AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 6 ತಿಂಗಳ ಬಳಿಕ ಕೋಮಾದಿಂದ ಎದ್ದ ಯುವಕ; ಆಸ್ಪತ್ರೆ ಬಿಲ್ ನೋಡಿ ಮತ್ತೆ ಪ್ರಜ್ಞೆ ತಪ್ಪೋದೊಂದು ಬಾಕಿ!

ಲಾಸ್ ವೇಗಾಸ್​ನ ವ್ಯಕ್ತಿಯೊಬ್ಬರು 6 ತಿಂಗಳ ಬಳಿಕ ಕೋಮಾದಿಂದ ಎದ್ದಿದ್ದಾರೆ. ಆದರೆ, ಆಸ್ಪತ್ರೆಯ ಬಿಲ್ ನೋಡಿ ಶಾಕ್ ಆಗಿದ್ದಾರೆ. 6 ತಿಂಗಳ ಕಾಲ ಕೋಮಾದಲ್ಲಿದ್ದ ಆ ವ್ಯಕ್ತಿ ಬದುಕುವುದೇ ಅನುಮಾನ ಎನ್ನಲಾಗಿತ್ತು. ಆದರೆ, ಆತ ಏಳುತ್ತಿದ್ದಂತೆ ವೈದ್ಯರಿಗೂ ಆಶ್ಚರ್ಯವಾಗಿದೆ. ಈ ಬಗ್ಗೆ ರೆಡ್ಡಿಟ್​ನಲ್ಲಿ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

Viral News: 6 ತಿಂಗಳ ಬಳಿಕ ಕೋಮಾದಿಂದ ಎದ್ದ ಯುವಕ; ಆಸ್ಪತ್ರೆ ಬಿಲ್ ನೋಡಿ ಮತ್ತೆ ಪ್ರಜ್ಞೆ ತಪ್ಪೋದೊಂದು ಬಾಕಿ!
ಸಾಂದರ್ಭಿಕ ಚಿತ್ರImage Credit source: istock
ಸುಷ್ಮಾ ಚಕ್ರೆ
|

Updated on: Aug 17, 2024 | 6:48 PM

Share

ನ್ಯೂಯಾರ್ಕ್: ಲಾಸ್ ವೇಗಾಸ್‌ನ ಜಾನ್ ಪೆನ್ನಿಂಗ್‌ಟನ್ ಎಂಬ ಹೆಸರಿನ ವ್ಯಕ್ತಿಯೊಬ್ಬರು ತಮ್ಮ 30ನೇ ವಯಸ್ಸಿನಲ್ಲಿ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾಗೆ ಜಾರಿದ್ದರು. ಅದಾಗಿ 6 ತಿಂಗಳ ಬಳಿಕ ಅವರು ಕೋಮಾದಿಂದ ಎಚ್ಚರವಾಗಿದ್ದಾರೆ. ಕೋಮಾದಿಂದ ಎಚ್ಚರವಾದಾಗಲೂ ಜಾನ್‌ನ ತೊಂದರೆಗಳು ಮುಗಿಯಲಿಲ್ಲ. ರೆಡ್ಡಿಟ್‌ನಲ್ಲಿ ಈ ಬಗ್ಗೆ ಹಂಚಿಕೊಂಡಿರುವ ಅವರು, 6 ತಿಂಗಳು ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದದ್ದಕ್ಕೆ 2.5 ಮಿಲಿಯನ್ ಡಾಲರ್ (ರೂ. 2,09,67,775) ಬಿಲ್‌ ನೀಡಿದ್ದರು. ಅದನ್ನು ನೋಡಿ ನನಗೆ ಶಾಕ್ ಆಯಿತು ಎಂದಿದ್ದಾರೆ.

ನಾನು ಕಣ್ಣು ಬಿಟ್ಟಾಗ ನನ್ನನ್ನು ಹಾಸಿಗೆಗೆ ಕಟ್ಟಿಹಾಕಿದ್ದರು. ಬೆಳಗ್ಗೆ ನಿದ್ರೆಯಿಂದ ಎದ್ದು ಆಫೀಸಿಗೆ ಹೊರಡಲು ತಡವಾಯಿತು ಎಂಬ ಅನುಭವ ನನ್ನಲ್ಲಿತ್ತು. ಆ 6 ತಿಂಗಳ ಕಾಲ ನಾನು ಪ್ರಜ್ಞೆ ಕಳೆದುಕೊಂಡಿದ್ದ ಎಂಬುದೂ ನನಗೆ ತಿಳಿದಿರಲಿಲ್ಲ. ನನ್ನ ಪಕ್ಕದಲ್ಲಿದ್ದ ನರ್ಸ್ ಬಳಿ ನಾನು ಬಾತ್​ರೂಂ ಬಳಸಬಹುದಾ? ಎಂದು ಕೇಳಿದೆ. ಇದ್ದಕ್ಕಿದ್ದಂತೆ ನಾನು ಎದ್ದು ಕುಳಿತು ಮಾತನಾಡಿದ್ದನ್ನು ನೋಡಿ ಆ ನರ್ಸ್ ಕಣ್ಣೀರು ಹಾಕುತ್ತಾ ಹೊರಗೆ ಓಡಿಹೋದಳು ಎಂದು ಜಾನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral Video: ಸಖತ್ತಾಗಿ ಸ್ಟೆಪ್ ಹಾಕಿದ ಎಲಾನ್ ಮಸ್ಕ್ – ಡೊನಾಲ್ಡ್ ಟ್ರಂಪ್; AI ಡ್ಯಾನ್ಸ್ ವಿಡಿಯೋ ವೈರಲ್

ಬಳಿಕ ಆ ನರ್ಸ್ ಕೆಲವು ನಿಮಿಷಗಳ ನಂತರ ನನ್ನಲ್ಲಿ ಕ್ಷಮೆ ಕೇಳಲು ಹಿಂತಿರುಗಿದಳು. ಕಳೆದ 6 ತಿಂಗಳಿನಿಂದ ನಾನು ತೀವ್ರವಾದ ಆಘಾತಕಾರಿ ಮಿದುಳಿನ ಗಾಯದಿಂದಾಗಿ ಕೋಮಾದಲ್ಲಿದ್ದ ವಿಚಾರವನ್ನು ಆಕೆ ನನಗೆ ತಿಳಿಸಿದರು ಎಂದಿರುವ ಜಾನ್ ಅವರು ತಮ್ಮ ಚಿಕಿತ್ಸೆಯ ವೆಚ್ಚವನ್ನು ಸರಿದೂಗಿಸಲು ಸಹಾಯ ಮಾಡಲು GoFundMe ಪುಟವನ್ನು ರಚಿಸಿದ್ದಾಗಿ ತಿಳಿಸಿದ್ದಾರೆ.

ಬಳಿಕ ಜಾನ್‌ನ ವಕೀಲರು ಅವನಿಗೆ ಸಹಾಯ ಮಾಡಲು ತಕ್ಷಣವೇ ಮುಂದಾದರು. ಎಲ್ಲ ವೈದ್ಯಕೀಯ ವೆಚ್ಚವನ್ನು ಭರಿಸಿದಾಗ ಜಾನ್ ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯವಾಯಿತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ