Viral News: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ

ಪತಿ ಟ್ರಾಫಿಕ್ ನಿಯಮ(Traffic Rule) ಉಲ್ಲಂಘಿಸಿದ್ದಕ್ಕೆ ಪತ್ನಿಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಸಂಚಾರ ನಿಯಮ ಪಾಲಿಸದೇ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ

Viral News: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ
ಟ್ರಾಫಿಕ್ ಸಿಗ್ನಲ್Image Credit source: ABP Live
Follow us
|

Updated on:May 11, 2023 | 9:25 AM

ಪತಿ ಟ್ರಾಫಿಕ್ ನಿಯಮ(Traffic Rule) ಉಲ್ಲಂಘಿಸಿದ್ದಕ್ಕೆ ಪತ್ನಿಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಸಂಚಾರ ನಿಯಮ ಪಾಲಿಸದೇ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಪ್ರಿಲ್ 25 ರಂದು ವ್ಯಕ್ತಿಯೊಬ್ಬರು ಹೆಲ್ಮೆಟ್​ ಧರಿಸದೆ ಇದ್ದ ಕಾರಣ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದರು. ಸ್ಕೂಟಿಯು ಆ ವ್ಯಕ್ತಿಯ ಪತ್ನಿಯ ಹೆಸರಿನಲ್ಲಿದ್ದ ಕಾರಣ ಅವರ ಮೊಬೈಲ್​ಗೆ ಟ್ರಾಫಿಕ್ ಪೊಲೀಸ್ ಚಲನ್ ಜತೆಗೆ ಫೋಟೊವನ್ನು ಕಳುಹಿಸಿದ್ದರು.

ಆದರೆ ಆ ಫೋಟೊದಲ್ಲಿ ಪತಿ ಜತೆ ಬೇರೊಬ್ಬ ಮಹಿಳೆ ಇರುವುದನ್ನು ನೋಡಿ ಪತ್ನಿ ಕೋಪಗೊಂಡಿದ್ದಾಳೆ, ಗಾರ್ಮೆಂಟ್ಸ್​ ಅಂಗಡಿಯಲ್ಲಿ ಕೆಲಸ ಮಾಡುವ 32 ವರ್ಷದ ವ್ಯಕ್ತಿ ತನಗೆ ಆ ಮಹಿಳೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾನೆ. ಆಕೆಗೆ ಲಿಫ್ಟ್​ ನೀಡಿರುವುದಾಗಿ ಹೇಳಿದ್ದಾನೆ, ಆದರೆ ಪತ್ನಿ ಈ ಮಾತು ನಂಬದ ಕಾರಣ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಗೂಳಿಸವಾರಿ; ಪೊಲೀಸರೆದುರು ತಪ್ಪೊಪ್ಪಿಕೊಂಡ ಯುವಕ

ಈ ವಿಷಯ ಪೊಲೀಸ್​ ಠಾಣೆಯವರೆಗೂ ಹೋಗಿದೆ, ಮೇ 5 ರಂದು ನೀಡಿರುವ ದೂರಿನಲ್ಲಿ ಪತಿ ತನ್ನ 3 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾಳೆ, ಮಹಿಳೆಯ ಹೇಳಿಕೆಯ ಆಧಾರದ ಮೇಲೆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರನ್ನು ಐಪಿಸಿ ಸೆಕ್ಷನ್ 321,341, 294 ಮತ್ತು ಸೆಕ್ಷನ್ 75 ರ ಅಡಿಯಲ್ಲಿ ಬಂಧಿಸಲಾಗಿದೆ.

ಸಂಚಾರ ನಿಯಮ ಪಾಲಿಸದಿದ್ದರೆ ಹೇಗೆಲ್ಲಾ ಸಮಸ್ಯೆಯಾಗಬಹುದು ಎಂದು ತಿಳಿಯಿತಲ್ಲಾ ಹಾಗಾಗಿ ಇನ್ನು ಮುಂದಾದರೂ ಪ್ರತಿಯೊಬ್ಬರೂ ಸಂಚಾರ ನಿಯಮವನ್ನು ತಪ್ಪಿಲ್ಲದೇ ಪಾಲಿಸಿ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 11 May 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ