AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಗಂಡನ ಬೆವರಿನ ವಾಸನೆ ತಡೆಯಲಾರದೆ ವಿಚ್ಛೇದನ ನೀಡಿದ ಪತ್ನಿ

'ಪತಿ ಸ್ನಾನ ಮಾಡುವುದಿಲ್ಲ, ಹಲ್ಲುಜ್ಜುವುದಿಲ್ಲ, ಆತನ ಬೆವರಿನ ವಾಸನೆಯಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ.ನನಗೆ ವಿಚ್ಛೇದನ ಕೊಡಿಸಿ' ಎಂದು ಮಹಿಳೆಯೊಬ್ಬಳು ಕೋರ್ಟ್ ಮೊರೆ ಹೋಗಿದ್ದಾಳೆ.ಜೊತೆಗೆ ಪತಿ ವಿರುದ್ಧ ಮಾಡಿದ್ದ ಆರೋಪಗಳನ್ನು ದೃಢೀಕರಿಸಲು ಆತನ ಸಹೋದ್ಯೋಗಿಗಳನ್ನು ಕೂಡ ಸಾಕ್ಷಿಯ ರೂಪದಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ.

Viral News: ಗಂಡನ ಬೆವರಿನ ವಾಸನೆ ತಡೆಯಲಾರದೆ ವಿಚ್ಛೇದನ ನೀಡಿದ ಪತ್ನಿ
ಬೆವರಿನ ವಾಸನೆ ತಡೆಯಲಾದರೆ ವಿಚ್ಛೇದನ ನೀಡಿದ ಪತ್ನಿImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 04, 2024 | 12:51 PM

Share

“ನನ್ನ ಪತಿ 10 ದಿನಕ್ಕೆ ಒಮ್ಮೆ ಮಾತ್ರ ಸ್ನಾನ ಮಾಡುತ್ತಾನೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಲ್ಲುಜ್ಜುತ್ತಾನೆ. ಇದರಿಂದ ಬಾಯಿ ಹಾಗೂ ದೇಹ ದುರ್ವಾಸನೆ ಬರುತ್ತಿದ್ದು, ಆತನೊಂದಿಗೆ ಜೀವನ ನಡೆಸಲು ನನಗೆ ಸಾಧ್ಯವಿಲ್ಲ” ಎಂದು ಮಹಿಳೆಯೊಬ್ಬಳು ತನ್ನ ಪತಿಯಿಂದ ವಿಚ್ಛೇದನ ಪಡೆಯಲು ಕೋರ್ಟ್ ಮೊರೆ ಹೋಗಿದ್ದಾಳೆ. ಆಡಿಟ್ ಸೆಂಟ್ರಲ್ ವೆಬ್‌ಸೈಟ್‌ನ ವರದಿಯ ಪ್ರಕಾರ ವೈಯಕ್ತಿಕ ನೈರ್ಮಲ್ಯದ ಕೊರತೆಯಿಂದಾಗಿ ಪತ್ನಿ ತನ್ನ ಪತಿ ವಿರುದ್ಧ ವಿಚ್ಛೇದನ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಪತಿ ವಿರುದ್ಧ ಪತ್ನಿ ಮಾಡಿದ ಆರೋಪಗಳನ್ನು ದೃಢೀಕರಿಸಲು ಆತನ ಸಹೋದ್ಯೋಗಿಗಳನ್ನು ಕೂಡ ಸಾಕ್ಷಿಯ ರೂಪದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಸಾಕ್ಷಿಗಳ ಆಧಾರದ ಮೇಲೆ ಮಹಿಳೆಗೆ ಪತಿಯಿಂದ ವಿಚ್ಛೇದನವನ್ನು ನೀಡಲಾಗಿದೆ. ಇದಲ್ಲದೆ, ಪತ್ನಿಗೆ ಪರಿಹಾರವಾಗಿ 16,500 ಡಾಲರ್ ಅಂದರೆ ಸುಮಾರು ರೂ. 13 ಲಕ್ಷ 69 ಸಾವಿರ ಪರಿಹಾರ ಧನ ನೀಡುವಂತೆ ಆದೇಶಿಸಿದೆ.

ಇದನ್ನೂ ಓದಿ: ಹೆಣ್ಣಿನ ಕುರುಹು ಕಾಣದ ವಿಚಿತ್ರ ಗ್ರಾಮವಿದು; ಏನಿದು ‘ವರ್ಜಿನ್ ವಿಲೇಜ್’?

ನ್ಯಾಯಾಲಯದಲ್ಲಿ ಸಾಕ್ಷಿಗಳ ಹೇಳಿಕೆಯ ಪ್ರಕಾರ, ಮಹಿಳೆಯ ಪತಿ 10 ದಿನಕ್ಕೊಮ್ಮೆ ಸ್ನಾನ ಮಾಡುತ್ತಾನೆ. ಇದಲ್ಲದೆ, ಹಲ್ಲುಗಳನ್ನು ವಾರಕ್ಕೊಮ್ಮೆ ಅಥವಾ ವಾರಕ್ಕೆ ಎರಡು ಬಾರಿ ಮಾತ್ರ ಹಲ್ಲುಜ್ಜುತ್ತಾನೆ. ಇದರಿಂದ ಬಾಯಿ ದುರ್ವಾಸನೆ ಹಾಗೂ ದೇಹದ ದುರ್ವಾಸನೆ ಬರುತ್ತಿದ್ದು, ಪತ್ನಿಗೆ ಆ ಗಂಡನೊಂದಿಗೆ ಬಾಳುವುದು ಕಷ್ಟವಾಯಿತು ಎಂದು ನಮೂದಿಸಲಾಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Sun, 4 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ