Video: ಚಿಲ್ಲರೆ ಹಣ ಇಲ್ಲದಿದ್ರೆ ಪರ್ವಾಗಿಲ್ಲ, ಆನ್‌ಲೈನ್‌ ಪೇಮೆಂಟ್‌ ಓಕೆ, ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ

ಇತ್ತೀಚಿಗೆ ಭಿಕ್ಷಾಟನೆ ಕೂಡಾ ಡಿಜಿಟಲೀಕರಣವಾಗುತ್ತದೆ. ಹೌದು ಕ್ಯೂಆರ್‌ ಕೋಡ್‌ ಹಿಡಿದು ಭಿಕ್ಷೆ ಬೇಡುವ ಹಲವಾರು ಭಿಕ್ಷುಕರು ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಂಗಳಮುಖಿಯೊಬ್ಬರು ರೈಲಿನಲ್ಲಿ ಭಿಕ್ಷೆ ಬೇಡುತ್ತಾ ಚಿಲ್ಲರೆ ಹಣ ಇಲ್ಲಾಂದ್ರೆ ಆನ್‌ಲೈನ್‌ ಪೇಮೆಂಟ್‌ ಕೂಡಾ ನಡೆಯುತ್ತೇ ಎಂದು ಆನ್‌ಲೈನ್‌ ಹಣವನ್ನು ಸ್ವೀಕಾರ ಮಾಡುವ ಮೂಲಕ ಭಿಕ್ಷೆ ಬೇಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Video: ಚಿಲ್ಲರೆ ಹಣ ಇಲ್ಲದಿದ್ರೆ ಪರ್ವಾಗಿಲ್ಲ, ಆನ್‌ಲೈನ್‌ ಪೇಮೆಂಟ್‌ ಓಕೆ, ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 24, 2024 | 5:55 PM

ಇದು ಡಿಜಿಟಲ್‌ ಯುಗ. ಎಲ್ಲೆಡೆ ಯುಪಿಐ ವಹಿವಾಟಿನದ್ದೇ ಕಾರುಬಾರು. ಪ್ರಸ್ತುತ ನಮ್ಮ ಭಾರತದಲ್ಲಿ ಡಿಜಿಟಲೀಕರಣ ಹೆಚ್ಚು ಹೆಚ್ಚು ಪ್ರಗತಿಯನ್ನು ಪಡೆಯುದ್ದು, ಹೆಚ್ಚಿನ ವ್ಯಾಪಾರ ವಹಿವಾಟುಗಳು ನಗದು ರಹಿತವಾಗಿಯೇ ನಡೆಯುತ್ತಿದೆ. ತಳ್ಳು ಗಾಡಿಯಿಂದ ಹಿಡಿದು ಮಾಲ್‌ಗಳವರೆಗೂ ಎಲ್ಲಾ ವ್ಯಾಪಾರ ವಹಿವಾಟು ಈಗ ಡಿಜಿಟಲ್‌ ಪಾವತಿ ವ್ಯವಸ್ಥೆಗೆ ಬದಲಾಗಿದೆ. ಈಗ ಭಿಕ್ಷಾಟನೆ ಕೂಡಾ ಡಿಜಿಟಲ್‌ ಮಯವಾಗಿದ್ದು, ಕ್ಯೂಆರ್‌ ಕೋಡ್‌ ಭಿಕ್ಷೆ ಬೇಡಿದ ಭಿಕ್ಷುಕರು ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಮಂಗಳಮುಖಿಯೊಬ್ಬರು ಚಿಲ್ಲರೆ ಹಣ ಇಲ್ಲದಿದ್ರೆ ಪರ್ವಾಗಿಲ್ಲ, ಆನ್‌ಲೈನ್‌ ಪೇಮೆಂಟ್‌ ಆನ್‌ಲೈನ್‌ ಪೇಮೆಂಟ್‌ ಮಾಡಿದ್ರೂ ನಡೆಯುತ್ತೇ ಎಂದು ಆನ್‌ಲೈನ್‌ ಮೂಲಕ ಹಣವನ್ನು ಸ್ವೀಕಾರ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಮುಂಬೈನಲ್ಲಿ ನಡೆದಿದ್ದು, ಇಲ್ಲಿನ ಲೋಕಲ್‌ ಟ್ರೈನ್‌ನಲ್ಲಿ ಭಿಕ್ಷೆ ಬೇಡುತ್ತಾ ಬಂದ ಮಂಗಳಮುಖಿಯೊಬ್ಬರು, ಚಿಲ್ಲರೆ ಹಣ ಇಲ್ಲ ಎಂದು ಹೇಳಿದ ಪ್ರಯಾಣಿಕರ ಬಳಿ ಕ್ಯೂಆರ್‌ ಕೋಡ್‌ ಸ್ಕಾನ್‌ ಮಾಡಿಸಿ ಹಣವನ್ನು ಪಡೆದಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು mumbairailusers ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಮುಂಬೈನ್‌ ಲೋಕಲ್‌ ಟ್ರೈನ್‌ನಲ್ಲಿ ಭಿಕ್ಷೆ ಬೇಡುತ್ತಾ ಬಂದ ಮಂಗಳಮುಖಿಯೊಬ್ಬರು ಚಿಲ್ಲರೆ ಹಣ ಇಲ್ಲ ಎಂದು ಹೇಳಿದ ಪ್ರಯಾಣಿಕರ ಬಳಿ ಕ್ಯೂಆರ್‌ ಕೋಡ್‌ ತೋರಿಸಿ ಹಣ ಪಾವತಿ ಮಾಡಿ ಎಂದು ಹೇಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬಯಲು ಶೌಚಕ್ಕೆ ಹೋದವನ ಮೇಲೆ ದೈತ್ಯ ಹೆಬ್ಬಾವು ಅಟ್ಯಾಕ್, ಎದೆ ಝಲ್‌ ಎನಿಸುವ ದೃಶ್ಯ ವೈರಲ್‌

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಜುಲೈ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 35 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ನಮ್ಮ ಡಿಜಿಟಲ್‌ ಇಂಡಿಯಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅಬ್ಬಬ್ಬಾ ಭಿಕ್ಷಾಟನೆಯೂ ಡಿಜಿಟಲೀಕರಣವಾಗಿದೆಯೇʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ