AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತ; ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ

ಹೃದಯಾಘಾತದ ವೇಳೆ ಸಿಪಿಆರ್‌ ನೀಡುವ ಮೂಲಕ ವ್ಯಕ್ತಿಯನ್ನು ಬದುಕಿಸಬಹುದು. ಅದೇ ರೀತಿ ಇಲ್ಲೊಬ್ರು ಟಿಟಿಇ ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾದಾಗ ತಮ್ಮ ಸಮಯಪ್ರಜ್ಞೆಯಿಂದ ಸಿಪಿಆರ್‌ ನೀಡುವ ಮೂಲಕ ಆ ವ್ಯಕ್ತಿಯನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದ್ದು, ಟಿಟಿಇಯ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

Viral: ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತ; ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ
ಮಾಲಾಶ್ರೀ ಅಂಚನ್​
| Edited By: |

Updated on:Nov 24, 2024 | 6:20 PM

Share

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗಿದೆ. ಹೀಗೆ ಯಾರಿಗಾದ್ರೂ ಹೃದಯಾಘಾತವಾದ್ರೆ ತಕ್ಷಣಕ್ಕೆ ಸಿಪಿಆರ್‌ ಚಿಕಿತ್ಸೆಯನ್ನು ನೀಡುವ ಮೂಲಕ ಆ ವ್ಯಕ್ತಿಗಳ ಪ್ರಾಣವನ್ನು ಉಳಿಸಬಹುದು. ಹೀಗೆ ಸಿಪಿಆರ್‌ ನೀಡುವ ಮೂಲಕ ವೈದ್ಯರು ಮಾತ್ರವಲ್ಲದೆ ಸಾಮಾನ್ಯರೂ ಕೂಡಾ ಅಮೂಲ್ಯ ಜೀವಗಳನ್ನು ಕಾಪಾಡಿದ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಆ ತಕ್ಷಣ ಅಲ್ಲಿದ್ದ ಟಿಟಿಇ ತಮ್ಮ ಸಮಯ ಪ್ರಜ್ಞೆಯಿಂದ ಸಿಪಿಆರ್‌ ನೀಡುವ ಮೂಲಕ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಟಿಟಿಇಯ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

15708 ಅಮ್ರಪಾಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದ್ದು, ಟಿಟಿಇ ಸಿಪಿಆರ್‌ ನೀಡುವ ಮೂಲಕ ಒಂದು ಅಮೂಲ್ಯ ಜೀವವನ್ನು ಕಾಪಾಡಿದ್ದಾರೆ. ಜನರಲ್‌ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ 70 ವರ್ಷದ ವ್ಯಕ್ತಿಯೊಬ್ಬರು ಹಠಾತ್‌ ಹೃದಯಾಘಾತಕ್ಕೆ ತುತ್ತಾಗಿದ್ದು, ಆ ತಕ್ಷಣ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಮನಮೋಹನ್‌ ಸಿಪಿಆರ್‌ ನೀಡಿ ಆ ವ್ಯಕ್ತಿಯ ಪ್ರಾಣವನ್ನು ಉಳಿಸಿದ್ದಾರೆ. ನಂತರ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಛಾಪ್ರಾ ರೈಲ್ವೆ ನಿಲ್ದಾಣದಿಂದ ಆಸ್ಪತ್ರೆಗೆ ಕಳುಹಿಸಲಾಯಿತು.

ಇದನ್ನೂ ಓದಿ: ದಿನಕ್ಕೆ ಒಂದು ಲಕ್ಷ ಸಂಪಾದನೆ ಮಾಡಲು ಸುಧಾ ಮೂರ್ತಿ ಹೇಳಿದ್ದಾರೆಂಬ ವಿಡಿಯೋ ವೈರಲ್

North Eastern Railway ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹೃದಯಾಘಾತಕ್ಕೆ ತುತ್ತಾದ ವ್ಯಕ್ತಿಯನ್ನು ಮಲಗಿಸಿ ಟಿಟಿಇ ಸಮಯಕ್ಕೆ ಸರಿಯಾಗಿ ಸಿಪಿಆರ್‌ ಚಿಕಿತ್ಸೆ ನೀಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಸಿಪಿಆರ್‌ ಚಿಕಿತ್ಸೆಯ ಮೂಲಕ ಟಿಟಿಇ ಮನಮೋಹನ್‌ ಒಂದು ಅಮೂಲ್ಯ ಜೀವವನ್ನು ಉಳಿಸಿದ್ದು, ಇವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:20 pm, Sun, 24 November 24

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?