AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲಿನ ಸಿಂಕ್​ನಲ್ಲಿ ಸಿಲುಕಿದ್ದ ಕಸವನ್ನು ಕೈಯಿಂದ ತೆಗೆದ ಪ್ರಯಾಣಿಕನಿಗೆ ಭಾರಿ ಮೆಚ್ಚುಗೆ

ಯುವಕನೊಬ್ಬ ರೈಲಿನ ವಾಶ್ ಬೇಸಿನ್​ನಲ್ಲಿ ಸಿಲುಕಿಕೊಂಡಿದ್ದ ಕಸವನ್ನು ಕೈನಲ್ಲಿ ತೆಗೆದಿರುವ ವಿಡಿಯೋ ವೈರಲ್ ಆಗಿದೆ. ಹಲವು ಬಾರಿ ರೈಲಿನ ವಾಶ್​ರೂಂನಲ್ಲಿ ನಲ್ಲಿ ಸರಿ ಇರುವುದಿಲ್ಲ, ಕೆಲವೊಮ್ಮೆ ನೀರೇ ಬರುವುದಿಲ್ಲ, ಕೆಲವೊಮ್ಮೆ ಸಿಂಕ್​ನಲ್ಲಿ ನೀರು ತುಂಬಿ ಹೋಗಿರುತ್ತದೆ. ಆದರೆ ಪ್ರಯಾಣಿಕರು ಅದರ ಬಗ್ಗೆ ಎಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ, ರೈಲ್ವೆಗೆ ದೂರು ಕೊಡುವುದೂ ಇಲ್ಲ, ಆಗ ವ್ಯವಸ್ಥೆ ಸರಿಯಾಗುವುದಾದರೂ ಹೇಗೆ?. ರೈಲಿನ ಸಿಂಕ್​ನಲ್ಲಿ ಪ್ಲಾಸ್ಟಿಕ್​ ಸಿಲುಕಿ ಅದರಲ್ಲಿ ನೀರು ನಿಂತುಕೊಂಡಿತ್ತು, ಆಗ ಈ ಯುವಕ ನೀರಿನಲ್ಲಿರುವ ಪ್ಲಾಸ್ಟಿಕ್ ಅನ್ನು ಕೈಯಲ್ಲೇ ತೆಗೆದು, ನೀರು ಸರಾಗವಾಗಿ ಕೆಳಗೆ ಇಳಿಯಲು ಅವಕಾಶ ಮಾಡಿಕೊಟ್ಟಿದ್ದಾನೆ.

Viral Video: ರೈಲಿನ ಸಿಂಕ್​ನಲ್ಲಿ ಸಿಲುಕಿದ್ದ ಕಸವನ್ನು ಕೈಯಿಂದ ತೆಗೆದ ಪ್ರಯಾಣಿಕನಿಗೆ ಭಾರಿ ಮೆಚ್ಚುಗೆ
ಸಿಂಕ್
ನಯನಾ ರಾಜೀವ್
|

Updated on: Jan 09, 2026 | 7:56 AM

Share

ನವದೆಹಲಿ, ಜನವರಿ 09: ಭಾರತೀಯ ರೈಲ್ವೆ(Indian Railways) ನಿಮ್ಮ ಆಸ್ತಿ, ಅದನ್ನು ಹಾನಿ ಮಾಡಬೇಡಿ, ಸ್ವಚ್ಛವಾಗಿಡಲು ಸಹಾಯ ಮಾಡಿ ಎನ್ನುವ ಸಾಲುಗಳನ್ನು ನೀವು ರೈಲಿನಲ್ಲಿ ಪ್ರಯಾಣಿಸಿದ್ದರೆ ನೋಡಿಯೇ ಇರುತ್ತೀರಿ. ಆದರೆ ಹೆಚ್ಚಿನ ಮಂದಿ ರೈಲಿನ ಸ್ವಚ್ಛತೆ ಬಗ್ಗೆ ಗಮನಕೊಡುವುದಿಲ್ಲ. ಇವತ್ತು ಹತ್ತಿ ನಾಳೆ ಬೆಳಗ್ಗೆ ಇಳಿದು ಹೋಗ್ತೀವಿ ನಾವ್ಯಾಕೆ ರೈಲನ್ನು ಸ್ವಚ್ಛವಾಗಿಡಬೇಕು ಎನ್ನುವ ಮನಸ್ಥಿತಿ ಹಲವು ಮಂದಿಗಿರುತ್ತದೆ. ಆದರೆ ಈ ಯುವಕನ ಕೆಲಸಕ್ಕೆ ಮೆಚ್ಚುಗೆಯ ಸುರಿಮಳೆ ಸಿಕ್ಕಿದೆ.

ಹಲವು ಬಾರಿ ರೈಲಿನ ವಾಶ್​ರೂಂನಲ್ಲಿ ನಲ್ಲಿ ಸರಿ ಇರುವುದಿಲ್ಲ, ಕೆಲವೊಮ್ಮೆ ನೀರೇ ಬರುವುದಿಲ್ಲ, ಕೆಲವೊಮ್ಮೆ ಸಿಂಕ್​ನಲ್ಲಿ ನೀರು ತುಂಬಿ ಹೋಗಿರುತ್ತದೆ. ಆದರೆ ಪ್ರಯಾಣಿಕರು ಅದರ ಬಗ್ಗೆ ಎಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ, ರೈಲ್ವೆಗೆ ದೂರು ಕೊಡುವುದೂ ಇಲ್ಲ, ಆಗ ವ್ಯವಸ್ಥೆ ಸರಿಯಾಗುವುದಾದರೂ ಹೇಗೆ?. ರೈಲಿನ ಸಿಂಕ್​ನಲ್ಲಿ ಪ್ಲಾಸ್ಟಿಕ್​ ಸಿಲುಕಿ ಅದರಲ್ಲಿ ನೀರು ನಿಂತುಕೊಂಡಿತ್ತು, ಆಗ ಈ ಯುವಕ ನೀರಿನಲ್ಲಿರುವ ಪ್ಲಾಸ್ಟಿಕ್ ಅನ್ನು ಕೈಯಲ್ಲೇ ತೆಗೆದು, ನೀರು ಸರಾಗವಾಗಿ ಕೆಳಗೆ ಇಳಿಯಲು ಅವಕಾಶ ಮಾಡಿಕೊಟ್ಟಿದ್ದಾನೆ.

ಮತ್ತಷ್ಟು ಓದಿ: ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ವಿಡಿಯೋ ವೈರಲ್

ಈ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸುಂದರವಾದ ವೀಡಿಯೊವನ್ನು @MDAltamashraza ಎಂಬ ಐಡಿಯಿಂದ ಹಂಚಿಕೊಳ್ಳಲಾಗಿದೆ. 33 ಸೆಕೆಂಡುಗಳ ಈ ವೀಡಿಯೊವನ್ನು ಈಗಾಗಲೇ ಸಾವಿರಾರು ಬಾರಿ ವೀಕ್ಷಿಸಲಾಗಿದ್ದು, ನೂರಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ ಮತ್ತು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ವಿಡಿಯೋ

ಭಾರತೀಯರೇ ಭಾರತವನ್ನು ಕೊಳಕು ಮಾಡುತ್ತಾರೆ ಮತ್ತು ನಂತರ ಸರ್ಕಾರಿ ವ್ಯವಸ್ಥೆ ಕೆಟ್ಟದಾಗಿದೆ ಎಂದು ದೂರುತ್ತಾರೆ ಎಂದು ನೆಟ್ಟಿಗರೊಬ್ಬರು ಬರೆದಿದ್ದಾರೆ. ನಾವು ಜವಾಬ್ದಾರಿಯನ್ನು ತೆಗೆದುಕೊಳ್ಳದ ಹೊರತು ಸ್ವಚ್ಛತೆ ಆಗುವುದಿಲ್ಲ ಎಂದು ಮತ್ತೊಬ್ಬರು ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?