AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ವರ್ಣರಂಜಿತ ಸ್ಕೂಟರ್ ವಿಡಿಯೋ ವೈರಲ್ ಆಗುತ್ತಿದೆ. ಸ್ಕೂಟರ್​ ಸಂಪೂರ್ಣ ಲೈಟಿಂಗ್ಸ್​ನೊಂದಿಗೆ ಮಿಂಚುತ್ತಿದೆ. ಸಾಲದ್ದಕ್ಕೆ ಮೀಟರ್ ಮೇಲೊಂದು ಟಿವಿ, ಏನು ಹೇಳಬಹುದು ಈ ವ್ಯಕ್ತಿಯ ಸೃಜನಶೀಲತೆಗೆ, ಏನು ಹೇಳಬಹುದು ಈ ವ್ಯಕ್ತಿಯ ಪ್ರತಿಭೆಗೆ?

Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್
ವೈರಲ್ ಸ್ಕೂಟರ್
TV9 Web
| Edited By: Rakesh Nayak Manchi|

Updated on:Jun 19, 2022 | 1:19 PM

Share

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಆಗೊಂದು ಈಗೊಂದು ಪೋಸ್ಟ್​​ಗಳನ್ನು ಮಾಡುತ್ತಿರುತ್ತಾರೆ. ಇದೀಗ ವಿಭಿನ್ನವಾದ ವಿಡಿಯೋವೊಂದನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಅವರು ಇಂಥ ಪ್ರತಿಭೆ ಭಾರತದಲ್ಲಿ ಮಾತ್ರ ಇದೆ ಎನ್ನುವ ಅರ್ಥದಲ್ಲಿ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸ್ಕೂಟರ್ (Scooter)​​ ಸಂಪೂರ್ಣ ಲೈಟಿಂಗ್ಸ್​ನೊಂದಿಗೆ ಮಿಂಚುತ್ತಿದೆ. ಸಾಲದ್ದಕ್ಕೆ ಮೀಟರ್ ಮೇಲೊಂದು ಟಿವಿ, ಏನು ಹೇಳಬಹುದು ಈ ವ್ಯಕ್ತಿಯ ಸೃಜನಶೀಲತೆಗೆ, ಏನು ಹೇಳಬಹುದು ಈ ವ್ಯಕ್ತಿಯ ಪ್ರತಿಭೆಗೆ?

ಇದನ್ನೂ ಓದಿ: Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?

ಆನಂದ್ ಮಹೀಂದ್ರಾ ಅವರು ವಿಡಿಯೋ ಹಂಚಿಕೊಳ್ಳುವಾಗ, ”ಜೀವನವು ನೀವು ಬಯಸಿದಷ್ಟು ವರ್ಣರಂಜಿತ ಮತ್ತು ಮನರಂಜನೆಯಾಗಿರಬಹುದುಎಂದು ಶೀರ್ಷಿಕೆ ಬರೆದು ಭಾರತದಲ್ಲಿ ಮಾತ್ರ (#OnlyInIndia) ಎಂದು ಹ್ಯಾಶ್​ಟ್ಯಾಗ್ ಮಾಡಿದ್ದಾರೆ. ವಿಡಿಯೋದಲ್ಲಿ ಗಮನಿಸಿದಂತೆ, ಕಸ್ಟಮೈಸ್ ಮಾಡಿದ ಸ್ಕೂಟರ್ ಅನ್ನು ಪೆಟ್ರೋಲ್ ಪಂಪ್‌ನಲ್ಲಿ ನಿಲ್ಲಿಸಲಾಗಿದೆ, ಅದರ ಮುಂಭಾಗದಲ್ಲಿರುವ ಮೀಟರ್​ನ​ ಮೇಲ್ಭಾಗದಲ್ಲಿ ಸಣ್ಣ ಟಿವಿ ಅಳವಡಿಸಲಾಗಿದ್ದು, ನಟಿಯೊಬ್ಬಳು ಹಾಡಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಅಲ್ಲದೆ ಸ್ಕೂಟರ್​ ಸಂಪೂರ್ಣ ಲೈಟಿಂಗ್ಸ್​ನಿಂದ ಕಂಗೊಳಿಸುತ್ತಿದೆ.

ಇದನ್ನೂ ಓದಿ: Viral: ಸಾಕಿದ ನಾಯಿ ಕಳೆದುಕೊಂಡಾಕೆಯ ಸಂಕಟಕ್ಕೆ ಪೆಟ್ ಫುಡ್ ಕಂಪನಿಯ ಸ್ಪಂದನೆ; ಸಹೃದಯರ ಸಾಂತ್ವನ

ಸದ್ಯ ಸ್ಕೂಟರ್​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, 298k ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 15k ಲೈಕ್ಸ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರೊಬ್ಬರು, “ಇದು ಸೃಜನಶೀಲತೆ, ಈ ಪ್ರತಿಭೆಯನ್ನು ಪೋಷಿಸಬೇಕುಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ಬೈಕ್ ಥಿಯೇಟರ್ಎಂದು ಕಾಮೆಂಟ್ ಮಾಡಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Sun, 19 June 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’