AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ಶರವೇಗದಲ್ಲಿ ಬಂದ ರೈಲು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ
ಅಕ್ಷತಾ ವರ್ಕಾಡಿ
|

Updated on: Oct 01, 2023 | 12:26 PM

Share

ಉತ್ತರ ಪ್ರದೇಶ: ಬಾರಾಬಂಕಿಯ ಫರ್ಮಾನ್(14) ರೈಲ್ವೇ ಹಳಿ ಮೇಲೆ ರೀಲ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರುವ ಯುವಕ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ರೈಲು ಬಂದು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದಾಕ್ಷಣ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ.

ವಿಡಿಯೋ ಇಲ್ಲಿದೆ ನೋಡಿ:

ಉತ್ತರ ಪ್ರದೇಶದ ಜಹಾಂಗೀರಾಬಾದ್‌ನ ತೇರಾ ದೌಲತ್‌ಪುರ ನಿವಾಸಿ ಮುನ್ನಾ ಅವರ 14 ವರ್ಷದ ಮಗ ಫರ್ಮಾನ್‌ ಎಂದು ಗುರುತಿಸಲಾಗಿದೆ. ಅವನು ತನ್ನ ಸ್ನೇಹಿತರಾದ ಶುಐಬ್, ನಾದಿರ್ ಮತ್ತು ಸಮೀರ್ ಜೊತೆ ರೀಲ್ಸ್​​ ಮಾಡಲು ಹೋಗಿರುವುದು ತಿಳಿದುಬಂದಿದೆ. ಆದರೆ, ಫರ್ಮಾನ್ ದಾಮೆದರ್‌ಪುರ ಗ್ರಾಮದ ಪಕ್ಕದ ರೈಲ್ವೆ ಕ್ರಾಸಿಂಗ್ ಬಳಿ ರೈಲು ಹಳಿಗಳ ಬಳಿ ನಿಂತು ರೀಲ್‌ ಮಾಡಲು ತಯಾರಿ ನಡೆಸುತ್ತಿದ್ದಂತೆ ವೇಗವಾಗಿ ಬಂದ ರೈಲು ಅವನಿಗೆ ಡಿಕ್ಕಿ ಹೊಡೆದು ವೇಗದ ರಭಸಕ್ಕೆ ಆತನನ್ನು ಸ್ಪಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದೆ.

ಇದನ್ನೂ ಓದಿ: ಶಾಲೆಯಲ್ಲೇ ಶಿಕ್ಷಕರ ರೀಲ್ಸ್​​​​​, ಇನ್ಸ್ಟಾಗ್ರಾಮ್​​ನಲ್ಲಿ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ

ವರದಿಗಳ ಪ್ರಕಾರ, ರೈಲಿನ ವೇಗದ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಹತ್ತಿರದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್