AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟಿವಿ ಚಾನೆಲ್​ನ ನೇರಪ್ರಸಾರದಲ್ಲಿ ವರದಿ ಮಾಡುತ್ತಿರುವಾಗ ವರದಿಗಾರ್ತಿಗೆ ಗುದ್ದಿದ ಕಾರು

ವರದಿಗಾರ್ತಿಯೊಬ್ಬರು ಹವಾಮಾನ ವರದಿ ನೀಡಲು ರಸ್ತೆಯ ಬಳಿ ನಿಂತಾಗ ಕಾರೊಂದು ಗುದ್ದಿದ ಘಟನೆ ನಡೆದಿದೆ. ವರದಿ ಮಾಡುತ್ತಿರುವಾಗಲೇ ಅಪಘಾತವಾಗಿದ್ದು ಸ್ಟುಡಿಯೋದಲ್ಲಿದ್ದ ಆ್ಯಂಕರ್​ ಗಾಬರಿಗೊಂಡಿರುವ ವಿಡಿಯೋ ವೈರಲ್​ ಆಗಿದೆ. 

Viral Video: ಟಿವಿ ಚಾನೆಲ್​ನ ನೇರಪ್ರಸಾರದಲ್ಲಿ ವರದಿ ಮಾಡುತ್ತಿರುವಾಗ ವರದಿಗಾರ್ತಿಗೆ ಗುದ್ದಿದ ಕಾರು
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Updated By: Pavitra Bhat Jigalemane|

Updated on: Jan 21, 2022 | 12:21 PM

Share

ಟಿವಿ ಚಾನೆಲ್ (TV Channel)​ ಗಳಲ್ಲಿ ವರದಿಗಾರರಾಗಿ ಕೆಲಮಾಡುವುದೆಂದರೆ ಅಷ್ಟು ಸುಲಭದ ಮಾತಲ್ಲ. ವರದಿ ಮಾಡಲು ಬೇರೆ ಬೇರೆ ಸ್ಥಳಗಳಿಗೆ ಹೋಗಬೇಕಾಗುತ್ತದೆ. ಅಲ್ಲಿರುವ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಪ್ರಾಣಿಪಕ್ಷಿಗಳ ಕಾಟ, ಸಾರ್ವಜನಿಕರ ಮಾತು ಎಲ್ಲವನ್ನೂ ಕೇಳಬೇಕು. ಇದೀಗ ವರದಿಗಾರ್ತಿ(Reporter)  ಯೊಬ್ಬರು ಹವಾಮಾನ ವರದಿ (Wether Report) ನೀಡಲು ರಸ್ತೆಯ ಬಳಿ ನಿಂತಾಗ ಕಾರೊಂದು ಗುದ್ದಿದ ಘಟನೆ ನಡೆದಿದೆ. ವರದಿ ಮಾಡುತ್ತಿರುವಾಗಲೇ ಅಪಘಾತವಾಗಿದ್ದು ಸ್ಟುಡಿಯೋದಲ್ಲಿದ್ದ ಆ್ಯಂಕರ್​ (Anchor) ಗಾಬರಿಗೊಂಡಿರುವ ವಿಡಿಯೋ ವೈರಲ್​ ಆಗಿದೆ. ವಿಡಿಯೋವನ್ನು ಟ್ವಿಟರ್​ನಲ್ಲಿ  ಹಂಚಿಕೊಳ್ಳಲಾಗಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಎನ್​ಡಿಟಿವಿ ವರದಿ ಪ್ರಕಾರ ಪಶ್ಚಿಮ ವರ್ಜೀನಿಯಾ ದೇಶದ ಡನ್‌ಬಾರ್ ನಲ್ಲಿ WSAZ-TV ಚಾನೆಲ್​ನ ವರದಿಗಾರ್ತಿ ನೇರಪ್ರಸಾರದಲ್ಲಿ ವರದಿ ಮಾಡುತ್ತಿರುವ ವೇಳೆ ಅಪಘಾತಕ್ಕೀಡಾಗಿದ್ದಾರೆ. ಆದರೂ ತಕ್ಷಣ ಎದ್ದು ನಿಂತು ಕ್ಯಾಮರಾದ ಎದುರು ಬಂದು ನಾನು ಆರಮವಾಗಿದ್ದೇನೆ ಎಂದಿದ್ದಾರೆ. WSAZ-TV ಚಾನೆಲ್​ನ ಟೋರಿ ಯೋರ್ಗೆ ಎನ್ನುವ ಮಹಿಳಾ ವರದಿಗಾರ್ತಿ ಡನ್​ಬಾರ್​ನಲ್ಲಿ ಹಮಾಮಾನ ವರದಿಯನ್ನು ನೀಡುತ್ತಿದ್ದರು. ಆಗ ಚಾನೆಲ್​ನ ಸ್ಟುಡಿಯೋದಲ್ಲಿ ಟಿಮ್ ಇರ್ ಆ್ಯಂಕರ್​ ಆಗಿ ಕುಳಿತಿದ್ದರು. ಟೋರಿ ಕ್ಯಾಮರಾ ಎದುರು ಬಂದೆ ಕೆಲವೇ ಕ್ಷಣಗಳಲ್ಲಿ ಕಾರೊಂದು ಬಂದು ಗುದ್ದಿದ್ದು, ಅವರು ಕೆಳಕ್ಕೆ ಬಿದ್ದಿದ್ದಾರೆ. ಆ್ಯಂಕರ್​ ನೀವು ನಿಜವಾಗಿಯೂ ಸುರಕ್ಷಿತವಾಗಿದ್ದೀರಾ ಎಂದು ಕೇಳಿದ್ದಾರೆ. ಆಗ ಅವರು ತಕ್ಷಣ ಎದ್ದು  ನಿಂತು ನನಗೆ ಕಾರು ಗುದ್ದಿದೆ. ಆದರೆ ನಾನು ಸುರಕ್ಷಿತವಾಗಿ ಇದ್ದೇನೆ ಎಂದು ವರದಿ ಮಾಡುವುದನ್ನು ಮುಂದುವರೆಸಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ. ವಿಡಿಯೋ 3.5 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದ್ದು 28 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ. ವಿಡಿಯೋ ನೋಡಿ ನೆಟ್ಟಿಗರು 2022ರಲ್ಲಿ ದೊರೆತ ಅದ್ಭುತ ವಿಡಿಯೋ ಇದಾಗಿದ್ದು, ​ ರಿಪೋರ್ಟರ್​ ಧೈರ್ಯವನ್ನು​ ನೋಡಿ ನೆಟ್ಟಗರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ:

ಏಕಕಾಲದಲ್ಲಿ 6 ಭಾವಚಿತ್ರಗಳನ್ನು ಬಿಡಿಸಿ ನೆಟ್ಟಿಗರ ಗಮನ ಸೆಳೆದ ಕಲಾವಿದ: ವಿಡಿಯೋ ವೈರಲ್​

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?