AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಲೈವ್ ನ್ಯೂಸ್​ ಓದುತ್ತಲೇ ಈ ಆ್ಯಂಕರ್​ ಪಾರ್ಶ್ವವಾಯುವಿಗೆ ಒಳಗಾಗುವಾಗ

TV anchor fumbles on live news : ಸುದ್ದಿ ಓದುತ್ತಿರುವ ಈ ಆ್ಯಂಕರ್​ಗೆ ತನ್ನಲ್ಲೇನೋ ಆಗುತ್ತಿದೆ ಎಂಬುದು ಅರಿವಿಗೆ ಬಂದರೂ ನಿಭಾಯಿಸಲು ಪ್ರಯತ್ನಿಸಿದ್ದಾರೆ. ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಸದ್ಯ ಬಚಾವಾಗಿದ್ದಾರೆ.

Viral Video : ಲೈವ್ ನ್ಯೂಸ್​ ಓದುತ್ತಲೇ ಈ ಆ್ಯಂಕರ್​ ಪಾರ್ಶ್ವವಾಯುವಿಗೆ ಒಳಗಾಗುವಾಗ
ಪತ್ರಕರ್ತೆ ಜ್ಯೂಲಿ
TV9 Web
| Edited By: |

Updated on:Sep 07, 2022 | 6:51 PM

Share

Viral Video : ತುಲ್ಸಾದ ಎನ್​ಬಿಸಿ ಯೂನಿವರ್ಸಲ್​ ಚಾನೆಲ್​ನ ಪತ್ರಕರ್ತೆ ಜ್ಯೂಲಿ ಚಿನ್ ಲೈವ್​ನಲ್ಲಿ ಸುದ್ದಿ ಓದುತ್ತಿದ್ದಾಗ ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ. ಸದ್ಯ ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಎನ್‌ಬಿಸಿಯ ಹಿರಿಯ ಕಾರ್ಯನಿರ್ವಾಹಕ ಮೈಕ್ ಸಿಂಗ್ಟನ್ ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ನಾಸಾ ಇತ್ತೀಚೆಗೆ ಉಡಾವಣೆ ಮಾಡಿದ ಸುದ್ದಿಯನ್ನು ಜ್ಯೂಲಿ ಓದುತ್ತಿದ್ದಾರೆ. ಆ ವೇಳೆ ಇದ್ದಕ್ಕಿದ್ದಂತೆ ತೊದಲಲು ಶುರುಮಾಡಿದ್ದು ಆಕೆಯ ಅರಿವಿಗೆ ಬಂದು ಕ್ಷಮೆ ಕೇಳುತ್ತಲೇ ಒಂದು ಹಂತದ ತನಕ ಸುದ್ದಿ ಓದುವುದನ್ನು ಮುಂದುವರಿಸಿದ್ದಾರೆ. ನಂತರ ಸಹೋದ್ಯೋಗಿಗಳು ತಕ್ಷಣವೇ ಹವಾಮಾನ ವರದಿ ಬಿತ್ತರಿಸಿ ಲೈವ್​ ನ್ಯೂಸ್​ ನಿಭಾಯಿಸಿದ್ಧಾರೆ.

ಇತ್ತ ಪರಿಸ್ಥಿತಿ ಅರಿತ ಉಳಿದ ಸಹೋದ್ಯೋಗಿಗಗಳು 911ಗೆ ಕರೆಮಾಡಿ ಜೂಲಿಯನ್ನು ಅಗತ್ಯ ಚಿಕಿತ್ಸೆಗೆ ಒಳಪಡಿಸಿದ್ದಾರೆ. ನಂತರ ಅವರ ಆರೋಗ್ಯ ಸ್ಥಿರವಾಗಿದ್ದನ್ನು ದೃಢಪಡಿಸಿದ್ದಾರೆ. ಸುಮಾರು ನಾಲ್ಕು ಲಕ್ಷ ಜನ ಈ ವಿಡಿಯೋ ವೀಕ್ಷಿಸಿ ತಮ್ಮ ಕಾಳಜಿಯನ್ನು ಪ್ರತಿಕ್ರಿಯೆಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಸಿಂಗ್ಟನ್​, ‘ಜ್ಯೂಲಿ ಚಿನ್ ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯಿಂದ ಅವರೇ ಈ ಫೋಟೋ ಪೋಸ್ಟ್​ ಮಾಡಿದ್ದಾರೆ. ಅವರು ಸದ್ಯದಲ್ಲೇ ಕೆಲಸಕ್ಕೆ ಮರಳುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಸಹಕರಿಸಿದ ಸಹೋದ್ಯೋಗಿಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ’ ಎಂದು ಟ್ವೀಟ್​ ಅಪ್​ಡೇಟ್​ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಫರಾ ನಾಸರ್ ಎಂಬ ಪತ್ರಕರ್ತೆ ಲೈವ್ ನ್ಯೂಸ್​ ಓದುತ್ತಿದ್ದಾಗ ಹಾರಿಬಂದ ನೊಣವನ್ನು ನುಂಗಿದ್ದರು. ಆ ವಿಡಿಯೋ ವೈರಲ್​ ಆಗಿದ್ದನ್ನು ನೀವು ನೋಡಿರುತ್ತೀರಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:50 pm, Wed, 7 September 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ