AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ಶರವೇಗದಲ್ಲಿ ಬಂದ ರೈಲು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ
ಅಕ್ಷತಾ ವರ್ಕಾಡಿ
|

Updated on: Oct 01, 2023 | 12:26 PM

Share

ಉತ್ತರ ಪ್ರದೇಶ: ಬಾರಾಬಂಕಿಯ ಫರ್ಮಾನ್(14) ರೈಲ್ವೇ ಹಳಿ ಮೇಲೆ ರೀಲ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರುವ ಯುವಕ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ರೈಲು ಬಂದು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದಾಕ್ಷಣ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ.

ವಿಡಿಯೋ ಇಲ್ಲಿದೆ ನೋಡಿ:

ಉತ್ತರ ಪ್ರದೇಶದ ಜಹಾಂಗೀರಾಬಾದ್‌ನ ತೇರಾ ದೌಲತ್‌ಪುರ ನಿವಾಸಿ ಮುನ್ನಾ ಅವರ 14 ವರ್ಷದ ಮಗ ಫರ್ಮಾನ್‌ ಎಂದು ಗುರುತಿಸಲಾಗಿದೆ. ಅವನು ತನ್ನ ಸ್ನೇಹಿತರಾದ ಶುಐಬ್, ನಾದಿರ್ ಮತ್ತು ಸಮೀರ್ ಜೊತೆ ರೀಲ್ಸ್​​ ಮಾಡಲು ಹೋಗಿರುವುದು ತಿಳಿದುಬಂದಿದೆ. ಆದರೆ, ಫರ್ಮಾನ್ ದಾಮೆದರ್‌ಪುರ ಗ್ರಾಮದ ಪಕ್ಕದ ರೈಲ್ವೆ ಕ್ರಾಸಿಂಗ್ ಬಳಿ ರೈಲು ಹಳಿಗಳ ಬಳಿ ನಿಂತು ರೀಲ್‌ ಮಾಡಲು ತಯಾರಿ ನಡೆಸುತ್ತಿದ್ದಂತೆ ವೇಗವಾಗಿ ಬಂದ ರೈಲು ಅವನಿಗೆ ಡಿಕ್ಕಿ ಹೊಡೆದು ವೇಗದ ರಭಸಕ್ಕೆ ಆತನನ್ನು ಸ್ಪಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದೆ.

ಇದನ್ನೂ ಓದಿ: ಶಾಲೆಯಲ್ಲೇ ಶಿಕ್ಷಕರ ರೀಲ್ಸ್​​​​​, ಇನ್ಸ್ಟಾಗ್ರಾಮ್​​ನಲ್ಲಿ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ

ವರದಿಗಳ ಪ್ರಕಾರ, ರೈಲಿನ ವೇಗದ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಹತ್ತಿರದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ