಮಹಿಳೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾನೆ. ಆಕೆಗೆ ಲಿಫ್ಟ್​ ನೀಡಿರುವುದಾಗಿ ಹೇಳಿದ್ದಾನೆ, ಆದರೆ ಪತ್ನಿ ಈ ಮಾತು ನಂಬದ ಕಾರಣ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಗೂಳಿಸವಾರಿ; ಪೊಲೀಸರೆದುರು ತಪ್ಪೊಪ್ಪಿಕೊಂಡ ಯುವಕ

ಈ ವಿಷಯ ಪೊಲೀಸ್​ ಠಾಣೆಯವರೆಗೂ ಹೋಗಿದೆ, ಮೇ 5 ರಂದು ನೀಡಿರುವ ದೂರಿನಲ್ಲಿ ಪತಿ ತನ್ನ 3 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾಳೆ, ಮಹಿಳೆಯ ಹೇಳಿಕೆಯ ಆಧಾರದ ಮೇಲೆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರನ್ನು ಐಪಿಸಿ ಸೆಕ್ಷನ್ 321,341, 294 ಮತ್ತು ಸೆಕ್ಷನ್ 75 ರ ಅಡಿಯಲ್ಲಿ ಬಂಧಿಸಲಾಗಿದೆ.

ಸಂಚಾರ ನಿಯಮ ಪಾಲಿಸದಿದ್ದರೆ ಹೇಗೆಲ್ಲಾ ಸಮಸ್ಯೆಯಾಗಬಹುದು ಎಂದು ತಿಳಿಯಿತಲ್ಲಾ ಹಾಗಾಗಿ ಇನ್ನು ಮುಂದಾದರೂ ಪ್ರತಿಯೊಬ್ಬರೂ ಸಂಚಾರ ನಿಯಮವನ್ನು ತಪ್ಪಿಲ್ಲದೇ ಪಾಲಿಸಿ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 11 May 23

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್