AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತ; ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ

ಹೃದಯಾಘಾತದ ವೇಳೆ ಸಿಪಿಆರ್‌ ನೀಡುವ ಮೂಲಕ ವ್ಯಕ್ತಿಯನ್ನು ಬದುಕಿಸಬಹುದು. ಅದೇ ರೀತಿ ಇಲ್ಲೊಬ್ರು ಟಿಟಿಇ ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾದಾಗ ತಮ್ಮ ಸಮಯಪ್ರಜ್ಞೆಯಿಂದ ಸಿಪಿಆರ್‌ ನೀಡುವ ಮೂಲಕ ಆ ವ್ಯಕ್ತಿಯನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದ್ದು, ಟಿಟಿಇಯ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

Viral: ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತ; ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ
ಮಾಲಾಶ್ರೀ ಅಂಚನ್​
| Edited By: |

Updated on:Nov 24, 2024 | 6:20 PM

Share

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗಿದೆ. ಹೀಗೆ ಯಾರಿಗಾದ್ರೂ ಹೃದಯಾಘಾತವಾದ್ರೆ ತಕ್ಷಣಕ್ಕೆ ಸಿಪಿಆರ್‌ ಚಿಕಿತ್ಸೆಯನ್ನು ನೀಡುವ ಮೂಲಕ ಆ ವ್ಯಕ್ತಿಗಳ ಪ್ರಾಣವನ್ನು ಉಳಿಸಬಹುದು. ಹೀಗೆ ಸಿಪಿಆರ್‌ ನೀಡುವ ಮೂಲಕ ವೈದ್ಯರು ಮಾತ್ರವಲ್ಲದೆ ಸಾಮಾನ್ಯರೂ ಕೂಡಾ ಅಮೂಲ್ಯ ಜೀವಗಳನ್ನು ಕಾಪಾಡಿದ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಆ ತಕ್ಷಣ ಅಲ್ಲಿದ್ದ ಟಿಟಿಇ ತಮ್ಮ ಸಮಯ ಪ್ರಜ್ಞೆಯಿಂದ ಸಿಪಿಆರ್‌ ನೀಡುವ ಮೂಲಕ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಟಿಟಿಇಯ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

15708 ಅಮ್ರಪಾಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದ್ದು, ಟಿಟಿಇ ಸಿಪಿಆರ್‌ ನೀಡುವ ಮೂಲಕ ಒಂದು ಅಮೂಲ್ಯ ಜೀವವನ್ನು ಕಾಪಾಡಿದ್ದಾರೆ. ಜನರಲ್‌ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ 70 ವರ್ಷದ ವ್ಯಕ್ತಿಯೊಬ್ಬರು ಹಠಾತ್‌ ಹೃದಯಾಘಾತಕ್ಕೆ ತುತ್ತಾಗಿದ್ದು, ಆ ತಕ್ಷಣ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಮನಮೋಹನ್‌ ಸಿಪಿಆರ್‌ ನೀಡಿ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ನಂತರ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಛಾಪ್ರಾ ರೈಲ್ವೆ ನಿಲ್ದಾಣದಿಂದ ಆಸ್ಪತ್ರೆಗೆ ಕಳುಹಿಸಲಾಯಿತು.

ಇದನ್ನೂ ಓದಿ: ದಿನಕ್ಕೆ ಒಂದು ಲಕ್ಷ ಸಂಪಾದನೆ ಮಾಡಲು ಸುಧಾ ಮೂರ್ತಿ ಹೇಳಿದ್ದಾರೆಂಬ ವಿಡಿಯೋ ವೈರಲ್

North Eastern Railway ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹೃದಯಾಘಾತಕ್ಕೆ ತುತ್ತಾದ ವ್ಯಕ್ತಿಯನ್ನು ಮಲಗಿಸಿ ಟಿಟಿಇ ಸಮಯಕ್ಕೆ ಸರಿಯಾಗಿ ಸಿಪಿಆರ್‌ ಚಿಕಿತ್ಸೆ ನೀಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಸಿಪಿಆರ್‌ ಚಿಕಿತ್ಸೆಯ ಮೂಲಕ ಟಿಟಿಇ ಮನಮೋಹನ್‌ ಒಂದು ಅಮೂಲ್ಯ ಜೀವವನ್ನು ಉಳಿಸಿದ್ದು, ಇವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:20 pm, Sun, 24 November 24

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?