AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡ ವಿಧಿಸಿದ ಪೊಲೀಸ್ ಠಾಣೆಯ ಪವರ್ ಕಟ್ ಮಾಡಿದ ಲೈನ್​ ಮ್ಯಾನ್!

ವಾಹನದ ದಾಖಲಾತಿ ಮನೆಯಲ್ಲಿಟ್ಟಿದ್ದ ಲೈನ್​ಮ್ಯಾನ್​ಗೆ ಉತ್ತರಪ್ರದೇಶದ ಪೊಲೀಸರು ದಂಡ ವಿಧಿಸಿದ್ದರು. ಹತಾಶಗೊಂಡ ಲೈನ್ ಮ್ಯಾನ್ ಭಗವಾನ್ ಸ್ವರೂಪ್, ಠಾಣೆಯ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದ್ದಾರೆ. ಮೀಟರ್ ಇಲ್ಲದೆ ವಿದ್ಯುತ್ ಪಡೆಯುತ್ತಿದ್ದರು ಎಂದು ಲೈನ್ ಮ್ಯಾನ್ ಹೇಳಿದ್ದಾರೆ.

ದಂಡ ವಿಧಿಸಿದ ಪೊಲೀಸ್ ಠಾಣೆಯ ಪವರ್ ಕಟ್ ಮಾಡಿದ ಲೈನ್​ ಮ್ಯಾನ್!
ಠಾಣೆ ಪವರ್ ಕಟ್ ಮಾಡಿದ ಲೈನ್ ಮ್ಯಾನ್Image Credit source: istock
TV9 Web
| Edited By: |

Updated on: Jun 13, 2022 | 3:51 PM

Share

ವಿದ್ಯುತ್ ಇಲಾಖೆ ನಿರಂತರ ಪವರ್ ಕಟ್​ನಿಂದ ಬೇಸತ್ತ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಮಂಗೋಟೆ ಗ್ರಾಮದ ರೈತರೊಬ್ಬರು ಧೈರ್ಯದಿಂದ ಸ್ಥಳೀಯ ವಿದ್ಯುತ್ ಕಚೇರಿಗೆ ತೆರಳಿ ತಮ್ಮ ಮನೆಯ ಮಸಾಲೆ ಪದಾರ್ಥಗಳನ್ನು ರುಬ್ಬುವುದರ ಜೊತೆಗೆ ಫೋನ್ ಚಾರ್ಜ್​ ಕೂಡ ಮಾಡಿಕೊಳ್ಳುತ್ತಿದ್ದರು. ಇಂಥ ಅನೇಕ ಅಚ್ಚರಿಯ ಸುದ್ದಿಗಳು ನಡೆಯುತ್ತಲೇ ಇರುತ್ತದೆ. ಇದೀಗ ಉತ್ತರಪ್ರದೇಶದಲ್ಲಿ ಪೊಲೀಸರ ಮೇಲಿನ ಕೋಪಕ್ಕೆ ಲೈನ್​ ಮ್ಯಾನ್ ಒಬ್ಬರು ಠಾಣೆಯ ವಿದ್ಯುತ್ ಕಟ್ ಮಾಡಿದ ಘಟನೆಯೊಂದು ನಡೆದಿದೆ.

ಇದನ್ನೂ ಓದಿ: Trending: ದಿನನಿತ್ಯ ಪವರ್ ಕಟ್, ಸಿಟ್ಟಿಗೆದ್ದ ವ್ಯಕ್ತಿ ಮಸಾಲಾ ರುಬ್ಬಲು ಹೋಗುತ್ತಿರುವುದು ಎಲ್ಲಿ ಗೊತ್ತಾ?

ಉತ್ತರಪ್ರದೇಶದ ಲೈನ್‌ಮ್ಯಾನ್ ಭಗವಾನ್ ಸ್ವರೂಪ್ ಅವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಚೆಕ್‌ಪಾಯಿಂಟ್‌ನಲ್ಲಿ ಬೈಕ್ ನಿಲ್ಲಿಸಿದ ಪೊಲೀಸರು ನೋಂದಣಿ ದಾಖಲಾತಿಗಳನ್ನು ಕೇಳಿದ್ದಾರೆ. ಆದರೆ ಸ್ವರೂಪ್ ಅವರು ದಾಖಲಾತಿಗಳು ತಮ್ಮ ಬಳಿ ಇಟ್ಟುಕೊಂಡಿರಲಿಲ್ಲ. ಬದಲಾಗಿ ಮನೆಯಲ್ಲಿ ಇಟ್ಟಿದ್ದರು. ಅದರಂತೆ ಬೈಕ್ ತಡೆದ ಪೊಲೀಸ್ ಅಧಿಕಾರಿ ಮೋದಿ ಸಿಂಗ್ ಎಂಬವರ ಬಳಿ ತಮ್ಮ ದಾಖಲಾತಿಗಳನ್ನು ಮನೆಯಿಂದ ತಂದು ತೋರಿಸುವುದಾಗಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದನ್ನು ಕೇಳದ ಪೊಲೀಸ್, 500 ರೂ. ದಂಡ ವಿಧಿಸಿದ್ದಾರೆ. ಅದರಂತೆ ಸ್ವರೂಪ್ ಕಾನೂನುಬದ್ಧವಾಗಿ ದಂಡ ಕಟ್ಟಿ ತೆರಳಿದ್ದಾರೆ ಎಂದು ಐಎನ್​ಎಸ್​ ವರದಿ ಮಾಡಿದೆ.

ಪೊಲೀಸರ ಈ ನಡೆಯಿಂದ ಹತಾಶರಾದ ಭಗವಾನ್ ಸ್ವರೂಪ್ ಅವರು, ತನ್ನ ಸಹೋದ್ಯೋಗಿಗಳೊಂದಿಗೆ ಸೇರಿಕೊಂಡು ಠಾಣೆಗೆ ಆಗುತ್ತಿದ್ದ ವಿದ್ಯುತ್ ಪೂರೈಕೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೀಟರ್ ಇಲ್ಲದೆ ವಿದ್ಯುತ್ ಪಡೆಯುತ್ತಿರುವುದು ಪತ್ತೆಯಾಗಿದೆ. ಅದರಂತೆ ಲೈನ್​ಮ್ಯಾನ್ ಠಾಣೆಯ ಪವರ್ ಕಟ್ ಮಾಡಿದ್ದಾರೆ. ಇದನ್ನೂ ಓದಿ: Viral Video: ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಭಗವಾನ್ ಸ್ವರೂಪ್, ಪೊಲೀಸ್ ಠಾಣೆಯಲ್ಲಿ ವಿದ್ಯುತ್ ಮೀಟರ್ ಇಲ್ಲದೇ ವಿದ್ಯುತ್ ಬಳಸಲಾಗುತ್ತಿತ್ತು ಅಥವಾ ಬೇರೆ ರೀತಿಯಲ್ಲಿ ಹೇಳುವುದಾದರೆ ಅಕ್ರಮವಾಗಿ ವಿದ್ಯುತ್ ಪಡೆಯಲಾಗುತ್ತಿತ್ತು ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?