AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 6 ತಿಂಗಳ ಬಳಿಕ ಕೋಮಾದಿಂದ ಎದ್ದ ಯುವಕ; ಆಸ್ಪತ್ರೆ ಬಿಲ್ ನೋಡಿ ಮತ್ತೆ ಪ್ರಜ್ಞೆ ತಪ್ಪೋದೊಂದು ಬಾಕಿ!

ಲಾಸ್ ವೇಗಾಸ್​ನ ವ್ಯಕ್ತಿಯೊಬ್ಬರು 6 ತಿಂಗಳ ಬಳಿಕ ಕೋಮಾದಿಂದ ಎದ್ದಿದ್ದಾರೆ. ಆದರೆ, ಆಸ್ಪತ್ರೆಯ ಬಿಲ್ ನೋಡಿ ಶಾಕ್ ಆಗಿದ್ದಾರೆ. 6 ತಿಂಗಳ ಕಾಲ ಕೋಮಾದಲ್ಲಿದ್ದ ಆ ವ್ಯಕ್ತಿ ಬದುಕುವುದೇ ಅನುಮಾನ ಎನ್ನಲಾಗಿತ್ತು. ಆದರೆ, ಆತ ಏಳುತ್ತಿದ್ದಂತೆ ವೈದ್ಯರಿಗೂ ಆಶ್ಚರ್ಯವಾಗಿದೆ. ಈ ಬಗ್ಗೆ ರೆಡ್ಡಿಟ್​ನಲ್ಲಿ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

Viral News: 6 ತಿಂಗಳ ಬಳಿಕ ಕೋಮಾದಿಂದ ಎದ್ದ ಯುವಕ; ಆಸ್ಪತ್ರೆ ಬಿಲ್ ನೋಡಿ ಮತ್ತೆ ಪ್ರಜ್ಞೆ ತಪ್ಪೋದೊಂದು ಬಾಕಿ!
ಸಾಂದರ್ಭಿಕ ಚಿತ್ರImage Credit source: istock
ಸುಷ್ಮಾ ಚಕ್ರೆ
|

Updated on: Aug 17, 2024 | 6:48 PM

Share

ನ್ಯೂಯಾರ್ಕ್: ಲಾಸ್ ವೇಗಾಸ್‌ನ ಜಾನ್ ಪೆನ್ನಿಂಗ್‌ಟನ್ ಎಂಬ ಹೆಸರಿನ ವ್ಯಕ್ತಿಯೊಬ್ಬರು ತಮ್ಮ 30ನೇ ವಯಸ್ಸಿನಲ್ಲಿ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾಗೆ ಜಾರಿದ್ದರು. ಅದಾಗಿ 6 ತಿಂಗಳ ಬಳಿಕ ಅವರು ಕೋಮಾದಿಂದ ಎಚ್ಚರವಾಗಿದ್ದಾರೆ. ಕೋಮಾದಿಂದ ಎಚ್ಚರವಾದಾಗಲೂ ಜಾನ್‌ನ ತೊಂದರೆಗಳು ಮುಗಿಯಲಿಲ್ಲ. ರೆಡ್ಡಿಟ್‌ನಲ್ಲಿ ಈ ಬಗ್ಗೆ ಹಂಚಿಕೊಂಡಿರುವ ಅವರು, 6 ತಿಂಗಳು ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದದ್ದಕ್ಕೆ 2.5 ಮಿಲಿಯನ್ ಡಾಲರ್ (ರೂ. 2,09,67,775) ಬಿಲ್‌ ನೀಡಿದ್ದರು. ಅದನ್ನು ನೋಡಿ ನನಗೆ ಶಾಕ್ ಆಯಿತು ಎಂದಿದ್ದಾರೆ.

ನಾನು ಕಣ್ಣು ಬಿಟ್ಟಾಗ ನನ್ನನ್ನು ಹಾಸಿಗೆಗೆ ಕಟ್ಟಿಹಾಕಿದ್ದರು. ಬೆಳಗ್ಗೆ ನಿದ್ರೆಯಿಂದ ಎದ್ದು ಆಫೀಸಿಗೆ ಹೊರಡಲು ತಡವಾಯಿತು ಎಂಬ ಅನುಭವ ನನ್ನಲ್ಲಿತ್ತು. ಆ 6 ತಿಂಗಳ ಕಾಲ ನಾನು ಪ್ರಜ್ಞೆ ಕಳೆದುಕೊಂಡಿದ್ದ ಎಂಬುದೂ ನನಗೆ ತಿಳಿದಿರಲಿಲ್ಲ. ನನ್ನ ಪಕ್ಕದಲ್ಲಿದ್ದ ನರ್ಸ್ ಬಳಿ ನಾನು ಬಾತ್​ರೂಂ ಬಳಸಬಹುದಾ? ಎಂದು ಕೇಳಿದೆ. ಇದ್ದಕ್ಕಿದ್ದಂತೆ ನಾನು ಎದ್ದು ಕುಳಿತು ಮಾತನಾಡಿದ್ದನ್ನು ನೋಡಿ ಆ ನರ್ಸ್ ಕಣ್ಣೀರು ಹಾಕುತ್ತಾ ಹೊರಗೆ ಓಡಿಹೋದಳು ಎಂದು ಜಾನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral Video: ಸಖತ್ತಾಗಿ ಸ್ಟೆಪ್ ಹಾಕಿದ ಎಲಾನ್ ಮಸ್ಕ್ – ಡೊನಾಲ್ಡ್ ಟ್ರಂಪ್; AI ಡ್ಯಾನ್ಸ್ ವಿಡಿಯೋ ವೈರಲ್

ಬಳಿಕ ಆ ನರ್ಸ್ ಕೆಲವು ನಿಮಿಷಗಳ ನಂತರ ನನ್ನಲ್ಲಿ ಕ್ಷಮೆ ಕೇಳಲು ಹಿಂತಿರುಗಿದಳು. ಕಳೆದ 6 ತಿಂಗಳಿನಿಂದ ನಾನು ತೀವ್ರವಾದ ಆಘಾತಕಾರಿ ಮಿದುಳಿನ ಗಾಯದಿಂದಾಗಿ ಕೋಮಾದಲ್ಲಿದ್ದ ವಿಚಾರವನ್ನು ಆಕೆ ನನಗೆ ತಿಳಿಸಿದರು ಎಂದಿರುವ ಜಾನ್ ಅವರು ತಮ್ಮ ಚಿಕಿತ್ಸೆಯ ವೆಚ್ಚವನ್ನು ಸರಿದೂಗಿಸಲು ಸಹಾಯ ಮಾಡಲು GoFundMe ಪುಟವನ್ನು ರಚಿಸಿದ್ದಾಗಿ ತಿಳಿಸಿದ್ದಾರೆ.

ಬಳಿಕ ಜಾನ್‌ನ ವಕೀಲರು ಅವನಿಗೆ ಸಹಾಯ ಮಾಡಲು ತಕ್ಷಣವೇ ಮುಂದಾದರು. ಎಲ್ಲ ವೈದ್ಯಕೀಯ ವೆಚ್ಚವನ್ನು ಭರಿಸಿದಾಗ ಜಾನ್ ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯವಾಯಿತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ