AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ ‘ದಿ ಫ್ಯಾಮಿಲಿ ಮ್ಯಾನ್​ 2’ ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ

ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ 'ದಿ ಫ್ಯಾಮಿಲಿ ಮ್ಯಾನ್​ 2' ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ
TV9 Web
| Edited By: |

Updated on:Jun 16, 2021 | 12:30 PM

Share

ಕೊವಿಡ್​ ನಿಯಂತ್ರಣದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಅದೆಷ್ಟೋ ಪ್ರಯತ್ನಗಳು ನಡೆಯುತ್ತಿವೆ. ದೇಶಾದ್ಯಂತ ಪೊಲೀಸ್​ ಇಲಾಖೆ ಸೇರಿ ಸರ್ಕಾರಿ ಇಲಾಖೆಗಳೆಲ್ಲವೂ ಕೂಡಾ ವಿವಿಧ ಆಲೋಚನೆಗಳೊಂದಿಗೆ ಜನರಿಗೆ ಕೊವಿಡ್​ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುತ್ತಲೇ ಬಂದಿದೆ. ಕೊವಿಡ್​-19 ನಿಯಂತ್ರಣಕ್ಕಾಗಿ, ಜನಪ್ರಿಯತೆ ಗಳಿಸಿಕೊಳ್ಳುತ್ತಿರುವ ‘ಫ್ಯಾಮಿನ್​ ಮ್ಯಾನ್​ 2’ ದೃಶ್ಯವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ಈ ಚಿತ್ರದಲ್ಲಿ ಅಭಿನಯಿಸಿದ ಮನೋಜ್​ ಬಾಜ್​ಪಾಯಿ ಅವರ ಶ್ರೀಕಾಂತ್​ ತಿವಾರಿ ಎಂಬ ಪಾತ್ರದ ದೃಶ್ಯವನ್ನು ಕೇಂದ್ರ ಸರ್ಕಾರ ಹಂಚಿಕೊಂಡಿದ್ದು, ಕೊವಿಡ್​-19 ಕುರಿತಾಗಿ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದೆ.

ಸಾಮಾಜಿಕ ಜಾಲತಾಣದ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಕುರಿತಂತೆ ಜನರಿಗೆ ತಿಳಿಹೇಳುವ ಕುರಿತಾಗಿ ಕೇಂದ್ರ ಸರ್ಕಾರ ಟ್ವೀಟ್​ ಮಾಡಿದೆ. ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಶ್ರೀಕಾಂತ್​ ತಿವಾರಿ ಮುಖಗವಸನ್ನು ಧರಿಸಿದ್ದಾರೆ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಲಸಿಕ ಪಡೆದ ಬಳಿಕವೂ ಪ್ರತಿಕ್ರಿಯೆ ಹೀಗಿರಲಿ ಎಂದು ದೃಶ್ಯ ಹೇಳುತ್ತಿದೆ.

ಮೈಕ್ರೋಬ್ಲಾಗಿಂಗ್​ ವೆಬ್​ಸೈಟ್​ನಲ್ಲಿ ಸಚಿವಾಲಯ ಹಂಚಿಕೊಂಡ ಪೋಸ್ಟ್​ ನೋಡಿದ ನೆಟ್ಟಿಗರು ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​-19 ಸೋಂಕಿನ ಕುರಿತಾಗಿ ಜಾಗರೂಕರಾಗಿರಲು ಜನರನ್ನು ಪ್ರೋತ್ಸಾಹಿಸಿದ ಈ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

‘ದಿ ಫ್ಯಾಮಿಲಿ ಮ್ಯಾನ್​ 3’ ಕಥೆ ಬಹಿರಂಗ; ನಿರ್ದೇಶಕರು ಬಾಯ್ಬಿಟ್ಟ ಸೀಕ್ರೆಟ್​ ಇಲ್ಲಿದೆ

Published On - 12:26 pm, Wed, 16 June 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ