AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೊದಲ ಬಾರಿಗೆ ಚೆನ್ನೈಗೆ ಭೇಟಿ ನೀಡಿ ಅನುಭವ ಹಂಚಿಕೊಂಡ ಟ್ರಾವೆಲರ್

ಕೆಲವರಿಗೆ ಊರು ಸುತ್ತುವುದು ಅಂದ್ರೆ ಅದೇನೋ ಕ್ರೇಜ್. ದೆಹಲಿಯಿಂದ ಮೊದಲ ಬಾರಿಗೆ ಚೆನ್ನೈಗೆ ಬಂದಿಳಿದ ಟ್ರಾವೆಲರ್ ಒಬ್ಬರು ಈ ನಗರವನ್ನು ಮೆಚ್ಚಿಕೊಂಡಿದ್ದಾರೆ. ದೆಹಲಿಗೆ ಹೋಲಿಸಿದ್ರೆ ಚೆನ್ನೈನ ಜನರ ಜೀವನದ ವೇಗಕ್ಕೂ, ನಗರವು ಜನಸಂದಣಿಯನ್ನು ನಿರ್ವಹಿಸುವ ವಿಧಾನಕ್ಕೂ ಹಲವು ವ್ಯತ್ಯಾಸಗಳಿವೆ. ಇಲ್ಲಿನ ಶಾಂತ ವಾತಾವರಣ ಹಾಗೂ ಸ್ವಚ್ಛತೆಯನ್ನು ಶ್ಲಾಘಿಸಿದ್ದಾರೆ. ಈ ಕುರಿತಾದ ಪೋಸ್ಟ್ ಸದ್ಯ ವೈರಲ್ ಆಗಿದೆ.

Viral: ಮೊದಲ ಬಾರಿಗೆ ಚೆನ್ನೈಗೆ ಭೇಟಿ ನೀಡಿ ಅನುಭವ ಹಂಚಿಕೊಂಡ ಟ್ರಾವೆಲರ್
ವೈರಲ್‌ ಪೋಸ್ಟ್‌Image Credit source: Twitter
ಸಾಯಿನಂದಾ
|

Updated on: Jun 25, 2026 | 5:28 PM

Share

ಕೆಲವರಿಗೆ ಊರು, ದೇಶ ಸುತ್ತೋದು ಅಂದ್ರೆ ಅದೇನೋ ಖುಷಿ. ಹೀಗಾಗಿ ಸೋಲೋ ಟ್ರಿಪ್ ಎಂದು ಊರಿಂದ ಊರಿಗೆ ಸುತ್ತುತ್ತಾ ಎಂಜಾಯ್‌ ಮಾಡುತ್ತಿದ್ದಾರೆ. ಇದೀಗ ದೆಹಲಿ (Delhi) ಮೂಲದ ಟ್ರಾವೆಲರ್ ಒಬ್ಬರು ಮೊದಲ ಬಾರಿಗೆ ಚೆನ್ನೈಗೆ ಭೇಟಿ ನೀಡಿದ್ದಾರೆ. ಇಲ್ಲಿನ ಜನರ ಜೀವನಶೈಲಿ ಹಾಗೂ ನಗರದ ಸ್ವಚ್ಛತೆಯನ್ನು ಮೆಚ್ಚಿಕೊಂಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಅವಿಜೀತ್ (Avijeet) ತಮ್ಮ ಎಕ್ಸ್ ಖಾತೆಯಲ್ಲಿಈ ಪೋಸ್ಟ್ ಹಂಚಿಕೊಂಡಿದ್ದಾರೆ. ಈಗಷ್ಟೇ ಚೆನ್ನೈಗೆ ಬಂದಿಳಿದಿದ್ದೇನೆ. ಹಾಗೂ ಇಲ್ಲಿ ವಿಷಯಗಳು ದೆಹಲಿಗಿಂತ ಭಿನ್ನವಾಗಿವೆ ಎಂದು ನಾನು ಹೇಳಲೇಬೇಕು. ನನ್ನ ಜೀವನದ 27 ವರ್ಷಗಳ ಜರ್ನಿಯಲ್ಲಿ ನಾನು ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಬರುತ್ತಿದ್ದೇನೆ. ಇಲ್ಲಿನ ಪ್ರತಿಯೊಂದು ಅನುಭವವೂ ಒಳ್ಳೆಯದು, ಕೆಟ್ಟದುಗಳೊಂದಿಗೆ ನನಗೆ ಹೊಸದಾಗಿರುತ್ತದೆ. ನನ್ನ ಮೊದಲ ಅವಲೋಕನವೆಂದರೆ, ಅಸ್ತವ್ಯಸ್ತವಲ್ಲದ ಜನರು ಎಂದು ಬರೆದಿದ್ದಾರೆ.

ವೈರಲ್‌ ಪೋಸ್ಟ್‌ ಇಲ್ಲಿದೆ

ಇಲ್ಲಿ ಹೆಚ್ಚು ಜನಸಂದಣಿ ಇದ್ದರೂ, ಎಲ್ಲರೂ ನಿರಾಳವಾಗಿದ್ದಾರೆ, ಒಬ್ಬರನ್ನೊಬ್ಬರು ಅಡ್ಡಲಾಗಿ ಹೋಗಲು ಪ್ರಯತ್ನಿಸದೆ ಒಂದೇ ಲೈನ್‌ನಲ್ಲಿ ನಿಧಾನವಾಗಿ ಹೋಗುತ್ತಾರೆ. ನಾನು ನಿನ್ನೆ ಬೆಳಿಗ್ಗೆ ಇದ್ದ ಭೋಪಾಲ್‌ಗಿಂತ ಈ ರೈಲ್ವೆ ನಿಲ್ದಾಣದ ಒಳಗೆ ಹಾಗೂ ಹೊರಗೆ ಸ್ವಚ್ಛವಾಗಿದೆ. ಇಲ್ಲಿನ ಆರಂಭಿಕ ಅನುಭವವು ತಾವು ನಿರೀಕ್ಷಿಸಿದ್ದಕ್ಕಿಂತ ಭಿನ್ನವಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ತಂಗಿ, ನಂಗೂ ತಂಗಿ ಇದ್ದಂತೆ; ಕ್ಯಾಬ್‌ ಹತ್ತಿದ ಯುವತಿಯ ಅಣ್ಣನಿಗೆ ಧೈರ್ಯ ತುಂಬಿ ಕಳುಹಿಸಿಕೊಟ್ಟ ಕ್ಯಾಬ್‌ ಡ್ರೈವರ್

ಈ ಪೋಸ್ಟ್ ಒಂದು ಲಕ್ಷದ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಾನು ಮೊದಲ ಬಾರಿಗೆ ಚೆನ್ನೈಗೆ ಭೇಟಿ ನೀಡಿದಾಗ ನನಗೆ ನಿಜಕ್ಕೂ ಆಶ್ಚರ್ಯವಾಯಿತು. ರುಚಿಕರ ಆಹಾರ, ಉತ್ತಮ ಮೂಲಸೌಕರ್ಯ. ಬೇರೆ ನಗರದ ಮೆಟ್ರೋ ಸೇವೆಗಳಿಗಿಂತ ಇಲ್ಲಿನ ಮೆಟ್ರೋ ವ್ಯವಸ್ಥೆಗಳಿಗಿಂತ ಹೆಚ್ಚು ಸಂಘಟಿತ ಹಾಗೂ ಶಿಸ್ತುಬದ್ಧವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಚೆನ್ನೈ ನಗರವು ಅಭಿವೃದ್ಧಿ ಹೊಂದಿದ್ದು ಎಲ್ಲರಿಗೂ ಇಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಭಾರತದ ನಿಜವಾದ ಅಭಿವೃದ್ಧಿ ಹೊಂದಿದ ಭಾಗಕ್ಕೆ ಸ್ವಾಗತ. ನೀವು ಉತ್ತಮ ವಾಸ್ತವ್ಯವನ್ನು ಹೊಂದಿರುತ್ತೀರಿ ಎಂದು ನಾನು ಭಾವಿಸುತ್ತೇನೆ. ಚೆನ್ನೈನ ಪಾಕಪದ್ಧತಿಗಳನ್ನು ಸಹ ಪ್ರಯತ್ನಿಸಿ. ಖಂಡಿತ ಇಲ್ಲಿನ ರುಚಿಗಳನ್ನು ಇಷ್ಟಪಡುತ್ತೀರಿ ಎಂದು ನನಗೆ ಖಚಿತವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?