AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ ‘ದಿ ಫ್ಯಾಮಿಲಿ ಮ್ಯಾನ್​ 2’ ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ

ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ 'ದಿ ಫ್ಯಾಮಿಲಿ ಮ್ಯಾನ್​ 2' ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ
TV9 Web
| Edited By: |

Updated on:Jun 16, 2021 | 12:30 PM

Share

ಕೊವಿಡ್​ ನಿಯಂತ್ರಣದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಅದೆಷ್ಟೋ ಪ್ರಯತ್ನಗಳು ನಡೆಯುತ್ತಿವೆ. ದೇಶಾದ್ಯಂತ ಪೊಲೀಸ್​ ಇಲಾಖೆ ಸೇರಿ ಸರ್ಕಾರಿ ಇಲಾಖೆಗಳೆಲ್ಲವೂ ಕೂಡಾ ವಿವಿಧ ಆಲೋಚನೆಗಳೊಂದಿಗೆ ಜನರಿಗೆ ಕೊವಿಡ್​ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುತ್ತಲೇ ಬಂದಿದೆ. ಕೊವಿಡ್​-19 ನಿಯಂತ್ರಣಕ್ಕಾಗಿ, ಜನಪ್ರಿಯತೆ ಗಳಿಸಿಕೊಳ್ಳುತ್ತಿರುವ ‘ಫ್ಯಾಮಿನ್​ ಮ್ಯಾನ್​ 2’ ದೃಶ್ಯವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ಈ ಚಿತ್ರದಲ್ಲಿ ಅಭಿನಯಿಸಿದ ಮನೋಜ್​ ಬಾಜ್​ಪಾಯಿ ಅವರ ಶ್ರೀಕಾಂತ್​ ತಿವಾರಿ ಎಂಬ ಪಾತ್ರದ ದೃಶ್ಯವನ್ನು ಕೇಂದ್ರ ಸರ್ಕಾರ ಹಂಚಿಕೊಂಡಿದ್ದು, ಕೊವಿಡ್​-19 ಕುರಿತಾಗಿ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದೆ.

ಸಾಮಾಜಿಕ ಜಾಲತಾಣದ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಕುರಿತಂತೆ ಜನರಿಗೆ ತಿಳಿಹೇಳುವ ಕುರಿತಾಗಿ ಕೇಂದ್ರ ಸರ್ಕಾರ ಟ್ವೀಟ್​ ಮಾಡಿದೆ. ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಶ್ರೀಕಾಂತ್​ ತಿವಾರಿ ಮುಖಗವಸನ್ನು ಧರಿಸಿದ್ದಾರೆ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಲಸಿಕ ಪಡೆದ ಬಳಿಕವೂ ಪ್ರತಿಕ್ರಿಯೆ ಹೀಗಿರಲಿ ಎಂದು ದೃಶ್ಯ ಹೇಳುತ್ತಿದೆ.

ಮೈಕ್ರೋಬ್ಲಾಗಿಂಗ್​ ವೆಬ್​ಸೈಟ್​ನಲ್ಲಿ ಸಚಿವಾಲಯ ಹಂಚಿಕೊಂಡ ಪೋಸ್ಟ್​ ನೋಡಿದ ನೆಟ್ಟಿಗರು ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​-19 ಸೋಂಕಿನ ಕುರಿತಾಗಿ ಜಾಗರೂಕರಾಗಿರಲು ಜನರನ್ನು ಪ್ರೋತ್ಸಾಹಿಸಿದ ಈ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

‘ದಿ ಫ್ಯಾಮಿಲಿ ಮ್ಯಾನ್​ 3’ ಕಥೆ ಬಹಿರಂಗ; ನಿರ್ದೇಶಕರು ಬಾಯ್ಬಿಟ್ಟ ಸೀಕ್ರೆಟ್​ ಇಲ್ಲಿದೆ

Published On - 12:26 pm, Wed, 16 June 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ