AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ ‘ದಿ ಫ್ಯಾಮಿಲಿ ಮ್ಯಾನ್​ 2’ ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ

ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ 'ದಿ ಫ್ಯಾಮಿಲಿ ಮ್ಯಾನ್​ 2' ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ
Follow us
TV9 Web
| Updated By: shruti hegde

Updated on:Jun 16, 2021 | 12:30 PM

ಕೊವಿಡ್​ ನಿಯಂತ್ರಣದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಅದೆಷ್ಟೋ ಪ್ರಯತ್ನಗಳು ನಡೆಯುತ್ತಿವೆ. ದೇಶಾದ್ಯಂತ ಪೊಲೀಸ್​ ಇಲಾಖೆ ಸೇರಿ ಸರ್ಕಾರಿ ಇಲಾಖೆಗಳೆಲ್ಲವೂ ಕೂಡಾ ವಿವಿಧ ಆಲೋಚನೆಗಳೊಂದಿಗೆ ಜನರಿಗೆ ಕೊವಿಡ್​ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುತ್ತಲೇ ಬಂದಿದೆ. ಕೊವಿಡ್​-19 ನಿಯಂತ್ರಣಕ್ಕಾಗಿ, ಜನಪ್ರಿಯತೆ ಗಳಿಸಿಕೊಳ್ಳುತ್ತಿರುವ ‘ಫ್ಯಾಮಿನ್​ ಮ್ಯಾನ್​ 2’ ದೃಶ್ಯವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ಈ ಚಿತ್ರದಲ್ಲಿ ಅಭಿನಯಿಸಿದ ಮನೋಜ್​ ಬಾಜ್​ಪಾಯಿ ಅವರ ಶ್ರೀಕಾಂತ್​ ತಿವಾರಿ ಎಂಬ ಪಾತ್ರದ ದೃಶ್ಯವನ್ನು ಕೇಂದ್ರ ಸರ್ಕಾರ ಹಂಚಿಕೊಂಡಿದ್ದು, ಕೊವಿಡ್​-19 ಕುರಿತಾಗಿ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದೆ.

ಸಾಮಾಜಿಕ ಜಾಲತಾಣದ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಕುರಿತಂತೆ ಜನರಿಗೆ ತಿಳಿಹೇಳುವ ಕುರಿತಾಗಿ ಕೇಂದ್ರ ಸರ್ಕಾರ ಟ್ವೀಟ್​ ಮಾಡಿದೆ. ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಶ್ರೀಕಾಂತ್​ ತಿವಾರಿ ಮುಖಗವಸನ್ನು ಧರಿಸಿದ್ದಾರೆ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಲಸಿಕ ಪಡೆದ ಬಳಿಕವೂ ಪ್ರತಿಕ್ರಿಯೆ ಹೀಗಿರಲಿ ಎಂದು ದೃಶ್ಯ ಹೇಳುತ್ತಿದೆ.

ಮೈಕ್ರೋಬ್ಲಾಗಿಂಗ್​ ವೆಬ್​ಸೈಟ್​ನಲ್ಲಿ ಸಚಿವಾಲಯ ಹಂಚಿಕೊಂಡ ಪೋಸ್ಟ್​ ನೋಡಿದ ನೆಟ್ಟಿಗರು ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​-19 ಸೋಂಕಿನ ಕುರಿತಾಗಿ ಜಾಗರೂಕರಾಗಿರಲು ಜನರನ್ನು ಪ್ರೋತ್ಸಾಹಿಸಿದ ಈ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

‘ದಿ ಫ್ಯಾಮಿಲಿ ಮ್ಯಾನ್​ 3’ ಕಥೆ ಬಹಿರಂಗ; ನಿರ್ದೇಶಕರು ಬಾಯ್ಬಿಟ್ಟ ಸೀಕ್ರೆಟ್​ ಇಲ್ಲಿದೆ

Published On - 12:26 pm, Wed, 16 June 21

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ