Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಕಾಶದಲ್ಲಿ ಗಾಳಿಗೆ ಅಲುಗಾಡಿದ ವಿಮಾನ, ಲಗೆಜ್‌ ಕಂಪಾರ್ಟ್ಮೆಂಟ್‌ನಲ್ಲಿ ಸಿಲುಕಿದ ಪ್ರಯಾಣಿಕ

ವಾಯು ಪ್ರಕ್ಷುಬ್ಧತೆಯ ಪರಿಣಾಮದಿಂದಾಗಿ ಈ ಮೊದಲು ಅನೇಕ ವಿಮಾನ ಅಪಘಾತಗಳು, ಸಾವು ನೋವುಗಳು ಸಂಭವಿಸಿದೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸ್ಪೇನ್‌ನ ಮ್ಯಾಡ್ರಿಡ್‌ನಿಂದ ಉರುಗ್ವೆಗೆ ಕಡೆ ತೆರಳಿದ್ದ ಏರ್‌ ಯುರೋಪಾ ಬೋಯಿಂಗ್‌ 787-9 ಡ್ರೀಮ್‌ ಲೈನರ್‌ ವಿಮಾನದಲ್ಲಿ ಭಾರೀ ಪ್ರಕ್ಷುಬ್ಧತೆ ಕಾಣಿಸಿಕೊಂಡಿದೆ. ಪರಿಣಾಮವಾಗಿ ಒಬ್ಬ ಪ್ರಯಾಣಿಕ ಲಗೆಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹಲವರಿಗೆ ಗಾಯಗಳಾಗಿವೆ.

Viral Video: ಆಕಾಶದಲ್ಲಿ ಗಾಳಿಗೆ ಅಲುಗಾಡಿದ ವಿಮಾನ, ಲಗೆಜ್‌ ಕಂಪಾರ್ಟ್ಮೆಂಟ್‌ನಲ್ಲಿ ಸಿಲುಕಿದ ಪ್ರಯಾಣಿಕ
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 02, 2024 | 4:36 PM

ವಿಮಾನ ಹಾರಾಟದ ಸಮಯದಲ್ಲಿ ಹವಾಮಾನವು ಕೆಟ್ಟದಾಗಿದ್ದಾಗ, ವಿಮಾನದಲ್ಲಿ ಭಾರೀ ಪ್ರಕ್ಷುಬ್ಧತೆ ಕಾಣಿಸಿಕೊಳ್ಳುತ್ತದೆ. ಈ ಸಮಯದಲ್ಲಿ ವಿಮಾನವು ತೀವ್ರವಾಗಿ ಅಲುಗಾಡಲು ಶುರುವಾಗಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗುತ್ತದೆ. ಹೀಗೆ ವಾಯು ಪ್ರಕ್ಷುಬ್ಧತೆಯಿಂದ ಅನೇಕ ವಿಮಾನ ಅಪಘಾತಗಳು ಸಾವು ನೋವುಗಳು ಸಂಭವಿಸಿದೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಉರುಗ್ವೇ ಕಡೆಗೆ ತೆರಳಿದ್ದ ಏರ್‌ ಯುರೋಪಾ ವಿಮಾನವು ವಾಯು ಪ್ರಕ್ಷುಬ್ಧತೆಗೆ ತುತ್ತಾಗಿದೆ. ಪರಿಣಾಮವಾಗಿ ಒಬ್ಬ ಪ್ರಯಾಣಿಕ ಲಗೆಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹಲವರಿಗೆ ಗಾಯಗಳಾಗಿವೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಸ್ಪೇನ್‌ ದೇಶದ ಮ್ಯಾಡ್ರಿಡ್‌ನಿಂದ ಉರುಗ್ವೆಯ ರಾಜಧಾನಿ ಮಾಂಟೆವಿಡಿಯೊಗೆ ತೆರಳುತ್ತಿದ್ದ ಏರ್‌ ಯುರೋಪಾ ಬೋಯಿಂಗ್‌ 787-9 ಡ್ರೀಮ್‌ ಲೈನರ್‌ ವಿಮಾನವು ವಾಯು ಪ್ರಕ್ಷುಬ್ಧತೆಗೆ ತುತ್ತಾಗಿದ್ದು, ವಿಮಾನವು ತೀವ್ರವಾಗಿ ಅಲುಗಾಡಿದರ ಪರಿಣಾಮ ಸೀಟ್‌ ಮೇಲೆ ಕುಳಿತಿದ್ದ ಪ್ರಯಾಣಿಕರೊಬ್ಬರು ಸೀದಾ ಹೋಗಿ ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅಲ್ಲದೆ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ನಂತರ ವಿಮಾನವನ್ನು ಸುರಕ್ಷಿತವಾಗಿ ಬ್ರೆಜಿಲ್‌ನಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ.

ಈ ಆಘಾತಕಾರಿ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ಸ್ನೇಹಾ (snehamordani) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಾಯು ಪ್ರಕ್ಷುಬ್ಧತೆಯಿಂದಾಗಿ, ತೀವ್ರವಾಗಿ ವಿಮಾನವು ಅಲುಗಾಡಿದಾಗ ಸೀದಾ ಹೋಗಿ ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಪ್ರಯಾಣಿಕರೊಬ್ಬರನ್ನು ಸಹ ಪ್ರಯಾಣಿಕರು ಜೋಪಾನವಾಗಿ ಕೆಳಗಿಳಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ರೋಹಿತ್‌, ಗೃಹ ಸಚಿವ ಕೊಹ್ಲಿ, ಟೀಮ್‌ ಇಂಡಿಯಾ ಆಟಗಾರರು ಕೇಂದ್ರ ಸಚಿವರಾದ್ರೆ ಹೇಗಿರ್ತಾರೆ ನೋಡಿ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಭಯಾನಕ ದೃಶ್ಯವನ್ನು ಕಂಡು ನೆಟ್ಟಿಗರು ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ