ಯೂನಿಫಾರಂ ಧರಿಸಿ ಓನರ್ ಎದುರೇ ಸ್ಕೂಟಿ ಕಳ್ಳತನ ಮಾಡಿದ ಶಾಲಾ ಹುಡುಗಿಯರು; ಸಿಸಿಟಿವಿ ವಿಡಿಯೋ ವೈರಲ್

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಶಾಲಾ ಯೂನಿಫಾರಂ ಧರಿಸಿದ್ದ ಇಬ್ಬರು ಹುಡುಗಿಯರು ಅಪಾರ್ಟ್‌ಮೆಂಟ್‌ನ ಕೆಳಗೆ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕದ್ದಿದ್ದಾರೆ. ಈ ಘಟನೆಯ ಸುದ್ದಿಯು ಎಲ್ಲೆಡೆ ಹರಡಿದ ನಂತರ ಜನರು ಅಭಯ್ ಡಿಯೋಲ್ ಅಭಿನಯದ ಚಲನಚಿತ್ರ "ಓಯ್ ಲಕ್ಕಿ! ಲಕ್ಕಿ ಓಯೆ!" ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ.

ಯೂನಿಫಾರಂ ಧರಿಸಿ ಓನರ್ ಎದುರೇ ಸ್ಕೂಟಿ ಕಳ್ಳತನ ಮಾಡಿದ ಶಾಲಾ ಹುಡುಗಿಯರು; ಸಿಸಿಟಿವಿ ವಿಡಿಯೋ ವೈರಲ್
ಯೂನಿಫಾರಂ ಧರಿಸಿ ಓನರ್ ಎದುರೇ ಸ್ಕೂಟಿ ಕಳ್ಳತನ ಮಾಡಿದ ಶಾಲಾ ಹುಡುಗಿಯರು
Follow us
|

Updated on:Sep 09, 2024 | 8:13 PM

ವಾರಾಣಸಿ: ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಶಾಲಾ ಸಮವಸ್ತ್ರ ಧರಿಸಿದ್ದ ಇಬ್ಬರು ಹುಡುಗಿಯರು ಅಪಾರ್ಟ್‌ಮೆಂಟ್‌ನ ಕೆಳಗೆ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕದ್ದಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೊದಲ್ಲಿ, ದುರ್ಗಕುಂಡ್‌ನ ಕಬೀರ್ ನಗರದಲ್ಲಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ನಿಲ್ಲಿಸಿದ ಸ್ಕೂಟರ್‌ ಚಲಾಯಿಸಿಕೊಂಡು ಹುಡುಗಿಯೊಬ್ಬಳು ಹೋಗುತ್ತಿರುವುದನ್ನು ಕಾಣಬಹುದು.

ಈ ಘಟನೆಯ ಸುದ್ದಿಯು ಸುತ್ತಲಿನ ಪ್ರದೇಶದಲ್ಲಿ ಹರಡಿದ ನಂತರ ಜನರು ಅಭಯ್ ಡಿಯೋಲ್ ಅಭಿನಯದ ಚಲನಚಿತ್ರ “ಓಯ್ ಲಕ್ಕಿ! ಲಕ್ಕಿ ಓಯೆ!” ಸಿನಿಮಾದ ಪಾತ್ರವನ್ನು ನೆನಪಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ, ಸ್ಕೂಟಿಯ ಮಾಲೀಕರಾದ ಸಾರಿಕಾ ಸಿಂಗ್ ಭೇಲುಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ

ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆ, ಅಪರಿಚಿತ ವಿದ್ಯಾರ್ಥಿಯೊಬ್ಬರು, ಶಾಲಾ ಸಮವಸ್ತ್ರವನ್ನು ಧರಿಸಿ ಮತ್ತು ಬ್ಯಾಗ್ ಅನ್ನು ಹೊತ್ತುಕೊಂಡು ಸಾರಿಕಾ ಸಿಂಗ್ ಬಳಿಗೆ ಬಂದು ನಾನು ನಿಮ್ಮ ಸ್ಕೂಟಿಯನ್ನು ಪಕ್ಕಕ್ಕೆ ಇಡಲು ನಿಮ್ಮ ಕೀ ಬೇಕಿತ್ತು ಎಂದು ಕೇಳಿದಳು.

ಶಾಲಾ ಸಮವಸ್ತ್ರದಲ್ಲಿರುವ ಬಾಲಕಿಯನ್ನು ನೋಡಿದ ಸಾರಿಕಾ ಸಿಂಗ್, ಆಕೆ ಅದೇ ಪ್ರದೇಶದ ನಿವಾಸಿಯಾಗಿರುವುದರಿಂದ ಯಾವುದೋ ದೊಡ್ಡ ವಸ್ತುವನ್ನು ಸಾಗಿಸಲು ನನ್ನ ಸ್ಕೂಟಿ ಅಡ್ಡ ಇರಬಹುದು ಎಂದು ಭಾವಿಸಿ ಕೀ ನೀಡಿದರು. ಆದರೆ, ಆ ಕೀ ಪಡೆದ ಬಾಲಕಿಯರು ಸ್ಕೂಟರ್ ಬಿಟ್ಟುಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ: Crime News: ಟಿವಿ ವಾಲ್ಯೂಮ್ ಯಾಕಿಷ್ಟು ಜೋರಾಗಿದೆ? ಎಂದ ವ್ಯಕ್ತಿಯ ಕತ್ತು ಕತ್ತರಿಸಿ ಕೊಲೆ

20 ನಿಮಿಷಗಳು ಕಳೆದರೂ ಆ ಹುಡುಗಿ ಕೀ ವಾಪಾಸ್ ಕೊಡಲು ಬಾರದೆ ಇದ್ದಾಗ, ಸಾರಿಕಾ ಸಿಂಗ್ ಅನುಮಾನಗೊಂಡು ತನ್ನ ಸ್ಕೂಟರ್ ಅನ್ನು ಪರಿಶೀಲಿಸಲು ಹೋದಾಗ ಅದು ಕಾಣೆಯಾಗಿತ್ತು. ಕೊನೆಗೆ ಆಕೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ತನ್ನ ಸ್ಕೂಟರ್ ಕಳ್ಳತನವಾಗಿರುವುದು ತಿಳಿಯಿತು. ಕೂಡಲೇ ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 pm, Mon, 9 September 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ