AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫ್ಲಿಪ್​ ಕಾರ್ಟ್​ನಲ್ಲಿ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ; ಸಿಕ್ಕಿದ್ದು ಮಾತ್ರ ಖಾಲಿ ಬಾಕ್ಸ್!

Shocking News: ನಟ ಫ್ಲಿಪ್ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದರು. ಆದರೆ ಬಾಕ್ಸ್​ನಲ್ಲಿ ಏನೂ ಇರಲಿಲ್ಲ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

Viral News: ಫ್ಲಿಪ್​ ಕಾರ್ಟ್​ನಲ್ಲಿ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ; ಸಿಕ್ಕಿದ್ದು ಮಾತ್ರ ಖಾಲಿ ಬಾಕ್ಸ್!
ಟ್ವಿಟರ್​ ಪೋಸ್ಟ್​
TV9 Web
| Edited By: |

Updated on: Oct 17, 2021 | 10:30 AM

Share

ಫ್ಲಿಪ್​ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ ಪರಾಸ್ ಕಲ್ನವತ್ ಅವರು ಆರ್ಡರ್ ಸ್ವೀಕರಿಸಿದ ಬಳಿಕ ಖಾಲಿ ಬಾಕ್ಸ್ ನೋಡಿ ಆಶ್ಚರ್ಯಚಕಿತರಾಗಿದ್ದಾರೆ. ಈ ಕುರಿತಂತೆ ಅವರು ಟ್ವಿಟರ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಟಿವಿ ಧಾರವಾಹಿ ಅನುಪಮಾದಲ್ಲಿ ಸಮರ್ ಪಾತ್ರದಲ್ಲಿ ಜನಪ್ರಿಯತೆ ಗಳಿಸಿಕೊಂಡಿರುವ ನಟ ಫ್ಲಿಪ್ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದರು. ಆದರೆ ಬಾಕ್ಸ್​ನಲ್ಲಿ ಏನೂ ಇರಲಿಲ್ಲ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

ಇಲ್ಲಿ ನಾನು ಫ್ಲಿಪ್​ ಕಾರ್ಟ್​ನಿಂದ ಏನೂ ಸ್ವೀಕರಿಸಿಲ್ಲ. ಸಮಯ ಕಳೆಯುತ್ತಿದ್ದಂತೆಯೇ ಈ ಥರಹದ ಪ್ರಕರಣಗಳು ಕಂಡು ಬರುತ್ತಿವೆ. ಇದೇ ರೀತಿ ಮುಂದುವೆರೆದರೆ ಶೀಘ್ರದಲ್ಲಿಯೇ ಫ್ಲಿಪ್ ಕಾರ್ಟ್​ನಿಂದ ಜನರು ವಸ್ತುಗಳ ಖರೀದಿಯನ್ನು ನಿಲ್ಲಿಸುತ್ತಾರೆ ಎಂದು ಪರಾಸ್ ಟ್ವೀಟ್ ಮಾಡಿದ್ದಾರೆ. ಅವರಿಗೆ ತಲುಪಿದ ಖಾಲಿ ಬಾಕ್ಸ್​ನ ಚಿತ್ರಗಳನ್ನೂ ಸಹ ಅವರು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವರ ಟ್ವೀಟ್​ಗೆ ಫ್ಲಿಪ್ ಕಾರ್ಟ್ ಪ್ರತಿಕ್ರಿಯಿಸಿ, ಕ್ಷಮಿಸಿ, ನಿಮ್ಮ ಕಾಳಜಿಯನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ನಿಮಗೆ ಸಹಾಯ ಮಾಡುತ್ತೇವೆ. ದಯವಿಟ್ಟು ನಿಮ್ಮ ಆರ್ಡರ್ ಐಡಿಯನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಇದರಿಂದ ನಿಮಗೆ ಮತ್ತಷ್ಟು ಸಹಾಯ ಮಾಡುತ್ತೇವೆ ಎಂದು ಹೇಳಿದೆ.

ಅನೇಕರು ಈ ರೀತಿಯ ಅನುಭವಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ತಮಾಷೆ ಮಾಡಿದ್ದಾರೆ. ಈ ವಾರದಲ್ಲಿ ಇಂಥಹುದೇ ಮತ್ತೊಂದು ಪ್ರಕರಣ ಬಯಲಾಗಿತ್ತು. ರಿಯಾಯಿತಿಯಲ್ಲಿ ಆಪಲ್ ಐಫೋನ್ 12 ಅನ್ನು ಆರ್ಡರ್ ಮಾಡಿದ್ದ ಗ್ರಾಹಕರೋರ್ವರಿಗೆ ನಿರ್ಮಾ ಸೋಪ್ ಬಂದಿತ್ತು. ಐಫೋನ್ ಇರುತ್ತದೆ ಎಂದು ಖಷಿಯಿಂದ ಬಾಕ್ಸ್ ಓಪನ್​ ಮಾಡಿದ ಗ್ರಾಹಕರು ಅದರಲ್ಲಿ ನಿರ್ಮಾ ಸೋಪ್ ನೋಡಿ ಶಾಕ್ ಆಗಿದ್ದರು. ಈ ರೀತಿ ನಡೆದಿದೆ ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Shocking News: ಫ್ಲಿಪ್ ​ಕಾರ್ಟ್​ನಲ್ಲಿ ಆರ್ಡರ್ ಮಾಡಿದ್ದು 53,000 ರೂ. Apple iPhone 12 ಫೋನ್​; ಕೈಗೆ ಸಿಕ್ಕಿದ್ದು ಮಾತ್ರ ನಿರ್ಮಾ ಸೋಪ್!

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ