AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫ್ಲಿಪ್​ ಕಾರ್ಟ್​ನಲ್ಲಿ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ; ಸಿಕ್ಕಿದ್ದು ಮಾತ್ರ ಖಾಲಿ ಬಾಕ್ಸ್!

Shocking News: ನಟ ಫ್ಲಿಪ್ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದರು. ಆದರೆ ಬಾಕ್ಸ್​ನಲ್ಲಿ ಏನೂ ಇರಲಿಲ್ಲ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

Viral News: ಫ್ಲಿಪ್​ ಕಾರ್ಟ್​ನಲ್ಲಿ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ; ಸಿಕ್ಕಿದ್ದು ಮಾತ್ರ ಖಾಲಿ ಬಾಕ್ಸ್!
ಟ್ವಿಟರ್​ ಪೋಸ್ಟ್​
TV9 Web
| Edited By: |

Updated on: Oct 17, 2021 | 10:30 AM

Share

ಫ್ಲಿಪ್​ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ ಪರಾಸ್ ಕಲ್ನವತ್ ಅವರು ಆರ್ಡರ್ ಸ್ವೀಕರಿಸಿದ ಬಳಿಕ ಖಾಲಿ ಬಾಕ್ಸ್ ನೋಡಿ ಆಶ್ಚರ್ಯಚಕಿತರಾಗಿದ್ದಾರೆ. ಈ ಕುರಿತಂತೆ ಅವರು ಟ್ವಿಟರ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಟಿವಿ ಧಾರವಾಹಿ ಅನುಪಮಾದಲ್ಲಿ ಸಮರ್ ಪಾತ್ರದಲ್ಲಿ ಜನಪ್ರಿಯತೆ ಗಳಿಸಿಕೊಂಡಿರುವ ನಟ ಫ್ಲಿಪ್ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದರು. ಆದರೆ ಬಾಕ್ಸ್​ನಲ್ಲಿ ಏನೂ ಇರಲಿಲ್ಲ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

ಇಲ್ಲಿ ನಾನು ಫ್ಲಿಪ್​ ಕಾರ್ಟ್​ನಿಂದ ಏನೂ ಸ್ವೀಕರಿಸಿಲ್ಲ. ಸಮಯ ಕಳೆಯುತ್ತಿದ್ದಂತೆಯೇ ಈ ಥರಹದ ಪ್ರಕರಣಗಳು ಕಂಡು ಬರುತ್ತಿವೆ. ಇದೇ ರೀತಿ ಮುಂದುವೆರೆದರೆ ಶೀಘ್ರದಲ್ಲಿಯೇ ಫ್ಲಿಪ್ ಕಾರ್ಟ್​ನಿಂದ ಜನರು ವಸ್ತುಗಳ ಖರೀದಿಯನ್ನು ನಿಲ್ಲಿಸುತ್ತಾರೆ ಎಂದು ಪರಾಸ್ ಟ್ವೀಟ್ ಮಾಡಿದ್ದಾರೆ. ಅವರಿಗೆ ತಲುಪಿದ ಖಾಲಿ ಬಾಕ್ಸ್​ನ ಚಿತ್ರಗಳನ್ನೂ ಸಹ ಅವರು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವರ ಟ್ವೀಟ್​ಗೆ ಫ್ಲಿಪ್ ಕಾರ್ಟ್ ಪ್ರತಿಕ್ರಿಯಿಸಿ, ಕ್ಷಮಿಸಿ, ನಿಮ್ಮ ಕಾಳಜಿಯನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ನಿಮಗೆ ಸಹಾಯ ಮಾಡುತ್ತೇವೆ. ದಯವಿಟ್ಟು ನಿಮ್ಮ ಆರ್ಡರ್ ಐಡಿಯನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಇದರಿಂದ ನಿಮಗೆ ಮತ್ತಷ್ಟು ಸಹಾಯ ಮಾಡುತ್ತೇವೆ ಎಂದು ಹೇಳಿದೆ.

ಅನೇಕರು ಈ ರೀತಿಯ ಅನುಭವಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ತಮಾಷೆ ಮಾಡಿದ್ದಾರೆ. ಈ ವಾರದಲ್ಲಿ ಇಂಥಹುದೇ ಮತ್ತೊಂದು ಪ್ರಕರಣ ಬಯಲಾಗಿತ್ತು. ರಿಯಾಯಿತಿಯಲ್ಲಿ ಆಪಲ್ ಐಫೋನ್ 12 ಅನ್ನು ಆರ್ಡರ್ ಮಾಡಿದ್ದ ಗ್ರಾಹಕರೋರ್ವರಿಗೆ ನಿರ್ಮಾ ಸೋಪ್ ಬಂದಿತ್ತು. ಐಫೋನ್ ಇರುತ್ತದೆ ಎಂದು ಖಷಿಯಿಂದ ಬಾಕ್ಸ್ ಓಪನ್​ ಮಾಡಿದ ಗ್ರಾಹಕರು ಅದರಲ್ಲಿ ನಿರ್ಮಾ ಸೋಪ್ ನೋಡಿ ಶಾಕ್ ಆಗಿದ್ದರು. ಈ ರೀತಿ ನಡೆದಿದೆ ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Shocking News: ಫ್ಲಿಪ್ ​ಕಾರ್ಟ್​ನಲ್ಲಿ ಆರ್ಡರ್ ಮಾಡಿದ್ದು 53,000 ರೂ. Apple iPhone 12 ಫೋನ್​; ಕೈಗೆ ಸಿಕ್ಕಿದ್ದು ಮಾತ್ರ ನಿರ್ಮಾ ಸೋಪ್!

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್